Delhi: ಎಎಪಿ, ಅರವಿಂದ್ ಕೇಜ್ರಿವಾಲ್ಗೆ ಹೊಸ ಸಂಕಷ್ಟ ಕೊಟ್ಟ ಬಿಜೆಪಿ!
Delhi: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಆಮ್ ಆದ್ಮಿ ಪಾರ್ಟಿಗೆ ಸಂಕಷ್ಟಗಳು ತಪ್ಪುತ್ತಿಲ್ಲ. ದೆಹಲಿ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಎಎಪಿ ಹೀನಾಯವಾಗಿ ಸೋತಿದೆ. ಇದರ ಬೆನ್ನಲ್ಲೇ ಇದೀಗ ಎಎಪಿ ಅಧಿಕಾರದಲ್ಲಿ ಇರುವ ಪಂಜಾಬ್ನಲ್ಲೂ ಬಣ ಬಡಿದಾಟ ಹಾಗೂ ಅಧಿಕಾರ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಇದರ ನಡುವೆ ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷಕ್ಕೆ ಮತ್ತೆ ಬಿಜೆಪಿ ಶಾಕ್ ನೀಡುವುದಕ್ಕೆ ಮುಂದಾಗಿದೆ. ದೆಹಲಿ ಎಎಪಿಗೆ ಭದ್ರಕೋಟೆಯಾಗಿತ್ತು. ಆದರೆ, ದೆಹಲಿಯಲ್ಲೇ ಎಎಪಿ ಸೋತಿದೆ. ಇದೀಗ ಎಎಪಿ ಕಾಲದ ಆಡಳಿತದಲ್ಲಿ ನಡೆದ ವಿಷಯಗಳನ್ನು ಕೆದಕಲು ಬಿಜೆಪಿ ಮುಂದಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ಐಷಾರಾಮಿ ಜೀವನ ನಡೆಸಿದ್ದರು ಎಂದು ಹೇಳಲಾಗುತ್ತಿದೆ.
ದೆಹಲಿಯಲ್ಲಿ ಬಿಜೆಪಿ ಬರೋಬ್ಬರಿ 27 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಎಎಪಿ ಅಧಿಕಾರದ ಅವಧಿಯಲ್ಲಿ ಆಗಿರುವ ತಪ್ಪುಗಳನ್ನು ಹಾಗೂ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಬಿಜೆಪಿ ಹೇಳಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಚರ್ಚೆಯಾಗಿದ್ದ ದೆಹಲಿಯ ಸರ್ಕಾರಿ ಬಂಗಲೆ ಶೀಶ್ ಮಹಲ್ನ ನವೀಕರಣ ವೆಚ್ಚ ಹಾಗೂ ಅಲ್ಲಿನ ಐಷಾರಾಮಿ ವಸ್ತುಗಳ ಬಗ್ಗೆ ತನಿಖೆ ಮಾಡುವುದಾಗಿ ಬಿಜೆಪಿ ಹೇಳಿದೆ. ಇದು ಎಎಪಿಯಲ್ಲಿ ನಡುಕವನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಚರ್ಚೆಯಾದ ವಿಷಯಗಳಲ್ಲಿ ಶೀಶ್ ಮಹಲ್ ನವೀಕರಣವೂ ಒಂದಾಗಿದೆ. ಇದೀಗ ಇಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಉನ್ನತ ಮಟ್ಟದ ತನಿಖೆಯನ್ನು ನಡೆಸುವುದಕ್ಕೆ ಮುಂದಾಗಿದೆ. ಶೀಶ್ ಮಹಲ್ ಎನ್ನುವುದು ದೆಹಲಿಯ ಸರ್ಕಾರಿ ಬಂಗಲೆಯಾಗಿದೆ. ಇದನ್ನು ಅಲ್ಲಿನ ಮುಖ್ಯಮಂತ್ರಿ ಬಳಕೆಗೆ ನೀಡಲಾಗುತ್ತದೆ. ಇದೀಗ ಈ ಸರ್ಕಾರಿ ಬಂಗಲೆಯ ನವೀಕರಣದಲ್ಲಿ ಅವ್ಯವಹಾರವಾಗಿದೆ ಎಂದು ಬಿಜೆಪಿ ದೂರಿದ್ದು. ಅದರ ತನಿಖೆಯನ್ನು ಮಾಡುವುದಕ್ಕೆ ಕೇಂದ್ರ ವಿಚಕ್ಷಣ ದಳಕ್ಕೆ ಕೇಂದ್ರ ಲೋಕೋಪಯೋಗಿ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಕೋವಿಡ್ ಸಮಯದಲ್ಲೇ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಸರ್ಕಾರಿ ಬಂಗಲೆಯನ್ನು ನವೀಕರಣ ಮಾಡಿರುವ ಆರೋಪ ಎಎಪಿ ಹಾಗೂ ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲಿದೆ. ಸರ್ಕಾರಿ ಅಧಿಕೃತ ನಿವಾಸದ ನವೀಕರಣಕ್ಕಾಗಿ ಕೇಜ್ರಿವಾಲ್ ಅವರು 33 ಕೋಟಿ ರೂಪಾಯಿಗೂ ಹೆಚ್ಚು ದುಂದುವೆಚ್ಚ ಮಾಡಿದ್ದಾರೆ ಎನ್ನುವ ಆರೋಪ ಇದೆ.
ಇನ್ನು ಈ 6 ಫ್ಲ್ಯಾಗ್ಸ್ಟಾಫ್ ಬಂಗ್ಲೆಯ ನವೀಕರಣ ಮತ್ತೆ ಅದರಲ್ಲಿರುವ ಐಷಾರಾಮಿ ವಸ್ತುಗಳ ಬಗ್ಗೆ ವಿಸ್ತೃತ ತನಿಖೆ ಮಾಡುವುದಕ್ಕೆ ಆದೇಶ ಮಾಡಲಾಗಿದೆ. ಮದ್ಯನೀತಿ ಹಗರಣದಲ್ಲೂ ಎಎಪಿಗೆ ಪೂರ್ಣ ಪ್ರಮಾಣದ ಕ್ಲೀನ್ ಚೀಟ್ ಸಿಕ್ಕಿಲ್ಲ. ದೆಹಲಿಯಲ್ಲೂ ಅಧಿಕಾರ ಕಳೆದುಕೊಂಡಿದೆ. ಪಂಜಾಬ್ನಲ್ಲಿ ಬಿರುಕು ಮಾಡುತ್ತಿದೆ. ಇಷ್ಟೆಲ್ಲರ ನಡುವೆ ಇದೀಗ ಶೀಶ್ ಮಹಲ್ ಹಗರಣದ ತನಿಖೆಯನ್ನೂ ಬಿಜೆಪಿ ಪ್ರಾರಂಭಿಸಿದ್ದು, ಎಎಪಿಗೆ ತಲೆನೋವಾಗಿದೆ. ಎಲ್ಲಾ ವಿಷಯದಲ್ಲೂ ಸಂಕಷ್ಟ ಎದುರಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications