ಮಹಿಳೆಗೆ ಮನ ಬಂದಂತೆ ಥಳಿಸಿದ ಪೊಲೀಸ್ ಅಧಿಕಾರಿ ಪುಂಡ ಮಗ ಅರೆಸ್ಟ್
ನವದೆಹಲಿ, ಸೆಪ್ಟೆಂಬರ್ 14: ಯುವತಿಯೊಬ್ಬಳನ್ನು ಹಿಗ್ಗಾ-ಮುಗ್ಗಾ ಥಳಿಸಿದ ದೆಹಲಿ ಪೊಲೀಸ್ ಅಧಿಕಾರಿಯ ಮಗನನ್ನು ಅಂತೂ ಬಂಧಿಸಲಾಗಿದೆ. ತಕ್ಷಣವೇ ಕ್ರಮ ತೆಗೆದುಕೊಳ್ಳಿ ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಆದೇಶ ನೀಡಿದ ನಂತರ ಪೊಲೀಸ್ ಮುಖ್ಯಸ್ಥರು ಕ್ರಮ ತೆಗೆದುಕೊಂಡಿದ್ದಾರೆ.
ರೋಹಿತ್ ಸಿಂಗ್ ತೋಮರ್ ಬಂಧಿತ ಯುವಕ. ಆತನ ತಂದೆ ನಾರ್ಕೋಟಿಕ್ಸ್ ವಿಭಾಗದಲ್ಲಿ ಅಧಿಕಾರಿಯಾಗಿದ್ದಾರೆ. ರೋಹಿತ್ ಹಲ್ಲೆ ಮಾಡುವ ದೃಶ್ಯಗಳನ್ನು ಆತನ ಸ್ನೇಹಿತ ವಿಡಿಯೋ ಮಾಡಿದ್ದ. ಯುವತಿಯ ಜುಟ್ಟು ಹಿಡಿದು ಎಳೆದಾಡಿರುವುದು, ನೆಲಕ್ಕೆ ಜಪ್ಪಿರುವುದು, ಕಪಾಳಕ್ಕೆ ಹೊಡೆದಿರುವುದು, ಕಾಲಿನಿಂದ ಒದ್ದಿರುವುದು, ಕಾಲಿನ ಮೊಣಕಾಲಿನಿಂದ ಒದ್ದಿರುವುದು ಆ ವಿಡಿಯೋದಲ್ಲಿ ಸೆರೆಯಾಗಿತ್ತು.
ವಿಡಿಯೋ ಮಾಡುತ್ತಿದ್ದ ವ್ಯಕ್ತಿ, ರೋಹಿತ್ ಸಾಕು, ನಿಲ್ಲಿಸು ಎಂದಿರುವ ಧ್ವನಿ ಕೂಡ ದಾಖಲಾಗಿದೆ. ಆದರೆ ಚಿತ್ರೀಕರಿಸುತ್ತಿದ್ದ ವ್ಯಕ್ತಿಯಾಗಲೀ ಅಥವಾ ಇನ್ಯಾರೇ ಆಗಲಿ ಯುವತಿ ಮೇಲೆ ಆಗುವ ಹಲ್ಲೆಯನ್ನು ತಡೆಯುವುದಿಲ್ಲ.

ದೆಹಲಿಯ ಉತ್ತಮ್ ನಗರ್ ದಲ್ಲಿರುವ ಕಾಲ್ ಸೆಂಟರ್ ನಲ್ಲಿ ಸೆಪ್ಟೆಂಬರ್ 2ರಂದು ಈ ವಿಡಿಯೋವನ್ನು ಮಾಡಲಾಗಿದೆ ಎಂಬ ಅಂದಾಜಿದೆ. ಆ ನಂತರ ಟ್ವಿಟ್ಟರ್ ನಲ್ಲಿ ಈ ವಿಡಿಯೋ ಶೇರ್ ಆಗಿದೆ. ಆದರೆ ಕೇಂದ್ರ ಗೃಹ ಸಚಿವರು ಮಧ್ಯ ಪ್ರವೇಶಿಸಿದ ನಂತರವೇ ಪೊಲೀಸರು ಆರೋಪಿ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ.
ವಿಡಿಯೋದಲ್ಲಿ ಇರುವ ಯುವತಿ ಶುಕ್ರವಾರದಂದು ಅತ್ಯಾಚಾರದ ದೂರು ದಾಖಲಿಸಿದ್ದಾರೆ. ರೋಹಿತ್ ತನ್ನ ಸ್ನೇಹಿತನ ಕಚೇರಿಗೆ ಕರೆದು, ಅತ್ಯಾಚಾರ ಎಸಗಿದ್ದಾನೆ. ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ ಕಾರಣಕ್ಕೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.
Just shows how what type of upbringing this young man had ! Son of a #delhipolice personnel thrashes a young girl ! @HMOIndia asks @CPDelhi to conduct enquiry about this ! pic.twitter.com/rv1rWEUWUF
— Neeta Sharma (@NEETAS11) 14 September 2018
ಘಟನೆ ನಡೆದ ಹತ್ತು ದಿನಗಳ ನಂತರ ಅಂದರೆ ಗುರುವಾರ ವರದಿಯಾಗಿದೆ. ಆ ವಿಡಿಯೋದಲ್ಲಿ ಇಲ್ಲದ ಯುವತಿ- ದಾಳಿ ನಡೆಸಿದವನ ಭಾವಿ ಪತ್ನಿಯಾಗಬೇಕಿದ್ದವಳು ಎಂದು ಕರೆದುಕೊಂಡವರು ದೂರು ದಾಖಲಿಸಿದ್ದಾರೆ. ನಾನು ಮದುವೆ ಆಗಬೇಕಿದ್ದ ಹುಡುಗ ಯುವತಿಯೊಬ್ಬರನ್ನು ಹಾಗೆ ಹೊಡೆಯುವುದನ್ನು ವಿಡಿಯೋದಲ್ಲಿ ನೋಡಿದ ಮೇಲೆ ಹಾಗೂ ಆತ ತನ್ನದೇ ಸಹೋದ್ಯೋಗಿಯೊಬ್ಬರ ಮೇಲೆ ಹಲ್ಲೆ ಮಾಡುವುದನ್ನು ನೋಡಿದ ಮೇಲೆ ಮದುವೆ ರದ್ದು ಮಾಡಿಕೊಂಡಿದ್ದಾಗಿ ಆಕೆ ಹೇಳಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications