Delhi Election 2025: ಚುನಾವಣೋತ್ತರ ಸಮೀಕ್ಷೆಯನ್ನ ತಿರಸ್ಕರಿಸಿದ ಎಎಪಿ
ನವದೆಹಲಿ, ಫೆಬ್ರವರಿ 06: ದೆಹಲಿ ಎಕ್ಸಿಟ್ ಪೋಲ್ ಅಚ್ಚರಿಯ ಫಲಿತಾಂಶಗಳು ಪ್ರಕಟವಾಗಿವೆ. ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ನಿನ್ನೆ(ಫೆಬ್ರವರಿ 05) ಪೂರ್ಣಗೊಂಡ ಬೆನ್ನಲ್ಲೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಎಎಪಿ ಗೆ ಬಿಗ್ ಶಾಕ್ ನೀಡಿವೆ.
27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರ ಹಿಡಿಯವ ಸುಳಿವು ನೀಡಿವೆ. ಇನ್ನೊಂದೆಡೆ, ಎರಡು ಅವಧಿಗೆ ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದು ದೆಹಲಿ ಮತದಾರರನ್ನು ಒಲಿಸುವಂತೆ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದ್ದ ಆಮ್ ಆದ್ಮ ಪಾರ್ಟಿಗೆ ಈ ಬಾರಿ ದೊಡ್ಡ ಸಂಕಷ್ಟ ಹೆಚ್ಚಾಗಿದೆ. ಎರಡು ಅವಧಿಗೆ ವಿಪಕ್ಷವೇ ಇಲ್ಲದಂತೆ ಬಹುಮತ ಪಡೆದಿದ್ದ ಆಮ್ ಆದ್ಮ ಪಾರ್ಟಿಗೆ ಈ ಬಾರಿ ಬಿಜೆಪಿಯಿಂದ ಭಾರಿ ಪೈಪೋಟಿ ಎದುರಾಗುವ ಸುಳಿವನ್ನು ದೆಹಲಿಯ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿವೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡ ಬೆನ್ನಲ್ಲೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ (ಎಎಪಿ) ತಿರಸ್ಕರಿಸಿದೆ. ಮತದಾರರು ಐತಿಹಾಸಿಕವಾಗಿ ತಮ್ಮ ಕಾರ್ಯಕ್ಷಮತೆಯನ್ನು ಕಡಿಮೆ ಅಂದಾಜಿಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಭವಿಷ್ಯವಾಣಿಗಳು ಸಾರ್ವಜನಿಕರ ಬದಲಾವಣೆಯ ಬಯಕೆಯನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿಕೊಂಡಿದೆ.
ದೆಹಲಿ 70 ವಿಧಾನಸಭೆ ಕ್ಷೇತ್ರಗಳ ಚುನಾವಣಾ ಮತದಾನ ಬುಧವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ಹೆಚ್ಚಿನ ಸಮೀಕ್ಷೆಗಳು ಆಡಳಿತಾರೂಢ ಎಎಪಿಗಿಂತ ಬಿಜೆಪಿ ಮುನ್ನಡೆ ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿವೆ.
ಬುಧವಾರ ಸಂಜೆ 7 ಗಂಟೆಯವರೆಗೆ ಶೇ. 57.89 ರಷ್ಟು ಮತದಾನ ದಾಖಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್ ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ದೆಹಲಿ ಮುಖ್ಯಮಂತ್ರಿ ಅತಿಶಿ, ಎಎಪಿ ಮುಖ್ಯಸ್ಥೆ ಅರವಿಂದ್ ಕೇಜ್ರಿವಾಲ್, ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ ಚಲಾಯಿಸಿದ್ದಾರೆ.
ಪಿ ಮಾರ್ಕ್ ಸಮೀಕ್ಷೆ ಹೇಳಿದ್ದೇನು?
ದೆಹಲಿ ವಿಧಾನಸಭಾ ಚುನಾವಣೆಯು 70 ಕ್ಷೇತ್ರಗಳಲ್ಲಿ ನಡೆದಿದ್ದು, ಬುಧವಾರ ಮತದಾನ ಕೂಡ ಪೂರ್ಣಗೊಂಡಿದೆ. ದೆಹಲಿ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆಲುವ ಸಾಧಿಸಲಿದೆ ಎಂದು ಪಿ ಮಾರ್ಕ್ ಸಮೀಕ್ಷೆ ಹೇಳಿದೆ. ಬಿಜೆಪಿ ಅಧಿಕ ಸ್ಥಾನ ಪಡೆದುಕೊಂಡರೆ, ಎಎಪಿ ಎರಡ ನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಶೂನ್ಯ ಅಥವಾ ಒಂದು ಕ್ಷೇತ್ರದಲ್ಲಿ ಗೆಲ್ಲಬಹುದು ಎಂದು ಅಂದಾಜಿಸಿದೆ.
ಪಿ ಮಾರ್ಕ್ ಸಮೀಕ್ಷೆ ಯಾರಿಗೆ ಎಷ್ಟು ಸ್ಥಾನ?
* ಒಟ್ಟು ವಿಧಾನಸಭಾ ಸ್ಥಾನಗಳು - 70
* ಬಿಜೆಪಿ - 39 ರಿಂ 49 ಸ್ಥಾನಗಳು
* ಎಎಪಿ - 21 ರಿಂದ 31 ಸ್ಥಾನಗಳು
* ಕಾಂಗ್ರೆಸ್ 0 ರಿಂದ 1 ಸ್ಥಾನಗಳು
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications