Get Updates
Get notified of breaking news, exclusive insights, and must-see stories!

ದೆಹಲಿ ಮದ್ಯ ನೀತಿ ಹಗರಣ: ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್, ಮನಿಶ್ ಸಿಸೋಡಿಯಾಗೆ ಕ್ಲೀನ್‌ಚಿಟ್

ದೆಹಲಿ ಮದ್ಯ ನೀತಿ ಹಗರಣದ ಭ್ರಷ್ಟಾಚಾರದ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ತೀರ್ಪು ಪ್ರಕಟವಾಗಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಂದ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರನ್ನು ನ್ಯಾಯಾಲಯವು ಬಿಡುಗಡೆ ಮಾಡಿದೆ.

ಸಾಕ್ಷ್ಯಾಧಾರಗಳ ಕೊರತೆ

ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯವು, ಈ ಪ್ರಕರಣದಲ್ಲಿ ಯಾವುದೇ ಕ್ರಿಮಿನಲ್ ಪಿತೂರಿ ನಡೆದಿಲ್ಲ ಮತ್ತು ಸಿಬಿಐ (CBI) ಮಾಡಿದ್ದ ಆರೋಪಗಳಲ್ಲಿ "ಯಾವುದೇ ತಿರುಳಿಲ್ಲ" ಎಂದು ಸ್ಪಷ್ಟವಾಗಿ ಹೇಳಿದೆ. ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

Delhi Liquor Policy Scam

ಇದರಿಂದ ಆಮ್ ಆದ್ಮಿ ಪಕ್ಷಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ದೆಹಲಿ ವಿಧಾನಸಭಾ ಚುನಾವಣೆಯ ತಯಾರಿಯಲ್ಲಿರುವ ಆಪ್‌ಗೆ ಈ ತೀರ್ಪು ದೊಡ್ಡ ವರದಾನವಾಗಿದೆ. ಪಕ್ಷದ ಪ್ರಾಮಾಣಿಕತೆಯ ಬಗ್ಗೆ ಎದ್ದಿದ್ದ ಪ್ರಶ್ನೆಗಳಿಗೆ ಈಗ ನ್ಯಾಯಾಲಯದ ಮೂಲಕವೇ ಉತ್ತರ ಸಿಕ್ಕಂತಾಗಿದೆ.

ಕೇಂದ್ರ ಸರ್ಕಾರದ ವಿರುದ್ಧ "ಸೇಡಿನ ರಾಜಕಾರಣ"ದ ಆರೋಪ ಮಾಡುತ್ತಿದ್ದ ಎಎಪಿ ನಾಯಕರಿಗೆ ಈ ಜಯವು ನೈತಿಕ ಬಲ ನೀಡಿದೆ. ಈಗ ಸಂಪೂರ್ಣವಾಗಿ ಆರೋಪಮುಕ್ತರಾಗಿರುವುದರಿಂದ ಅರವಿಂದ್ ಕೇಜ್ರಿವಾಲ್ ಮತ್ತು ಮನಿಶ್ ಸಿಸೋಡಿಯಾ ಅವರು ಮತ್ತೆ ಸಕ್ರಿಯವಾಗಿ ಆಡಳಿತಾತ್ಮಕ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಹಾದಿಯೂ ಸುಗಮವಾಗಿದೆ.

ಪ್ರಕರಣದ ಹಿನ್ನೆಲೆ

ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸುದೀರ್ಘ ಕಾನೂನು ಹೋರಾಟವು ಅಂತಿಮವಾಗಿ ಸುಖಾಂತ್ಯ ಕಂಡಿದೆ. ದೆಹಲಿ ನ್ಯಾಯಾಲಯವು ಅವರಿಗೆ ಕ್ಲೀನ್ ಚಿಟ್ ನೀಡುವ ಮೂಲಕ ಭ್ರಷ್ಟಾಚಾರದ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ. ಈ ಪ್ರಕರಣವು ಅಕ್ಟೋಬರ್ 2023 ರಲ್ಲಿ ಜಾರಿ ನಿರ್ದೇಶನಾಲಯ (ED) ನೀಡಿದ ಮೊದಲ ಸಮನ್ಸ್‌ನೊಂದಿಗೆ ಆರಂಭವಾಗಿತ್ತು. ಆರಂಭದಲ್ಲಿ ಇದನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದ ಕೇಜ್ರಿವಾಲ್, ಸತತ 9 ಸಮನ್ಸ್‌ಗಳನ್ನು ಕೈಬಿಟ್ಟಿದ್ದರು. ಇದರಿಂದಾಗಿ 2024ರ ಮಾರ್ಚ್ 21ರಂದು ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಅಧಿಕೃತವಾಗಿ ಬಂಧಿಸಿದ್ದರು.

ಬಂಧನದ ನಂತರ ಪ್ರಕರಣವು ಹಲವು ತಿರುವುಗಳನ್ನು ಪಡೆಯಿತು. ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ 2024ರ ಮೇ 10ರಲ್ಲಿ ಸುಪ್ರೀಂಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಜೂನ್‌ನಲ್ಲಿ ಅವರು ಮತ್ತೆ ತಿಹಾರ್ ಜೈಲಿಗೆ ಶರಣಾಗಬೇಕಾಯಿತು. ಇದೇ ಸಮಯದಲ್ಲಿ ಸಿಬಿಐ (CBI) ಕೂಡ ಅವರನ್ನು ಬಂಧಿಸಿ ತನಿಖೆ ಚುರುಕುಗೊಳಿಸಿತ್ತು. ಸೆಪ್ಟೆಂಬರ್ 13ರಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಅಂದಿನಿಂದ ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಸತತವಾಗಿ ನಡೆಯುತ್ತಿತ್ತು.

ಅಂತಿಮವಾಗಿ ತೀರ್ಪು ಪ್ರಕಟಿಸಿದ ದೆಹಲಿ ನ್ಯಾಯಾಲಯವು, ಸಿಬಿಐ ಸಲ್ಲಿಸಿದ್ದ ಆರೋಪಗಳಲ್ಲಿ ಯಾವುದೇ ಪುರಾವೆಗಳಿಲ್ಲ ಮತ್ತು ಕ್ರಿಮಿನಲ್ ಪಿತೂರಿ ನಡೆದ ಬಗ್ಗೆ ಸಾಕ್ಷ್ಯಾಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಪ್ರಾಸಿಕ್ಯೂಷನ್ ತನ್ನ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಹೇಳುವ ಮೂಲಕ ನ್ಯಾಯಾಲಯವು ಕೇಜ್ರಿವಾಲ್ ಮತ್ತು ಮನಿಶ್ ಸಿಸೋಡಿಯಾ ಅವರನ್ನು ದೋಷಮುಕ್ತಗೊಳಿಸಿದೆ. ಈ ತೀರ್ಪು ಆಮ್ ಆದ್ಮಿ ಪಕ್ಷಕ್ಕೆ ನೈತಿಕ ಜಯ ತಂದುಕೊಟ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+