ಸುನಂದಾ ಪುಷ್ಕರ್ ಸಾವು: ಚಾರ್ಜ್ಷೀಟ್ನಲ್ಲಿ ಶಶಿ ತರೂರ್ ವಿರುದ್ಧ ಆರೋಪ
ನವದೆಹಲಿ, ಮೇ 14: ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ದೆಹಲಿ ಪೊಲೀಸರು ನಾಲ್ಕು ವರ್ಷದ ಬಳಿಕ ಚಾರ್ಜ್ಷೀಟ್ ಸಲ್ಲಿಸಿದ್ದು, ಅವರ ಪತಿ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಲಾಗಿದೆ.
ಪಾಟಿಯಾಲ ಹೌಸ್ ಕೋರ್ಟ್ನ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂದರ್ ಸಿಂಗ್ ಅವರಿಗೆ ಚಾರ್ಜ್ಷೀಟ್ಅನ್ನು ಸಲ್ಲಿಸಲಾಗಿದೆ. ಸುನಂದಾ ಪುಷ್ಕರ್ ಅವರದು ಆತ್ಮಹತ್ಯೆಯೇ ವಿನಾ, ಕೊಲೆಯಲ್ಲ ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪೊಲೀಸರು ತಮ್ಮ ಅಂತಿಮ ವರದಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ಮತ್ತು 498ಎ ಅಡಿಯಲ್ಲಿ ಶಶಿ ತರೂರ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಪತ್ನಿ ಮೇಲಿನ ಕ್ರೌರ್ಯದ ಆರೋಪಗಳನ್ನು ಹೊರಿಸಿದ್ದಾರೆ. ತರೂರ್ ಅವರನ್ನು ಶಂಕಿತ ಎಂದು ಎರಡನೆಯ ಕಾಲಂನಲ್ಲಿ ನಮೂದಿಸಲಾಗಿದೆ.

ಮೇ 24ರಂದು ಕೋರ್ಟ್ ಚಾರ್ಜ್ಷೀಟ್ ಸಂಬಂಧ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ತರೂರ್ ಅವರಿಗೆ ಸಮನ್ಸ್ ನೀಡುವ ಸಂಬಂಧ ದೆಹಲಿ ಪೊಲೀಸರು ಮನವಿ ಸಲ್ಲಿಸಲಿದ್ದಾರೆ. ಪ್ರಕರಣದಲ್ಲಿ ತರೂರ್ ಅವರನ್ನು ಶಂಕಿತ ಎಂದು ಕೋರ್ಟ್ ಪರಿಗಣಿಸಿದರೆ ಮಾತ್ರ ಅವರ ವಿರುದ್ಧ ಕಾನೂನಾತ್ಮಕ ಪ್ರಕ್ರಿಯೆನ ನಡೆಸಲು ಸಮನ್ಸ್ ನೀಡಬಹುದಾಗಿದೆ.
ಸುನಂದಾ ಪುಷ್ಕರ್ ಅವರು 2014ರ ಜನವರಿ 17ರಂದು ದಕ್ಷಿಣ ದೆಹಲಿಯ ಲೀಲಾ ಹೋಟೆಲ್ನ 345ನೇ ರೂಮ್ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದರು. ಐಪಿಸಿ ಸೆಕ್ಷನ್ 302ರ ಅಡಿ ಪ್ರಕರಣ ದಾಖಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications