ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಶಕ್ತಿ ತುಂಬುತ್ತಿರುವ ದೆಹಲಿಯ ಸುಗ್ರೀವಾಜ್ಞೆ ವಿವಾದ: ಪ್ರಜಾತಂತ್ರಕ್ಕೆ ಮತ್ತೊಂದು ಪರೀಕ್ಷೆ

ದೆಹಲಿ ಸರ್ಕಾರದ ಪರಮೋಚ್ಚ ಅಧಿಕಾರವನ್ನು ಕತ್ತರಿಸುವ ಸುಗ್ರೀವಾಜ್ಞೆಯು ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಶಕ್ತಿ ತುಂಬುತ್ತಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮೋದಿ ಸರ್ಕಾರದ ಕ್ರಮವನ್ನು ವಿರೋಧಿಸಲು ಕೇಜ್ರಿವಾಲ್‌ ಬೆಂಬಲ ಕೋರಿದ್ದಾರೆ.

ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಗೆ ವಿರುದ್ಧವಾಗಿ ಮತ ಚಲಾಯಿಸಲು ಬಿಜೆಡಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷಗಳು ಸೇರಿಕೊಂಡಿವೆ.

Delhi Ordinance 2023 Clash: Opposition gets more fuel for a united fight

2024 ರ ಲೋಕಸಭೆ ಚುನಾವಣೆಗೂ ಮುನ್ನವೇ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ತಮಗೆ ಅವಕಾಶವಿದೆ ಎಂದು ಪ್ರತಿಪಕ್ಷಗಳು ನಂಬಿಕೊಂಡಿವೆ. ಆದರೂ ಕಾಂಗ್ರೆಸ್ ಇನ್ನೂ ಈ ಕುರಿತು ಸಾರ್ವಜನಿಕವಾಗಿ ಘೋಷಿಸಿಲ್ಲ. ದೆಹಲಿ ಮತ್ತು ಪಂಜಾಬ್‌ನ ಕಾಂಗ್ರೆಸ್‌ ನಾಯಕರು ಕೇಜ್ರಿವಾಲ್ ಅವರಿಗೆ ಬೆಂಬಲ ನೀಡುವುದನ್ನು ತೀವ್ರವಾಗಿ ವಿರೋಧಿಸುತ್ತಿರುವುದರಿಂದ ಕಾಂಗ್ರೆಸ್‌ ಮೌನವಾಗಿದೆ.

ಕಾಂಗ್ರೆಸ್‌ ಪಕ್ಷವು ದೆಹಲಿ ಸುಗ್ರಿವಾಜ್ಞೆ ವಿಚಾರವನ್ನು ಸಂಸತ್ತಿನಲ್ಲಿ ಎತ್ತಿ ಬಿಜೆಪಿಗೆ ಮುಜುಗುರು ಉಂಟು ಮಾಡಲು ಬಯಸುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಒಂದು ವೇಳೆ, ದೆಹಲಿ ಸುಗ್ರಿವಾಜ್ಞೆ ವಿಚಾರದಲ್ಲಿ ಸೋತರೆ, ಮುಂದೆ ತಮ್ಮ ರಾಜ್ಯದ ವಿಷಯದಲ್ಲಿ ಕೇಂದ್ರ ಸರ್ಕಾರ ಮೂಗು ತೂರಿಸಬಹುದೆಂಬ ಆತಂಕ ಪ್ರತಿಪಕ್ಷಗಳ ನಾಯಕರಲ್ಲಿ ಕಾಡುತ್ತಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಹಣಾಹಣಿ ನಡೆಸಲು ಯೋಜಿಸಿದರೆ, ಸಂಯುಕ್ತ ವಿರೋಧ ಪಕ್ಷಗಳ ಒಕ್ಕೂಟವು 106 ಸಂಸದರ ಬೆಂಬಲವನ್ನು ಹೊಂದಿದ್ದರೆ, ಎನ್‌ಡಿಎ 112 ಸಂಸದರ ಬೆಂಬಲವನ್ನು ಹೊಂದಿದೆ.

Delhi Ordinance 2023 Clash: Opposition gets more fuel for a united fight

ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಅವರು ಸುಗ್ರೀವಾಜ್ಞೆಯನ್ನು ತಡೆಯಲು ಕೇಜ್ರಿವಾಲ್‌ಗೆ ತಮ್ಮ ನಿರಂತರ ಬೆಂಬಲವನ್ನು ನೀಡಿದ್ದಾರೆ. ಕೇಜ್ರಿವಾಲ್ ಅವರು ಶಿವಸೇನೆ (ಯುಬಿಟಿ) ಯನ್ನು ಭೇಟಿಯಾಗಲಿದ್ದಾರೆ. ಎಲ್ಲಾ ಪಕ್ಷಗಳು ಈ ಪ್ರಯತ್ನದಲ್ಲಿ ಕೈಜೋಡಿಸುವಂತೆ ಒತ್ತಾಯಿಸಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿಯ ಶರದ್ ಪವಾರ್ ಅವರು ತಮಗೆ ಬೆಂಬಲ ನೀಡಬೇಕೆಂದು ತಿಳಿಸಿದ್ದಾರೆ.

'ನಾವು ಸುಗ್ರೀವಾಜ್ಞೆಯನ್ನು ವಿರೋಧಿಸುತ್ತೇವೆ... ಬಿಜೆಪಿಯು ನ್ಯಾಯಾಂಗವನ್ನು ನಿಯಂತ್ರಿಸಲು ಬಯಸುತ್ತದೆ. ರಾಜ್ಯಸಭೆಯಲ್ಲಿ ಮಸೂದೆಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಗ್ಗೂಡಬೇಕೆಂದು ನಾನು ಒತ್ತಾಯಿಸುತ್ತೇನೆ' ಎಂದು ಮಮತಾ ಕೋಲ್ಕತ್ತಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

'ನಾವು ಎಂಟು ವರ್ಷಗಳಿಂದ ಈ ಹೋರಾಟವನ್ನು ನಡೆಸುತ್ತಿದ್ದೇವೆ ಮತ್ತು ಎಂಟು ದಿನಗಳಲ್ಲಿ ಅವರು ಸುಗ್ರೀವಾಜ್ಞೆಯನ್ನು ತಂದರು. ಬಿಜೆಪಿ ಪ್ರಜಾಪ್ರಭುತ್ವವನ್ನು ತಮಾಷೆಯಾಗಿ ಪರಿವರ್ತಿಸುತ್ತಿದೆ. ಬೆಂಬಲಕ್ಕಾಗಿ ನಾನು ದೀದಿ (ಮಮತಾ) ಅವರಿಗೆ ಧನ್ಯವಾದ ಹೇಳುತ್ತೇನೆ. ನಾವು ರಾಜ್ಯಸಭೆಯಲ್ಲಿ ಮಸೂದೆಯನ್ನು ಸೋಲಿಸಲು ಸಾಧ್ಯವಾದರೆ, ಅದು 2024 ರ ಚುನಾವಣೆಗೆ ಮೊದಲು ಸೆಮಿಫೈನಲ್ ಆಗಲಿದೆ' ಎಂದೂ ಕೇಜ್ರಿವಾಲ್‌ ಅಭಿಪ್ರಾಯ ಪಟ್ಟಿದ್ದಾರೆ.

Delhi Ordinance 2023 Clash: Opposition gets more fuel for a united fight

ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳು ಮೈತ್ರಿಕೂಟವನ್ನು ರೂಪಿಸುತ್ತಿರುವ ಸಮಯದಲ್ಲಿ ಈ ವಿವಾದ ಸೃಷ್ಟಿಯಾಗಿದೆ. ಕೇಜ್ರಿವಾಲ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಉಪ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡುವುದರ ಜೊತೆಗೆ ಕೋಲ್ಕತ್ತ ಮತ್ತು ನಂತರ ಮುಂಬೈಗೆ ಹಾರಿದ್ದಾರೆ. ಅವರು ಇನ್ನೂ ಅಧಿಕೃತವಾಗಿ ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿಲ್ಲ.

ಸುಗ್ರೀವಾಜ್ಞೆಯ ವಿರುದ್ಧದ ಹೋರಾಟದಲ್ಲಿ ಎಎಪಿಯನ್ನು ಬೆಂಬಲಿಸಲು ಕೇಂದ್ರ ನಾಯಕತ್ವವು ಹಿಂಜರಿಯದಿದ್ದರೂ ಕಾಂಗ್ರೆಸ್ ಈ ವಿಷಯದ ಬಗ್ಗೆ ಒಡೆದ ಮನೆಯಾಗಿದೆ. ಎಎಪಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಪಕ್ಷವನ್ನು ಸ್ವಾಗತಿಸಲಾಯಿತು.

ಸೋಮವಾರ ರಾತ್ರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರ ಟ್ವೀಟ್‌ನಲ್ಲಿ ಪಕ್ಷದ ಸಂದಿಗ್ಧತೆ ಚೆನ್ನಾಗಿ ವ್ಯಕ್ತವಾಗಿದೆ. ಅದರ ರಾಜ್ಯ ಘಟಕಗಳು ಮತ್ತು ಇತರ ಪಕ್ಷಗಳೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಸಂಸತ್ತಿನಲ್ಲಿ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸಲು ಸಾಧ್ಯವಿಲ್ಲ ಎಂದೂ ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ನೋಡುವುದಾದರೆ, ದೆಹಲಿ ಸುಗ್ರಿವಾಜ್ಞೆ ವಿವಾದವು ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಶಕ್ತಿ ತುಂಬಲಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+