ದೆಹಲಿ: ಲಿವ್-ಇನ್ ಸಂಗಾತಿಯನ್ನು ಕೊಂದ ಅಂದೇ ಮತ್ತೊಬ್ಬಳ ಮದುವೆಯಾದವ ಅರೆಸ್ಟ್!
ಲಿವ್-ಇನ್ ಸಂಗಾತಿಯನ್ನು ಕೊಂದ ಅಂದೇ ಮತ್ತೊಬ್ಬಳನ್ನು ಮದುವೆಯಾದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ ಫೆಬ್ರವರಿ 15: ದೆಹಲಿಯ ಯುವತಿಯೊಬ್ಬಳು ತನ್ನ ಪ್ರಿಯಕರನಿಂದ ಹತ್ಯೆಗೀಡಾಗಿರುವುದು ಬೆಳಕಿಗೆ ಬಂದಿದೆ. ಚಾರ್ಜಿಂಗ್ ಕೇಬಲ್ನಿಂದ ಆಕೆಯ ಕತ್ತು ಹಿಸುಕಿ ಕೊಂದು ಬಳಿಕ ಮೃತದೇಹವನ್ನು ಫ್ರಿಡ್ಜ್ನಲ್ಲಿ ತುಂಬಿಡಲಾಗಿದೆ. 23 ವರ್ಷದ ನಿಕ್ಕಿ ಯಾದವ್ ಅವರ ಮೃತದೇಹ ಮಂಗಳವಾರ ಆಕೆಯ ಗೆಳೆಯ ಸಾಹಿಲ್ ಗೆಹ್ಲೋಟ್ ಅವರ ಕುಟುಂಬದ ಒಡೆತನದ ರೆಸ್ಟೋರೆಂಟ್ನ ಫ್ರಿಡ್ಜ್ನಲ್ಲಿ ಪತ್ತೆಯಾಗಿದೆ.
ಆರೋಪಿ ಸಾಹಿಲ್ (24) ನನ್ನು ಪೊಲೀಸರು ಬಂಧಿಸಿದ್ದಾರೆ. ನಿಕ್ಕಿ ಯಾದವ್ ನೈಋತ್ಯ ದೆಹಲಿಯಲ್ಲಿ ತನ್ನ ಬಾಡಿಗೆ ಮನೆಗೆ ಪ್ರವೇಶಿಸಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕೊನೆಯದಾಗಿ ಕಂಡುಬಂದಿದ್ದಾರೆ. ಆಕೆಯ ಕುಟುಂಬ ಹರಿಯಾಣದ ಜಜ್ಜರ್ನಲ್ಲಿ ನೆಲೆಸಿದೆ. ಫೆಬ್ರವರಿ 9 ರ ವಿಡಿಯೊದಲ್ಲಿ ಅವಳು ಒಬ್ಬಂಟಿಯಾಗಿದ್ದಾಳೆ. ಕೆಲವು ಗಂಟೆಗಳ ನಂತರ ಆಕೆಯನ್ನು ಸಾಹಿಲ್ ಗೆಹ್ಲೋಟ್ ಕೊಂದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸಿಸಿಟಿವಿ ದೃಶ್ಯ ಪರಿಶೀಲನೆ
ಮನೆಯಿಂದ ಸ್ವಲ್ಪ ದೂರದಲ್ಲಿ ಸಾಹಿಲ್ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಕ್ಕಾಗಿ ನಿಕ್ಕಿ ಸುಮಾರು ಮೂರು ಗಂಟೆಗಳ ಕಾಲ ಕಾರಿನೊಳಗೆ ಜಗಳವಾಡಿದ್ದಾರೆ. ಬಳಿಕ ಜಗಳ ಉಲ್ಬಣಗೊಳ್ಳುತ್ತಿದ್ದಂತೆ ಸಾಹಿಲ್ ಚಾರ್ಜಿಂಗ್ ಕೇಬಲ್ ಬಳಸಿ ನಿಕ್ಕಿಯ ಕತ್ತು ಹಿಸುಕಿದ್ದಾನೆ. ಶವವನ್ನು ತಮ್ಮ ಕುಟುಂಬದ ರೆಸ್ಟೋರೆಂಟ್ನ ಫ್ರೀಜರ್ನಲ್ಲಿ ಇಟ್ಟಿದ್ದು ಬೆಳಕಿಗೆ ಬಂದಿದೆ.
"ನಾವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸಾಕ್ಷ್ಯವನ್ನು ಸಂಗ್ರಹಿಸಲು ಮತ್ತು ಏನಾಯಿತು ಎಂಬುದನ್ನು ತಿಳಿಯಲು ಹೆಚ್ಚಿನದನ್ನು ಸ್ಕ್ಯಾನ್ ಮಾಡುತ್ತಿದ್ದೇವೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ
ನಿಕ್ಕಿ ತನ್ನ ಲಿವ್-ಇನ್ ಸಂಗಾತಿ ಇನ್ನೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆಂದು ತಿಳಿದಿರಲಿಲ್ಲ. ಆತನ ಮದುವೆಗೆ ಒಂದು ದಿನ ಮುಂಚಿತವಾಗಿ ಆಕೆಗೆ ಈ ವಿಷಯ ತಿಳಿಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೇರೆಯವರನ್ನು ಮದುವೆಯಾದರೆ ಕೇಸು ದಾಖಲಿಸುವುದಾಗಿ ನಿಕ್ಕಿ ಬೆದರಿಕೆ ಹಾಕಿದ್ದಾಳೆ ಎಂದು ಕೆಲವು ವರದಿಗಳು ಹೇಳಿವೆ. ಇತರ ವರದಿಗಳು ಆಕೆ ಗೋವಾಗೆ ಟಿಕೆಟ್ಗಳನ್ನು ಕಾಯ್ದಿರಿಸಿದ್ದಳು ಮತ್ತು ತನ್ನೊಂದಿಗೆ ಹೋಗಲು ಅವನನ್ನು ಒತ್ತಾಯಿಸುತ್ತಿದ್ದಳು ಎಂದಿವೆ. ಈ ಜಗಳದಲ್ಲಿ ನಿಕ್ಕಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ. ಸಾಹಿಲ್ ಆಕೆಯ ಶವವನ್ನು ಬಚ್ಚಿಟ್ಟ ಸ್ಥಳದಿಂದ ಕೇವಲ 700 ಮೀಟರ್ ದೂರದಲ್ಲಿರುವ ತನ್ನ ಪೋಷಕರ ಮನೆಗೆ ಹೋಗಿದ್ದನು.

ಇನ್ನೊಬ್ಬ ಮಹಿಳೆಯೊಂದಿಗೆ ಮದುವೆ
ನೆರೆಹೊರೆಯವರು ನಿಕ್ಕಿ ಕಾಣೆಯಾಗಿದ್ದಾರೆ ಎಂದು ವರದಿ ಮಾಡಿದ ನಂತರ ಪೊಲೀಸರು ಸಾಹಿಲ್ ಅನ್ನು ಪತ್ತೆಹಚ್ಚಿದರು. ವಿಶೇಷ ಪೊಲೀಸ್ ಆಯುಕ್ತ (ಅಪರಾಧ) ರವೀಂದ್ರ ಸಿಂಗ್ ಯಾದವ್ ಅವರು, ಫೆಬ್ರವರಿ 10 ರಂದು ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಕೊಂದು ಅದೇ ದಿನ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾನೆ. ಬಳಿಕ ಸಾಹಿಲ್ ತನ್ನ ವಿಚಾರಣೆಯ ಸಮಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಮತ್ತು ನಿಕ್ಕಿಯ ದೇಹವನ್ನು ಎಲ್ಲಿ ಮರೆಮಾಡಿದ್ದಾನೆಂದು ಬಹಿರಂಗಪಡಿಸಿದ್ದಾನೆ ಎಂದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications