India Pakistan Tension: ಸರ್ಕಾರಿ ನೌಕರರ ರಜೆ ರದ್ದು: ಈ ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದೆ ಗಡಿ ಭಾಗದ ರಾಜ್ಯಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ಯಾವುದೇ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ನೌಕರರ ರಜೆಯನ್ನು ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಹರಿಯಾಣ, ಪಂಜಾಬ್, ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹರಿಯಾಣದ ಗುರುಗ್ರಾಮ್‌ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ, ವಿದ್ಯಾರ್ಥಿಗಳ ಸಂಬಂಧಿಕರಿಗೆ ಸಂಸ್ಥೆಗಳು ರಜೆಯನ್ನು ಖಚಿತಪಡಿಸುವ ಸಂದೇಶಗಳನ್ನು ರವಾನಿಸಿವೆ. ಪಂಜಾಬ್‌ನಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Delhi government cancels leaves gurugram closes schools india vs pakistan tension

ಸರ್ಕಾರದ ಸೇವಾ ಇಲಾಖೆಯು ಸಂಜೆ ಹೊರಡಿಸಿದ ಆದೇಶದಲ್ಲಿ, ಚಾಲ್ತಿಯಲ್ಲಿರುವ ಪರಿಸ್ಥಿತಿ ಮತ್ತು ಯಾವುದೇ ತುರ್ತು ಪರಿಸ್ಥಿತಿಗೆ ಸಿದ್ಧತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೆ ದೆಹಲಿ ಸರ್ಕಾರದ ಯಾವುದೇ ಅಧಿಕಾರಿಗೆ ರಜೆ ನೀಡಲಾಗುವುದಿಲ್ಲ ಎಂದು ಹೇಳಿದೆ.

ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಸಿದ್ಧತೆಯನ್ನು ಪರಿಶೀಲಿಸಲು ರಾಷ್ಟ್ರ ರಾಜಧಾನಿಯ ಎಲ್ಲಾ ಜಿಲ್ಲಾ ನ್ಯಾಯಾಧೀಶರು ತಮ್ಮ ಅಧೀನ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ರಾಜಸ್ಥಾನದಲ್ಲಿಯೂ ಮುಂದಿನ ಸೂಚನೆವರೆಗೂ ಶಾಲಾ ಕಾಲೇಜುಗಳನ್ನು ಮುಚ್ಚಲಾಗುತ್ತದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲೂ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತ - ಪಾಕಿಸ್ತಾನದ ನಡುವೆ ದಾಳಿ, ಪ್ರತಿದಾಳಿ

ಗುರುವಾರ ಸಂಜೆ ಜಮ್ಮು, ಪಂಜಾಬ್ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ದಾಳಿ ಮಾಡಲು ಪ್ರಯತ್ನಿಸಿದೆ. ಆದರೆ ಭಾರತದ ರಕ್ಷಣಾ ವ್ಯವಸ್ಥೆ ಈ ದಾಳಿಯನ್ನು ವಿಫಲಗೊಳಿಸಿದೆ. ಡ್ರೋನ್ ದಾಳಿ ಬೆನ್ನಲ್ಲೇ ಬ್ಲಾಕೌಟ್, ಪೀಡಿತ ನಗರಗಳಲ್ಲಿ ವಾಯುದಾಳಿ ಸೈರನ್‌ಗಳನ್ನು ಮೊಳಗಿಸಲಾಯಿತು. ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ.

ಗುರುವಾರ ಸಂಜೆ ಜಮ್ಮುವಿನ ಕೆಲವು ಭಾಗಗಳಲ್ಲಿ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನಿ ಡ್ರೋನ್ ದಾಳಿಯನ್ನು ವಿಫಲಗೊಳಿಸಿತು. ಪಂಜಾಬ್‌ನ ಕೆಲವು ಪ್ರದೇಶಗಳಲ್ಲಿ ಮತ್ತು ರಾಜಸ್ಥಾನದ ಸೂಕ್ಷ್ಮ ಪ್ರದೇಶಗಳಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬಂದಿತು. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ಲಾಮಾಬಾದ್‌ನಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನವದೆಹಲಿ ನಡೆಸಿದ 'ಆಪರೇಷನ್ ಸಿಂಧೂರ್' ಮಿಲಿಟರಿ ದಾಳಿಯ ಒಂದು ದಿನದ ನಂತರ ಪಾಕಿಸ್ತಾನ ದಾಳಿಗೆ ಮುಂದಾಗಿದೆ.

ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಕ್ಕೆ ಪ್ರತಿಯಾಗಿ, ಭಾರತ ಬುಧವಾರ 'ಆಪರೇಷನ್ ಸಿಂಧೂರ' ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಮಿಲಿಟರಿ ದಾಳಿಗಳನ್ನು ನಡೆಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+