Arvind Kejriwal: ಕೇಜ್ರಿವಾಲ್ಗೆ ಹೈಕೋರ್ಟ್ ಬಿಗ್ ಶಾಕ್, ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ
ನವದೆಹಲಿ, ಜೂನ್ 25: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆಗೆ ಆರೋಪ ಹೊತ್ತು ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಿಡುಗಡೆ ಭಾಗ್ಯ ನೀಡಿಲ್ಲ. ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಕೇಜ್ರಿವಾಲ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ಆರೋಪಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡದಂತೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ಇಡಿ ಮನವಿ ಪುರಸ್ಕರಿಸುವ ಮೂಲಕ ಅರವಿಂದ್ ಕೇಜ್ರಿವಾಲ್ಗೆ ಶಾಕ್ ನೀಡಿದೆ.

ಪ್ರಕರಣ ಸಂಬಂಧ ಟ್ರಯಲ್ ಕೋರ್ಟ್ ಜೂನ್ 20 ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಆಗ ದೆಹಲಿ ಸಿಎಂ ಪ್ರಕರಣದಿಂದ ತಕ್ಕ ಮಟ್ಟಿನ ನಿರಾಳತೆ ಅನುಭವಿಸಿದ್ದರು. ಆದರೆ ಇದು ಹೆಚ್ಚು ದಿನ ಉಳಿಯಲಿಲ್ಲ. ಏಕೆಂದರೆ ಟ್ರಯಲ್ ಕೋರ್ಟ್ ತೀರ್ಪು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಅರ್ಜಿ ಮೇಲ್ಮನವಿ ಸಲ್ಲಿಸಿತ್ತು.
ಜೂನ್ 20ರ ಜಾಮೀನು ಆದೇಶಕ್ಕೆ ತಡೆ
ಇದೀಗ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಾದ ವಿವಾದ ಆಲಿಸಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತು. ಇಡಿ ಮನವಿಯನ್ನು ಪುರಸ್ಕರಿಸಿತ್ತು. ನ್ಯಾಯಾಧೀಶರಾದ ಸುಧೀರ್ ಕುಮಾರ್ ಜೈನ್ ಅವರಿದ್ದ ಪೀಠವು ಜೂನ್ 20 ರಂದು ನೀಡಿದ್ದ ಜಾಮೀನು ಮಂಜೂರು ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಕರಣದಿಂದ ಷರತ್ತು ಬದ್ಧ ಜಾಮೀನು ಪಡೆದಿದ್ದ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಗಿದ್ದರು. ನಂತರ ಜೂನ್ 2ರಂದು ಮತ್ತೆ ಕೋರ್ಟ್ ನಿರ್ದೇಶನದಂತೆ ಜೈಲು ಸೇರಿದರು. ಈ ಮಧ್ಯೆ ಅವರು ಜಾಮೀನಿಗೆ ಒಂದಷ್ಟು ಕಸರತ್ತು ನಡೆಸಿದ್ದರು.
ಅದರ ಫಲವಾಗಿ ಜೂನ್ 20 ರಂದು ಟ್ರಯಲ್ ಕೋರ್ಟ್ ಕೇಜ್ರಿವಾಲರ ಮನವಿ ಪುರಸ್ಕರಿಸಿ ಜಾಮೀನು ನೀಡಿತ್ತು. ಆದರೆ ಇಂದು ಆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ತನಿಖಾಧಿಕಾರಿಗಳಿಗೆ ಮನ್ನಣೆ ಸಿಕ್ಕಂತಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications