Delhi hit and run case: ಅಂಜಲಿಯ ಸ್ನೇಹಿತೆ ನಿಧಿ ಬಗ್ಗೆ ಹೊರಬಿದ್ದ ಅಘಾತಕಾರಿ ಸತ್ಯ
ನವದೆಹಲಿ ಜನವರಿ 7: ದೆಹಲಿಯಲ್ಲಿ ಹೊಸ ವರ್ಷದ ರಾತ್ರಿ ಸಂಭವಿಸಿದ ನೋವಿನ ಅಪಘಾತದ ಬಗ್ಗೆ ಪೊಲೀಸರಿಗೆ ಇದುವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಾಗಿಲ್ಲ. ಕಾಂಜಾವಾಲಾ ಅಪಘಾತದಲ್ಲಿ ಅಂಜಲಿ ಸಾವಿನ ಪ್ರಕರಣದಲ್ಲಿ ಒಂದರ ಹಿಂದೆ ಒಂದರಂತೆ ಹಲವು ವಿಚಾರಗಳು ಬಹಿರಂಗಗೊಂಡಿವೆ. ಇದೇ ವೇಳೆ ಅಂಜಲಿಯ ಸ್ನೇಹಿತೆ ನಿಧಿ ಬಗ್ಗೆ ಆಘಾತಕಾರಿ ಸತ್ಯವೊಂದು ಹೊರಬಿದ್ದಿದೆ. ಡ್ರಗ್ಸ್ ಹೊಂದಿದ್ದ ಪ್ರಕರಣದಲ್ಲಿ ನಿಧಿಯನ್ನು ಬಂಧಿಸಲಾಗಿದೆ ಎನ್ನಲಾಗಿತ್ತು ಎನ್ನುವ ವಿಚಾರ ಬಹಿರಂಗಗೊಂಡಿದೆ.
ಕಂಜಾವಾಲಾ ಪ್ರಕರಣದ ಪ್ರತ್ಯಕ್ಷದರ್ಶಿಯಾಗಿರುವ ನಿಧಿ ಅವರನ್ನು 2020 ರಲ್ಲಿ ಆಗ್ರಾದಲ್ಲಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್ಡಿಪಿಸಿ) ಕಾಯ್ದೆಯಡಿ ಬಂಧಿಸಲಾಗಿತ್ತು ಎಂಬ ವಿಚಾರ ಬಹಿರಂಗಗೊಂಡಿದೆ. ತೆಲಂಗಾಣದಿಂದ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ಆಗ್ರಾ ರೈಲು ನಿಲ್ದಾಣದಲ್ಲಿ ನಿಧಿಯನ್ನು ಬಂಧಿಸಲಾಗಿತ್ತು. ಅವರನ್ನು ಡಿಸೆಂಬರ್ 6, 2020 ರಂದು ಬಂಧಿಸಲಾಯಿತು. ನಿಧಿ ಜೊತೆಗೆ ಸಮೀರ್ ಮತ್ತು ರವಿ ಎಂಬ ಇನ್ನಿಬ್ಬರನ್ನು ಬಂಧಿಸಲಾಗಿತ್ತು. ಇವರು ಜಾಮೀನಿನ ಮೇಲೆ ಹೊರಗಿದ್ದಾರೆ.
ವಾಸ್ತವವಾಗಿ ಜನವರಿ 1, 2023 ರ ಮುಂಜಾನೆ ದೆಹಲಿಯ ಕಾಂಜಾವಾಲಾ ಪ್ರದೇಶದಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ ಸ್ಕೂಟಿಯಲ್ಲಿದ್ದ ಅಂಜಲಿ ಸಾವನ್ನಪ್ಪಿದ್ದಾರೆ. ಡಿಕ್ಕಿ ಹೊಡೆದ ರಬಸಕ್ಕೆ ಅಂಜಲಿ ಕಾರಿನ ಚಕ್ರಕ್ಕೆ ಸಿಕ್ಕಿಕೊಂಡಿದ್ದಾರೆ. ಈ ವೇಳೆ ಅವರನ್ನು ಸುಮಾರು 12 ಕಿಮೀ ವರೆಗೆ ಕಾರು ಎಳೆದೊಯ್ದಿದೆ. ನಂತರ ಅವರು ಸಾವನ್ನಪ್ಪಿದ್ದಾರೆ. ಅಪಘಾತವಾದ ಮೂರು ದಿನಗಳ ನಂತರ ನಿಧಿ ಮಾಧ್ಯಮದ ಮುಂದೆ ಬಂದು ಹಲವು ಆರೋಪಗಳನ್ನು ಮಾಡಿದ್ದಾಳೆ. ಸದ್ಯ ದೆಹಲಿ ಪೊಲೀಸರು ನಿಧಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಡಿಕ್ಕಿಯ ನಂತರ ತಾನು ಸ್ಕೂಟಿಯಿಂದ ಕೆಳಗೆ ಬಿದ್ದೆ ಎಂದು ಆರಂಭದಲ್ಲಿ ನಿಧಿ ಹೇಳಿಕೊಂಡಳು ಮತ್ತು ತಾನು ಭಯಗೊಂಡಿದ್ದರಿಂದ ಅಪಘಾತ ಸ್ಥಳದಿಂದ ಓಡಿಹೋಗಿರುವುದಾಗಿ ಹೇಳಿಕೊಂಡಿದ್ದಾಳೆ. ಡಿಸೆಂಬರ್ 31 ರ ರಾತ್ರಿ ಅಂಜಲಿ ತನ್ನ ಸ್ನೇಹಿತರನ್ನು ಭೇಟಿಯಾಗಲು ಹೋಟೆಲ್ಗೆ ಹೋಗಿದ್ದಳು ಎಂದು ನಿಧಿ ಹೇಳಿಕೊಂಡಿದ್ದಳು. ಬಳಿಕ ಬರುವಾಗ ಅಂಜಲಿ ಜೊತೆ ನಿಧಿ ಕೂಡ ಇದ್ದಳು. ಆದರೆ ಆರೋಪಿಗಳಿಗೂ ಅಂಜಲಿ ಹಾಗೂ ನಿದಿಗೂ ಯಾವುದೇ ಸಂಬಂಧವಿರುವ ಬಗ್ಗೆ ಪೊಲೀಸರಾಗಲಿ ನಿಧಿಯಾಗಲಿ ಈವರೆಗೂ ಸ್ಪಷ್ಟನೆ ನೀಡಿಲ್ಲ.
ಘಟನೆಯ ಬಳಿಕ ಪೊಲೀಸರು ಕಾಂಜಾವಾಲಾ ಪ್ರಕರಣದಲ್ಲಿ ದೀಪಕ್ ಖನ್ನಾ, ಅಮಿತ್ ಖನ್ನಾ, ಕೃಷ್ಣ, ಮಿಥುನ್, ಮನೋಜ್ ಮಿತ್ತಲ್ ಮತ್ತು ಅಶುತೋಷ್ ಅವರನ್ನು ಬಂಧಿಸಿದ್ದಾರೆ. ಏಳನೇ ಆರೋಪಿ ಅಂಕುಶ್ ಖನ್ನಾ ಜನವರಿ 6 ರಂದು ಸಂಜೆ ಪೊಲೀಸರ ಮುಂದೆ ಶರಣಾಗಿದ್ದಾನೆ. ಐವರು ಆರೋಪಿಗಳನ್ನು ರಕ್ಷಿಸಿದ ಆರೋಪ ಅಶುತೋಷ್ ಮತ್ತು ಅಂಕುಷ್ ಮೇಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications