5 ಜಿ ನೆಟ್ವರ್ಕ್: ಜೂಹಿ ಅರ್ಜಿ ವಜಾ, 20 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ನವದೆಹಲಿ, ಜೂ. 04: 5 ಜಿ ನೆಟ್ವರ್ಕ್ ಮಾನವರು ಮತ್ತು ಪರಿಸರದ ಮೇಲೆ ಬೀರುವ ಪ್ರಭಾವದ ವಿರುದ್ದ ನಟಿ ಜೂಹಿ ಚಾವ್ಲಾ ಸಲ್ಲಿಸಿದ್ದ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, 20 ಲಕ್ಷ ರೂ. ದಂಡ ವಿಧಿಸಿದೆ. ಅಷ್ಟೇ ಅಲ್ಲದೇ ನಟಿ ಈ ಅರ್ಜಿಯನ್ನು ಬರೀ ಮಾಧ್ಯಮದಲ್ಲಿ ಪ್ರಚಾರಗಿಟ್ಟಿಸಿಕೊಳ್ಳುವ ಉದ್ದೇಶದಿಂದ ಸಲ್ಲಿಸಿದ್ದಾರೆ ಎಂದು ಕೋರ್ಟ್ ಆರೋಪಿಸಿದೆ.
ದೇಶದಲ್ಲಿ 5 ಜಿ ವೈರ್ಲೆಸ್ ನೆಟ್ವರ್ಕ್ಗಳನ್ನು ಸ್ಥಾಪಿಸುವುದರ ವಿರುದ್ಧ ನಟಿ ಪರಿಸರವಾದಿ ಜೂಹಿ ಚಾವ್ಲಾ ಸೋಮವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವಿಕಿರಣಗಳು ಮಾನವರು, ಪ್ರಾಣಿಗಳು, ಗಿಡ ಮರಗಳಿಗೆ ಮೇಲೆ ಪರಿಣಾಮ ಉಂಟು ಮಾಡುತ್ತದೆ ಎಂದು ಪ್ರತಿಪಾದಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ಜೂನ್ 2 ರ ಬುಧವಾರ ನಡೆಸಿದ್ದ ಹೈಕೋರ್ಟ್, ವರ್ಚುವಲ್ ವಿಚಾರಣೆ ಸಂದರ್ಭ ನಡೆದ ಕೆಲವು ಪ್ರಹಸನಗಳಿಗೆ ಸಂಬಂಧಿಸಿ ಜೂಹಿ ಚಾವ್ಲಾರ ವಿರುದ್ದ ಗರಂ ಆಗಿತ್ತು. ವಿಚಾರಣೆಗೂ ಮುನ್ನ ನಟಿ ಜೂಹಿ ಚಾವ್ಲಾಗೆ ನೀಡಲಾಗಿದ್ದ ವರ್ಚುವಲ್ ವಿಚಾರಣೆಯ ಲಿಂಕ್ ಅನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಬುಧವಾರ ವಿಚಾರಣೆಯ ಸಂದರ್ಭ ಕೆಲ ಅಪರಿಚಿತ ಸಂದರ್ಶಕರು ವಿಚಾರಣೆ ವೇಳೆ ಜೂಹಿ ಚಾವ್ಲಾ ನಟನೆಯ ಸಿನೆಮಾಗಳ ಹಾಡು ಹಾಡುವ ಮೂಲಕ ವಿಚಾರಣೆಗೆ ಅಡೆತಡೆ ಉಂಟು ಮಾಡಿದ್ದರು. ಈ ಬೆನ್ನಲ್ಲೇ ನ್ಯಾಯಾಲಯವು ವಿಚಾರಣೆ ವೇಳೆ ಹಾಡು ಹಾಡಿದವರನ್ನು ಪತ್ತೆ ಹಚ್ಚಿ ನ್ಯಾಯಾಂಗ ನಿಂದನೆ ದೂರು ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದರು.

''ಹಾಗೆಯೇ ಈ ಅರ್ಜಿ ವಿಚಾರಣೆ ನಡೆಸಿ, ಅರ್ಜಿಯು ದೋಷಯುಕ್ತವಾಗಿದೆ ಮತ್ತು ಮಾಧ್ಯಮ ಪ್ರಚಾರಕ್ಕಾಗಿ ಮಾಡಲಾಗಿದೆ. ಜೂಹಿ ಹಾಗೂ ಮತ್ತಿತರರ ಫಿರ್ಯಾದಿದಾರರಿಗೆ ತಾವು ಮಾಡುತ್ತಿರುವ ಆರೋಪದ ಬಗ್ಗೆ ಯಾವುದೇ ಜ್ಞಾನವಿಲ್ಲ. ಯಾವುದೇ ಪರಿಶೀಲನೆ ಇಲ್ಲದೆ ಹೇಗೆ ದಾವೆ ಹೂಡಲಾಗಿದೆ'' ಎಂದು ಪ್ರಶ್ನಿಸಿ, ಆದೇಶವನ್ನು ಕಾಯ್ದಿರಿಸಿತ್ತು.
ಶುಕ್ರವಾರ ನಡೆಸಿದ ಈ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್, 20 ಲಕ್ಷ ರೂ. ದಂಡ ವಿಧಿಸಿದೆ. ಹಾಗೆಯೇ ''ಈ ಅರ್ಜಿ ಅನಗತ್ಯ ಮತ್ತು ನಿಷ್ಪ್ರಯೋಜಕವಾಗಿದೆ. ಫಿರ್ಯಾದಿದಾರರಿಗೆ ಯಾವುದೇ ಜ್ಞಾನವಿಲ್ಲ. ಫಿರ್ಯಾದಿದಾರರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಚಾರಣೆಯ ಲಿಂಕ್ ಅನ್ನು ಮೊದಲೇ ಹಂಚಿಕೊಂಡಿದ್ದಾರೆ. ಬರೀ ಮಾಧ್ಯಮ ಪ್ರಚಾರಕ್ಕಾಗಿ ಮೊಕದ್ದಮೆ ಹೂಡಿದ್ದಾರೆ'' ಎಂದು ಹೇಳಿದೆ.
(ಒನ್ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications