ದೆಹಲಿ ಮದ್ಯ ಹಗರಣ: ಇಂಡೋ ಸ್ಪಿರಿಟ್ಸ್ನಲ್ಲಿ ಕೆಸಿಆರ್ ಪುತ್ರಿ ಕವಿತಾ ಪಾಲು ಎಂಬ ಸ್ಫೋಟಕ ಮಾಹಿತಿ ಇಡಿಯಿಂದ ಬಹಿರಂಗ
ನವದೆಹಲಿ, ಡಿಸೆಂಬರ್ 21: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಪುತ್ರಿ ಕವಿತಾ ಅವರ ಕುರಿತು ಜಾರಿ ನಿರ್ದೇಶನಾಲಯವು(ಇಡಿ) ಸ್ಪೋಟಕ ಮಾಹಿತಿಯೊಂದನ್ನು ಬಹಿರಂಗ ಪಡಿಸಿದೆ.
ದೆಹಲಿ ಮದ್ಯ ಹಗರಣದಲ್ಲಿ ಭಾಗಿಯಾಗಿರುವ ಇಂಡೋ ಸ್ಪಿರಿಟ್ಸ್ನಲ್ಲಿ ಸುಮಾರು ಶೇ 65 ಪಾಲನ್ನು ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ಮಾಹಿತಿ ಹೊರಹಾಕಿದೆ.
ಕಳೆದ ತಿಂಗಳು ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ, ಕವಿತಾ ಅವರು ಪ್ರಾಕ್ಸಿಗಳ ಮೂಲಕ ಪಾಲನ್ನು ಹೊಂದಿದ್ದಾರೆ ಎಂದು ಇಡಿ ತಿಳಿಸಿದೆ.

ಇಡಿ ಚಾರ್ಜ್ಶೀಟ್ ಅನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ಗೆ ಸಲ್ಲಿಸಲಾಗಿದ್ದು, ಅವರು ಮಂಗಳವಾರ ಅದನ್ನು ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ಜನವರಿ 5 ರಂದು ಮಾಡಲಿದ್ದಾರೆ.
ದೆಹಲಿ ಮದ್ಯ ಹಗರಣವು ಹೇಗೆ ಬಯಲಾಯಿತು ಎಂಬುದರ ಬಗ್ಗೆ ಇಡಿ ಚಾರ್ಜ್ಶೀಟ್ನಲ್ಲಿ ವಿವರಿಸಲಾಗಿದೆ. ಇಂಡೋ ಸ್ಪಿರಿಟ್ ಜೊತೆಗಿನ ಪಾಲುದಾರಿಕೆ ಹಾಗೂ ಹಗರಣದ ಕುರಿತ ಮಾಹಿತಿಯನ್ನು ಚಾರ್ಜ್ಶೀಟ್ನಲ್ಲಿ ದಾಖಲಿಸಲಾಗಿದೆ.
ನವೆಂಬರ್ 12 ರಂದು ಸಮೀರ್(ಇಂಡೋ ಸ್ಪಿರಿಟ್ ಮುಖ್ಯಸ್ಥ) ಇಡಿಗೆ ಹೇಳಿಕೆ ನೀಡಿರುವ ಪ್ರಕಾರ, ವಿಜಯ್ ನಾಯರ್ ಎಂಬ ವ್ಯಕ್ತಿ ಅರುಣ್ ಪಿಳ್ಳೈ ಎಂಬುವವರನ್ನು ನನಗೆ ಪರಿಚಯಿಸಿದರು. ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಿಟಕವರ್ತಿಗಳು ಎಂದು ಹೇಳಲಾಯಿತು. ಈ ವ್ಯಕ್ತಿಗಳಿಗೆ ದೆಹಲಿಯಲ್ಲಿರುವ ನನ್ನ ಉದ್ಯಮದಲ್ಲಿ ಪಾಲುದಾರಿಕೆ ಬೇಕಾಗಿತ್ತು ಎಂದು ಸಮೀರ್ ತಿಳಿಸಿದ್ದಾರೆ.
ಪಾಲುದಾರಿಕೆಯ ಷರತ್ತನ್ನು ಸಮೀರ್ ಈ ಮೊದಲ ಒಪ್ಪಲಿಲ್ಲ. ಏಕೆಂದರೆ, ಈ ವ್ಯಕ್ತಿಗಳಿಂದ ಯಾವುದೇ ಗಮನಾರ್ಹ ಹೂಡಿಕೆಗಳಿರಲಿಲ್ಲ. ಆದರೆ, ಪೆರ್ನಾಡ್ ಉದ್ಯಮವನ್ನು ತಮಗೆ ಒಪ್ಪಿಸುವುದಾಗಿ ವಿಜಯ್ ಹೇಳಿದ್ದಾರೆ. ಆ ನಂತರ ಸಮೀರ್ ಅವರು ತಮ್ಮ ವ್ಯವಹಾರದಲ್ಲಿ ಶೇ 65 ಪಾಲು ನೀಡಲು ಸಮ್ಮತಿ ಸೂಚಿಸಿದ್ದಾರೆ.

ಎಂಎಸ್ಆರ್ (ಮಗುಂಟಾ ಶ್ರೀನಿವಾಸುಲು ರೆಡ್ಡಿ) ಮತ್ತು ಕೆ. ಕವಿತಾ ಇಂಡೋ ಸ್ಪಿರಿಟ್ಸ್ನ ನಿಜವಾದ ಪಾಲುದಾರರು ಎಂದು ಈ ವ್ಯಕ್ತಿಗಳೊಂದಿಗೆ ನಡೆದ ಮಾತುಕತೆಯಲ್ಲಿ ಸಮೀರ್ಗೆ ಗೊತ್ತಾಗಿದೆ.
ಕವಿತಾ ಮತ್ತು ಸಮೀರ್ ಅವರ ನಡುವೆ ನಡೆದಿರುವ ಫೇಸ್ಟೈಮ್ ಮೀಟಿಂಗ್ಗೆ ವೇದಿಕೆಯನ್ನು ಅರುಣ್ ಪಿಳ್ಳೈ ಏರ್ಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೈದರಾಬಾದ್ನಲ್ಲಿರುವ ಅವರ ನಿವಾಸದಲ್ಲಿ ಸಮೀರ್ ಮಹೇಂದ್ರು ಮತ್ತು ಕವಿತಾ ಅವರ ಸಭೆಯನ್ನು ಏರ್ಪಡಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications