Delhi Manoj Tomar: ನಮಾಜ್ ಮಾಡುವವರಿಗೆ ಒದ್ದ ಪೊಲೀಸ್ ಅಮಾನತು: Video
ನವದೆಹಲಿ, ಮಾರ್ಚ್ 09: ರಾಷ್ಟ್ರ ರಾಜಧಾನಿ ದೆಹಲಿಯ ಇಂದರ್ಲೋಕ್ ಪ್ರದೇಶದಲ್ಲಿ ಜನನಿಬಿಡ ರಸ್ತೆಯ ಪಕ್ಕದಲ್ಲೇ ಮುಸ್ಲಿಮರ ಗುಂಪು ನಮಾಜ್ ಮಾಡುತ್ತಿತ್ತು. ಈ ಮುಸ್ಲಿಂ ಪುರುಷರನ್ನು ಪೊಲೀಸ್ ಅಧಿಕಾರಿಯೊಬ್ಬರು ಒದ್ದ ವಿಡಿಯೋ ಶನಿವಾರ ವೈರಲ್ ಆದ ಬೆನ್ನಲ್ಲೆ ಆ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ನಮಾಜ್ ಮಾಡುತ್ತಿದ್ದವರನ್ನು ಪೊಲೀಸ್ ಒದ್ದ ವಿಡಿಯೋ ಹರಿದಾಡುತಿದ್ದಂತೆ ಜನಾಕ್ರೋಶ ವ್ಯಕ್ತವಾಗಿದೆ. ನಮಾಜ್ ಮಾಡಿದ ಪ್ರದೇಶದಲ್ಲಿ ಪೊಲೀಸ್ ಉಸ್ತುವಾರಿಯಾಗಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನೋಜ್ ತೋಮರ್ ಕಾರ್ಯ ನಿರ್ವಹಿಸುತ್ತಿದ್ದರು.

ಒದ್ದಿರುವುದು ವಿಡಿಯೋದಲ್ಲಿ ಸೆರೆ: ವೈರಲ್
ಮಸೀದಿಯು ಅದರ ಸಾಮರ್ಥ್ಯಕ್ಕೆ ತಕ್ಕಂತೆ ತುಂಬಿದ್ದರಿಂದ ಪುರುಷರು ರಸ್ತೆಯ ಮೇಲೆ ನಮಾಜ್ ಮಾಡಿದರು ಎನ್ನಲಾಗಿದೆ. ಈ ವೇಳೆ ರಸ್ತೆ ಪಕ್ಕ ಇಬ್ಬರು ವ್ಯಕ್ತಿಗಳು ನಮಾಜ್ ಮಾಡುವಾಗ ಅಲ್ಲಿಗೆ ಬಂದ ಪೊಲೀಸ್ ಮನೋಜ್ ತೋಮರ್ ಒದೆಯುವುದು ವಿಡಿಯೋದಲ್ಲಿ ರೇಕಾರ್ಡ್ ಆಗಿದೆ. ಈ ವೇಳೆ ಪೋಲೀಸರ ಜೊತೆ ಮಾತನಾಡಲು ಪ್ರಯತ್ನಿಸಿದ ಇತರ ಪುರುಷರನ್ನು ದೂಡಲಾಗಿದೆ.
ಸದ್ಯ ಮನೋಜ್ ತೋಮರ್ ವಿರುದ್ಧ ದೆಹಲಿ ಪೊಲೀಸ್ ಇಲಾಖೆ ಶಿಸ್ತು ಕ್ರಮ ಜರುಗಿಸಿದ್ದು, ಮನೋಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಈ ಕುರಿತು ಖುದ್ದು ಉಪ ಪೊಲೀಸ್ ಆಯುಕ್ತ (ಉತ್ತರ) ಮನೋಜ್ ಮೀನಾ ಮಾಹಿತಿ ಪ್ರಕಟಿಸಿದ್ದಾರೆ.
ನಮಾಜ್ ಸ್ಥಳದಲ್ಲಿ ಪರಿಸ್ಥಿತಿ ಹತೋಟಿ
ಘಟನೆ ಬಳಿಕ ಆ ಪ್ರದೇಶದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ. ಸ್ಥಳೀಯರೊಂದಿಗೆ ಮಾತನಾಡಿದ್ದು, ಮಸೀದಿ ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು. ಪೊಲೀಸರಿಗೆ ಸಹಕರಿಸುವಂತೆ ಕೋರಿದ್ದಾರೆ ಎಂದರು.

ಪೊಲೀಸರು ನಮಾಜ್ಗೆ ಅಡ್ಡಿ ಪಡಿಸಿದ ಬಳಿಕ ಅಲ್ಲಿಯೇ ಇದ್ದ ಕೆಲವರು ತಕ್ಷಣವೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಅವರಲ್ಲಿ ಕೆಲವರು ಪ್ರತಿಭಟನೆ ನಡೆಸಲು ಇಂದರ್ಲೋಕ್ ಮೆಟ್ರೋ ನಿಲ್ದಾಣದ ಕಡೆಗೆ ತೆರಳಿದರು. ಘಟನೆ ಬಳಿಕ ಡಿಸಿಪಿ (ಈಶಾನ್ಯ) ದೆಹಲಿ ಜಾಯ್ ಟಿರ್ಕಿ ಜನರು ಕೋಮು ಸೌಹಾರ್ದತೆಯನ್ನು ಕಾಪಾಡುವಂತೆ ಒತ್ತಾಯಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚಿಸಿದರು. ಅಲ್ಲದೇ ಭದ್ರತೆ ಹೆಚ್ಚಿಸುವಂತೆ ಸಲಹೆ ನೀಡಿದರು.
ಐ ಸ್ಟ್ಯಾಂಡ್ ವಿತ್ ಮನೋಜ್ ತೂಮರ್
ಒಂದು ಕಡೆ ಪೊಲೀಸ್ ಒದಿದ್ದಾರೆ ಎಂದು ಅವರನ್ನು ಅಮಾನತು ಮಾಡಲಾಗಿದೆ. ಮತ್ತೊಂದೆಡೆ ಮನೋಜ್ ತೋಮರ್ ಅವರ ಪರ ಅಭಿಯಾನವೇ ಆರಂಭಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಷ್ಟ್ಯಾಗ್ ಹಾಕಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. #IStandWithManojTomar ಎಂಬ ಹ್ಯಾಷ್ಟ್ಯಾಗ್ ಎಕ್ಸ್ನಲ್ಲಿ ಟ್ರೆಂಡಿಂಗ್ ಮಾಡಲಾಗಿದೆ.
-
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications