ಬಡ ಎಚ್ಐವಿ ರೋಗಿಗಳಿಗೆ ಉಚಿತ ಆಹಾರ, ಚಿಕಿತ್ಸೆ ನೀಡಲು ದೆಹಲಿ ಹೈಕೋರ್ಟ್ ಆದೇಶ
ನವದೆಹಲಿ, ಜ. 03: ಬಡತನ ರೇಖೆಗಿಂತ ಕೆಳಗಿರುವ ಎಚ್ಐವಿ ಪೀಡಿತ ವ್ಯಕ್ತಿಗಳಿಗೆ ಉಚಿತ ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುವಂತೆ ದೆಹಲಿ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಎಚ್ಐವಿ ಪೀಡಿತ ರೋಗಿಗಳ ಕುಂದುಕೊರತೆಗಳ ಬಗೆಗಿನ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೆಹಲಿ ಹೈಕೋರ್ಟ್ ಸ್ಥಳೀಯ ಸರ್ಕಾರಕ್ಕೆ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ಪೀಠವು ಎಚ್ಐವಿ ಪಾಸಿಟಿವ್ ರೋಗಿಗಳಿಗೆ ನೆರವು ಮತ್ತು ಸಹಾಯವನ್ನು ಒದಗಿಸಲು ದೆಹಲಿ ಸರ್ಕಾರವು ಕೈಗೆಟುಕುವ ದರದಲ್ಲಿ ಚಿಕಿತ್ಸೆ ಸೇರಿದಂತೆ ಹಲವಾರು ಪುನರ್ವಸತಿ ಯೋಜನೆಗಳು ಮತ್ತು ಕ್ರಮಗಳನ್ನು ಜಾರಿಗೆ ತಂದಿದೆ ಎಂಬುದನ್ನು ಗಮನಿಸಿದೆ ಎಂದು ತಿಳಿಸಿದೆ.

ದೆಹಲಿ ಸರ್ಕಾರವು ಏಡ್ಸ್ (ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯಿದೆ, 2017 ರ ಅಡಿಯಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದಿರುವ ನ್ಯಾಯಪೀಠವು, ಬಡತನ ರೇಖೆಗಿಂತ ಕೆಳಗಿರುವ ಸೋಂಕಿತರಿಗೆ ಉಚಿತ ಆಹಾರ ಮತ್ತು ಚಿಕಿತ್ಸೆ ನೀಡಬೇಕು ಎಂದಿದೆ.
"2017 ರ ಕಾಯಿದೆಯ ಶಾಸನಬದ್ಧ ನಿಬಂಧನೆಗಳ ಅಡಿಯಲ್ಲಿ ಸರ್ಕಾರ ಕಟ್ಟುನಿಟ್ಟಾದ ಕ್ರಮಗಳನ್ನು ತರಗರದುಕೊಳ್ಳುತ್ತಿದೆ ಎಂಬುದು ಹೇರಳವಾಗಿ ಸ್ಪಷ್ಟವಾಗಿದೆ. ಇದಲ್ಲದೆ, ಎಚ್ಐವಿ, ಏಡ್ಸ್ ಪೀಡಿತ ವ್ಯಕ್ತಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ. ಹಾಗೆ ಮಾಡಲು ಹಣಕಾಸಿನ ಸಾಮರ್ಥ್ಯ ಕೂಡ ಇದೆ" ಎಂದು ಹೈಕೋರ್ಟ್ ಪೀಠವು ಆದೇಶದಲ್ಲಿ ತಿಳಿಸಿದೆ.
" ಜೊತೆಗೆ 2017 ರ ಕಾಯಿದೆಯಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಎಚ್ಐವಿ ಪಾಸಿಟಿವ್ ವ್ಯಕ್ತಿಗಳಿಗೆ ಉಚಿತ ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ಈ ಸೋಂಕಿತರು ಬಡತನ ರೇಖೆಗಿಂತ ಕೆಳಗಿರುವ ಕಾರಣ ಅವರಿಗೆ ಆಹಾರ ಮತ್ತು ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ" ಎಂದು ಕಾಳಜಿ ವ್ಯಕ್ತಪಡಿಸಿದೆ.
ಎಚ್ಐವಿ, ಏಡ್ಸ್ ಸೋಂಕಿಗೆ ಒಳಗಾಗಿ ಬಳಲುತ್ತಿರುವವರಿಗೆ ವಸತಿ, ಆಹಾರ, ವೈದ್ಯಕೀಯ ನೆರವು ಇತ್ಯಾದಿಗಳನ್ನು ಒದಗಿಸಲು ದೆಹಲಿ ಸರ್ಕಾರ ಮತ್ತು ಕೇಂದ್ರಕ್ಕೆ ನಿರ್ದೇಶನ ನಿಡುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಲೆ ಪೀಠ ಈ ಆದೇಶ ನೀಡಿದೆ.
ಕೇಂದ್ರದ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ತಾಂತ್ರಿಕ ಮತ್ತು ಆರ್ಥಿಕ ಬೆಂಬಲದ ಅಡಿಯಲ್ಲಿ ದೆಹಲಿ ರಾಜ್ಯ ಏಡ್ಸ್ ಸೊಸೈಟಿಯು 1998 ರಿಂದ ರಾಜಧಾನಿಯಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ ಎಂದು ದೆಹಲಿ ಸರ್ಕಾರವು ಉತ್ತರ ಸಲ್ಲಿಸಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications