ಇಂದು ದೆಹಲಿ ಮುಖ್ಯಮಂತ್ರಿ ಆಯ್ಕೆ, ನಾಳೆ ಪ್ರಮಾಣ ವಚನ, ಯಾರಾಗ್ತಾರೆ ಹೊಸ ಸಿಎಂ?
ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಇಂದು ಎರಡೂವರೆಗೆ ದಶಕಗಳ ಬಳಿಕ ಬಿಜೆಪಿಯು ದೆಹಲಿಯಲ್ಲಿ ಅಸ್ತಿತ್ವಕ್ಕೆ ಬರಲಿದೆ. ಇಂದು ಬುಧವಾರ (ಜನವರಿ 19) ಬಿಜೆಪಿಯಿಂದ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಇಂದೇ ನೂತನ ಮುಖ್ಯಮಂತ್ರಿ ಯಾರೆಂಬುದು ತೀರ್ಮಾನವಾಗಲಿದೆ. ನಾಳೆ ಜನವರಿ 20ರಂದು ಹೊಸ ಸಿಎಂ ಪ್ರಮಾಣ ವಚನ ನಡೆಯಲಿದೆ. ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೌದು, ಬಹುದಿನಗಳ ದೆಹಲಿ ಸಿಎಂ ಯಾರೆಂಬ ನಿರೀಕ್ಷೆಗೆ ಇಂದು ತೆರೆ ಬೀಳಲಿದೆ. ದೆಹಲಿ ಬಿಜೆಪಿಯಲ್ಲಿ ಅನೇಕರು ಸಿಎಂ ರೇಸಿನಲ್ಲಿದ್ದರು. ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಿತ್ತು. ಇದೀಗ ಒಬ್ಬರನ್ನು ಸಿಎಂ ಮಾಡುವ ನಿಟ್ಟಿನಲ್ಲಿ ವರಿಷ್ಠರು ಯಶಸ್ವಿಯಾಗಲಿದ್ದಾರೆ. ಇಂದು ಬಿಜೆಪಿಯ ವಿವಿಧ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧವಾಗಲಿದ್ದಾರೆ. ಆದರೆ ಈವರೆಗೆ ಮುಖ್ಯಮಂತ್ರಿಯಾಗಿ ಪಕ್ಷ ಯಾರನ್ನು ಆಯ್ಕೆ ಮಾಡಲಿದೆ ಎಂಬ ಸಣ್ಣ ಗುಟ್ಟನ್ನು, ಸುಳಿವನ್ನು ಬಹಿರಂಗಪಡಿಸಿಲ್ಲ. ಬದಲಾಗಿ ಸಿಎಂ ಆಯ್ಕೆ ವರೆಗೂ ಸಸ್ಪೆನ್ಸ್ ಕಾದುಕೊಂಡು ಬರಲಾಗುತ್ತಿದೆ.

ಆಮ್ ಆದ್ಮಿ ಪಕ್ಷ, ಕಾಂಗ್ರೆಸ್ ಪಕ್ಷ ಮಾತ್ರವಲ್ಲದೇ ಬಿಜೆಪಿಯ ಕೆಲವು ಕಾರ್ಯಕರ್ತರಲ್ಲೂ ದೆಹಲಿ ಮುಂದಿನ ಸಿಎಂ ಯಾರು, ದೆಹಲಿಯ ಆಡಳಿತ ನೊಗ ಯಾರ ಹೆಗಲಿಗೆ ಬೀಳಿದೆ ಎಂಬುದನ್ನು ಕಾತರರಿಂದ ಕಾಯುತ್ತಿದ್ದಾರೆ. ಎಎಪಿಯು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ವಿಪಕ್ಷ ಸ್ಥಾನ ಅಲಂಕರಿಸಲಿದೆ.
ಬಿಜೆಪಿಯು 27 ವರ್ಷಗಳ ಬಳಿಕ ಅಧಿಕಾರ ಬಂದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನೂ ಸಿಎಂ ರೇಸಿನಲ್ಲಿ ಯಾರೆಲ್ಲ ಇದ್ದಾರೆ ಎಂದು ನೋಡುವುದಾದರೆ, ದೆಹಲಿ ಕ್ಷೇತ್ರದಲ್ಲಿ ಎಎಪಿ ಅರವಿಂದ್ ಕೇಜ್ರಿವಾಲ್ ರನ್ನು ಸೋಲಿಸಿದ ಬಿಜೆಪಿ ಪರ್ವೇಶ್ ಶರ್ಮಾ ಅವರು ಸೇರಿದಂತೆ ಅನೇಕರ ಹೆಸರು ಸಿಎಂ ರೇಸಿನಲ್ಲಿ ಮುಂಚೂಣಿಯಲ್ಲಿವೆ.
ನೂತನ ಶಾಸಕರು, ಪ್ರಭಾವಿಗಳು ಆದ ರೇಖಾ ಗುಪ್ತಾ, ಶಿಖಾ ರಾಯ್, ಆಶಿಷ್ ಸೂದ್, ಬಿಜೆಪಿ ರಾಜ್ಯಾಧ್ಯಕ್ಷ ವಿರೇಂದ್ರ ಸಚ್ ದೇವಾ ಸೇರಿ ಹಲವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಎನ್ನಲಾಗಿದೆ. ಇಂದು ಯಾರು ಮುಖ್ಯಮಂತ್ರಿ ಎಂಬುದಕ್ಕೆ ತೆರೆ ಬೀಳಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications