ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ಹಯ್ಯಾ ಕುಮಾರ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು

|
Google Oneindia Kannada News

ನವದೆಹಲಿ ಮಾರ್ಚ್. 02: ದೇಶದ್ರೋಹದ ಆರೋಪದಡಿ ಬಂಧನವಾಗಿದ್ದ ಜವಾಹರಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯಾ ಕುಮಾರ್ ಗೆ ದೆಹಲಿ ಹೈಕೋರ್ಟ್ ಅಂತಿಮವಾಗಿ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ.

ಕನ್ಹಯ್ಯಾ ಕುಮಾರ್ ಗೆ ದೆಹಲಿ ಹೈಕೋರ್ಟ್ ಆರು ತಿಂಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ. ಅಲ್ಲದೇ 10 ಸಾವಿರ ರು. ಬಾಂಡ್ ನೀಡುವಂತೆ ತಿಳಿಸಿದೆ.[ಬೇಲ್ ಕೇಳಿದ ಕನ್ಹಯ್ಯಾನನ್ನು ವಾಪಸ್ ಕಳಿಸಿದ್ದ ಸುಪ್ರೀಂಕೋರ್ಟ್]

Kanhaiya Kumar

ಮೊದಲು ಕನ್ಹಯ್ಯಾ ಕುಮಾರ್ ಗೆ ಜಾಮೀನು ನೀಡಲು ದೆಹಲಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ನಮ್ಮ ಬಳಿ ದೇಶದ್ರೋಹದ ಘೋಷಣೆ ಕೂಗಿದ ದಾಖಲೆಗಳಿವೆ ಎಂದು ಹೇಳಿದ್ದರು. ಆದರೆ ದೆಹಲಿ ಸರ್ಕಾರ ಜಾಮೀನು ನೀಡಲು ಅಡ್ಡಿ ಇಲ್ಲ ಎಂದು ವರದಿ ಸಲ್ಲಿಕೆ ಮಾಡಿತ್ತು.[ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]

ಎರಡು ವಾರದಿಂದ ಕನ್ಹಯ್ಯಾ ಕುಮಾರ್ ತಿಹಾರ್ ಜೈಲಿನಲ್ಲಿದ್ದರು. ಜಾಮೀನು ಅರ್ಜಿಯನ್ನು ಸುಪ್ರೀಂ ಗೂ ಹಿಂದೆ ಸಲ್ಲಿಕೆ ಮಾಡಲಾಗಿತ್ತು. ಆದರೆ ಸುಪ್ರೀಂ ಅರ್ಜಿಯನ್ನು ಕೆಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು.

ಯಾಕೆ ಬಂಧನಾಗಿತ್ತು?
ಫೆಬ್ರವರಿ 9 ರಂದು ಜವಾಹರಲಾಲ್ ನೆಹರು ವಿವಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಉಗ್ರ ಅಫ್ಜಲ್ ಗುರು ಪರ ಮತ್ತು ಭಾರತದ ವಿರುದ್ಧ ಘೋಷಣೆ ಕೂಗಲಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಈ ಪ್ರಕರಣದ ನಂತರ ದೆಹಲಿ ಪೊಲೀಸರು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯಾ ಕುಮಾರ್ ನನ್ನು ಬಂಧಿಸಿದ್ದರು.

English summary
The Delhi High Court today granted bail to JNU student leader Kanaiahya Kumar. Justice Prathibha Rani who heard the bail plea filed by Kumar granted interim bail for a period of six months. The court also asked him to furnish a bail bond of Rs 10,000 and cooperate with the investigation. Kumar was arrested by the Delhi police on sedition charges. He was accused of raising anti national slogans at an event held at the JNU on February 9. The event was held to commemorate the death anniversary of Afzal Guru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X