ಜಾಕಿರ್ ನಾಯಕ್ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಕಳೆದ ವರ್ಷ ನವೆಂಬರ್ ನಲ್ಲಿ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ (ಐಆರ್ ಎಫ್) ವಿರುದ್ಧ ನಿಷೇಧ ಹೇರಿದ್ದ ಕೇಂದ್ರ ಸರ್ಕಾರ; ಸರ್ಕಾರದ ಆದೇಶದ ಪ್ರತಿಯಲ್ಲಿ ನಿರ್ದಿಷ್ಟ ಕಾರಣ ಹೇಳಿಲ್ಲವೆಂದು ನ್ಯಾಯಾಲಯದಲ್ಲಿ ಸಂಘಟನೆ ಹೆಸರಿನಲ್ಲಿ ದೂರು ಸಲ್ಲಿಸಿದ್ದ
ನವದೆಹಲಿ, ಮಾರ್ಚ್ 16: ತಮ್ಮ ಸಂಘಟನೆಯಾದ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ನನ್ನು (ಐಆರ್ ಎಫ್) ನಿಷೇಧಿಸಿದ್ದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಇಸ್ಲಾಂ ಧರ್ಮ ಪ್ರಚಾರಕ ಜಾಕಿರ್ ನಾಯಕ್ ಗೆ ಹಿನ್ನಡೆಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ತೀರ್ಪು ನೀಡಿರುವ ಹೈಕೋರ್ಟ್, ''ಐಆರ್ ಎಫ್ ಸಂಘಟನೆಯು ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂಥ ಕೆಲಸಗಳನ್ನು ಮಾಡುತ್ತಿರುವ ಬಗ್ಗೆ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ '' ಎಂದಿದೆ.[ಮುಸ್ಲಿಂ ಯುವತಿಯ ಬಹಿರಂಗ ಹಾಡುಗಾರಿಕೆ ವಿರುದ್ಧ ಫತ್ವಾ]

ಅಲ್ಲದೆ, ತನ್ನಲ್ಲಿರುವ ಸಾಕ್ಷ್ಯಾಧಾರಗಳನ್ನು ಆಧರಿಸಿಯೇ, ''ಕೇಂದ್ರ ಸರ್ಕಾರವು ಈ ಸಂಘಟನೆಯನ್ನು ನಿಷೇಧಿಸಿದೆ ಭಾರತದ ಐಕ್ಯತೆ ಹಾಗೂ ಭದ್ರತೆಯ ದೃಷ್ಟಿಯಿಂದ ಐಆರ್ ಎಫ್ ಸಂಘಟನೆಯನ್ನು ನಿಷೇಧಿಸಿರುವುದು ಸರಿಯಾಗಿದೆ'' ಎಂದು ಖಡಾಖಂಡಿತವಾಗಿ ಹೇಳಿದೆ.[ಸುಹಾನಾ ಸೈಯದ್ ಭಕ್ತಿ ಗೀತೆ ವಿವಾದ]
ಕಳೆದ ವರ್ಷ ನವೆಂಬರ್ 17ರಂದು ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯು ಐಆರ್ ಎಫ್ ಮೇಲೆ ತಾತ್ಕಾಲಿಕ ನಿಷೇಧ ಹೇರಿ ಆದೇಶ ಜಾರಿಗೊಳಿಸಿತ್ತು. ಅಲ್ಲದೆ, ಆದೇಶ ಪ್ರತಿಯಲ್ಲಿ ಐಆರ್ ಎಫ್ ಸಂಘಟನೆಯು, ಭಾರತದ ಭದ್ರತೆಗೆ ಧಕ್ಕೆಯಾಗುವ ನಿಟ್ಟಿನಲ್ಲಿ ಪ್ರಚೋದಿಸುತ್ತಿದೆ. ಹಾಗಾಗಿ, ಸಂಘಟನೆಯ ಮೇಲೆ ನಿಷೇಧ ಹೇರಲಾಗಿದೆ ಎಂದೂ ಸ್ಪಷ್ಟವಾಗಿ ಹೇಳಿತ್ತು.
ಆದರೆ, ಸರ್ಕಾರದ ನಿರ್ಧಾರದ ವಿರುದ್ಧ ಐಆರ್ ಎಫ್ ಹೆಸರಿನಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದ ಜಾಕಿರ್ ಹುಸೇನ್, ನಿಷೇಧದ ಆದೇಶವಿರುವ ಪ್ರತಿಯಲ್ಲಿ ನಿಷೇಧದ ಹಿಂದಿನ ಕಾರಣವನ್ನು ಸ್ಪಷ್ಟವಾಗಿ ತಿಳಿಸಿಲ್ಲ ಎಂದು ಅನೇರವಾಗಿ ವಾದಿಸಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications