ಬಿಗಿ ಭದ್ರತೆಯಲ್ಲಿ ಕನ್ಹಯ್ಯಾ ಕುಮಾರ್ ಬಿಡುಗಡೆ
ನವದೆಹಲಿ, ಮಾರ್ಚ್, 03: ದೇಶದ್ರೋಹದ ಆರೋಪದ ಮೇಲೆ ಜೈಲು ಸೇರಿದ್ದ ನವದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ನನ್ನು ಗುರುವಾರ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಬುಧವಾರ ಕನ್ಹಯ್ಯಾ ಕುಮಾರ್ ಗೆ ದೆಹಲಿ ಹೈಕೋರ್ಟ್ ಆರು ತಿಂಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿತ್ತು..ಅಲ್ಲದೇ 10 ಸಾವಿರ ರು. ಬಾಂಡ್ ನೀಡುವಂತೆ ತಿಳಿಸಿತ್ತು. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಕನ್ಹಯ್ಯಾ ಕುಮಾರ್ ನನ್ನು ಗುರುವಾರ ಭಾರೀ ಭದ್ರತೆಯಲ್ಲಿ ಬಿಡುಗಡೆ ಮಾಡಲಾಗಿದೆ. [ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]

ಮೊದಲು ಕನ್ಹಯ್ಯಾ ಕುಮಾರ್ ಗೆ ಜಾಮೀನು ನೀಡಲು ದೆಹಲಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ನಮ್ಮ ಬಳಿ ದೇಶದ್ರೋಹದ ಘೋಷಣೆ ಕೂಗಿದ ದಾಖಲೆಗಳಿವೆ ಎಂದು ಹೇಳಿದ್ದರು. ಆದರೆ ದೆಹಲಿ ಸರ್ಕಾರ ಜಾಮೀನು ನೀಡಲು ಅಡ್ಡಿ ಇಲ್ಲ ಎಂದು ವರದಿ ಸಲ್ಲಿಕೆ ಮಾಡಿತ್ತು.
ಈ ಪ್ರಕರಣ ದೇಶದೆಲ್ಲೆಡೆ ಪ್ರತಿಭಟನೆಗೆ ಕಾರಣವಾಗಿತ್ತು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳ ಸರಮಾಲೆ ನಡೆದಿತ್ತು. ಅಲ್ಲದೇ ದೆಹಲಿ ಹೈಕೋರ್ಟ್ ಗೆ ಕನ್ಹಯ್ಯಾ ಕುಮಾರ್ ನನ್ನು ಹಾಜರು ಪಡಿಸಿದಾಗ ವಕೀಲರು ಕನ್ಹಯ್ಯಾ ಕುಮಾರ್ ಮತ್ತು ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದರು. ಈ ಬಗ್ಗೆಯೂ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರೀ ಭದ್ರತೆ ನೀಡಿ ಬಿಡುಗಡೆ ಮಾಡಲಾಗಿದೆ.[ಅಫ್ಜಲ್ ಗುರು ಈತನ ಹೃದಯಕ್ಕೆ ಹತ್ತಿರವಾಗಿದ್ದನಂತೆ!]
ಯಾಕೆ ಬಂಧನಾಗಿತ್ತು?
ಫೆಬ್ರವರಿ 9 ರಂದು ಜವಾಹರಲಾಲ್ ನೆಹರು ವಿವಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಉಗ್ರ ಅಫ್ಜಲ್ ಗುರು ಪರ ಮತ್ತು ಭಾರತದ ವಿರುದ್ಧ ಘೋಷಣೆ ಕೂಗಲಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಈ ಪ್ರಕರಣದ ನಂತರ ದೆಹಲಿ ಪೊಲೀಸರು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯಾ ಕುಮಾರ್ ನನ್ನು ಬಂಧಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications