ಮಾನಹಾನಿ: ಅರ್ನಬ್, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ನೋಟಿಸ್
ನವದೆಹಲಿ, ಮೇ 29 : ಕಾಂಗ್ರೆಸ್ ಸಂಸದ ಶಶಿ ತರೂರ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅರ್ನಬ್ ಗೋಸ್ವಾಮಿ ಹಾಗೂ ಅವರ ರಿಪಬ್ಲಿಕ್ ಟಿವಿಗೆ ನೋಟಿಸ್ ಜಾರಿ ಮಾಡಿರುವ ದೆಹಲಿ ಹೈಕೋರ್ಟ್, ಆಗಸ್ಟ್ 16ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಶಶಿ ತರೂರ್ ಅವರು ತಮ್ಮ ಪತ್ನಿ ಸುನಂದಾ ಪುಷ್ಕರ್ ಸಾವಿನ ಕುರಿತಾದ ಸುದ್ದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಅರ್ನಬ್ ಗೋಸ್ವಾಮಿ ಹಾಗೂ ಅವರ ರಿಪಬ್ಲಿಕ್ ಟಿವಿ ವಿರುದ್ಧ ಸಿವಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.[ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು: ರಿಪಬ್ಲಿಕ್ ಟಿವಿ ಸಿಡಿಸಿದ ಬಾಂಬ್]

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮನಮೋಹನ್ ಅವರು, ನೀವು ನಿಮ್ಮ ವಾಕ್ಚಾತುರ್ಯವನ್ನು ತೋರಿಸಬಹುದು. ನಿಮ್ಮ ಕಥೆಯನ್ನು ಪ್ರಕಟಿಸಬಹದು. ವಾಸ್ತಾಂಶಗಳನ್ನು ನೀವು ಪ್ರಕಟಿಸಬಹುದು.
ಆದರೆ, ನೇರವಾಗಿ ಹೆಸರುಗಳನ್ನು ಪ್ರಸ್ತಾಪಿಸುವಂತಿಲ್ಲ ಎಂದು ಹೇಳಿ ಅರ್ನಬ್ ಗೋಸ್ವಾಮಿ ಹಾಗೂ ಅವರ ಟಿವಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಆಗಸ್ಟ್ 16ಕ್ಕೆ ಮುಂದೂಡಿದ್ದಾರೆ.
ಮೇ 8 ರಿಂದ 13ರವರೆಗೆ ರಿಪಬ್ಲಿಕ್ ಚಾನೆಲ್ನಲ್ಲಿ ಸುನಂದಾ ಪುಷ್ಕರ್ ಸಾವಿನ ಕುರಿತಾದ ವರದಿ ಬಿತ್ತರಿಸಲಾಗಿತ್ತು. ಈ ವೇಳೆ ತಮ್ಮ ಘನತೆಗೆ ಧಕ್ಕೆ ಬರುವ ರೀತಿಯಲ್ಲಿ ಟೀಕೆಗಳನ್ನು ಮಾಡಲಾಗಿದೆ ಎಂದು ಆರೋಪಿಸಿ ತರೂರ್, ಅರ್ನಬ್ ಗೋಸ್ವಾಮಿ, ರಿಪಬ್ಲಿಕ್ ನ್ಯೂಸ್ ಚಾನೆಲ್ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಸಿವಿಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು
ಅಲ್ಲದೇ, ತಮ್ಮ ಘನತೆಗೆ ಧಕ್ಕೆ ತಂದ ಕಾರಣ 2 ಕೋಟಿ ರು. ನಷ್ಟ ಪರಿಹಾರ ತುಂಬಬೇಕೆಂದು ಶಶಿ ತರೂರ್ ಒತ್ತಾಯಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications