Delhi AQI: ಹದಗೆಟ್ಟ ವಾಯು ಗುಣಮಟ್ಟ ನಿಯಂತ್ರಣಕ್ಕೆ ಸರ್ಕಾರ ಹೊಸ ಪ್ಲಾನ್
ನವದೆಹಲಿ, ನವೆಂಬರ್ 09: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಒಂದು ವಾರದಿಂದ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತ ಕಂಡು ಬಂದಿದೆ. ತೀರಾ ಕಳಪೆ ಗಾಳಿ ಬೀಸುತ್ತಿದ್ದು, ಇದರಿಂದ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದ್ದು, ಜನ ತೊಂದರೆ ಅನುಭವಿಸುತ್ತಿದ್ದಾರೆ. ಇದರ ನಿವಾರಣೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಜ್ಯ ಸರ್ಕಾರ ಹೊಸ ಪ್ಲಾನ್ ಮಾಡಿದೆ.
ದೆಹಲಿಯಾದ್ಯಂತ ಈ ಕಳಪೆ ಗಾಳಿಯು ಅನಾರೋಗ್ಯ ಭೀತಿ ಸೃಷ್ಟಿಸಿದೆ. ಜನರು ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಅವರಿಗೆಲ್ಲ ಅನುಕೂಲಕರ ವಾತಾವರಣ ಸೃಷ್ಟಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ದೆಹಲಿಯಲ್ಲಿ ಕೃತಕ ಮಳೆ ಸುರಿಸುವ ಮೂಲಕ ಕಳಪೆ ವಾಯುಗುಣಟ್ಟದ ದಾಖಲಾತಿಗೆ ಕಡಿವಾಣ ಹಾಕಲು ಸಜ್ಜಾಗಿದೆ.

ಸರ್ಕಾರದ ಮೂಲಗಳ ಮಾಹಿತಿ ಪ್ರಕಾರ, ಇದೇ ನವೆಂಬರ್ 20-21 ರಂದು ಕೃತಕ ಮಳೆ ಸುರಿಸಲು ಚಿಂತನೆ ನಡೆಸಿದೆ. ದೆಹಲಿ ಅಕ್ಕಪಕ್ಕದ ರಾಜ್ಯಗಳ ಹೊಲಗಳಲ್ಲಿ ತ್ಯಾಜ್ಯ ಸುಡುವುದು, ವಾಹನಗಳ ಹೊಗೆ ಸೂಸುವಿಕೆಯ ಕಾರಣಗಳಿಂದ ನವದೆಹಲಿಯಲ್ಲಿ ವಾಯು ಗುಣಮಟ್ಟದ ಸೂಚ್ಯಂಕ (AQI) ಕಳೆದ ಒಂದು ವಾರದಲ್ಲಿ ದಿನೇ ದಿನೆ ಕುಸಿತ ಕಂಡಿದೆ.
ಐಐಟಿ ತಂಡದ ಜತೆ ಸಚಿವರ ಸಭೆ
ಹದಗೆಟ್ಟಿರುವ ದೆಹಲಿ ವಾಯುಗುಣಮಟ್ಟ ಸುಧಾರಣೆಗಾಗಿ ಪರಿಸರ ಸಚಿವ ಗೋಪಾಲ್ ರೈ ಮತ್ತು ಹಣಕಾಸು ಸಚಿವ ಅತಿಶಿ ಅವರು ಐಐಟಿ ಕಾನ್ಪುರದ ತಂಡದೊಂದಿಗೆ ಸಭೆ ನಡೆಸಿದ್ದಾರೆ. ಉತ್ತಮ ಗಾಳಿಯ ದಾಖಲಾತಿ ಇಲ್ಲದ ಈ ಸಂದರ್ಭದಲ್ಲಿ ಕೃತಕ ಮಳೆ ಯೋಜನೆ ಸಹಾಯಕ್ಕೆ ಬರಬಹುದು ಎಂದು ನಾಯಕರು ಅಂದಾಜಿಸಿದ್ದಾರೆ.
ಈ ಸಂಬಂಧ ದೆಹಲಿ ಸರ್ಕಾರ ಐಐಟಿ ಅಧಿಕಾರಿಗಳಲ್ಲಿ ವಿವರವಾದ ಯೋಜನೆ ಕೇಳಿದೆ. ಸಲ್ಲಿಕೆ ಆಗುವ ಈ ಯೋಜನೆಯನ್ನು ನಾಳೆ ನವೆಂಬರ್ 10ರಂದು ಶುಕ್ರವಾರ ಸುಪ್ರೀಂ ಕೋರ್ಟ್ಗೆ ಸರ್ಕಾರವೇ ಸಲ್ಲಿಸಲಿದೆ. ಈಗಾಗಲೇ ದೆಹಲಿಯ ವಿಷಕಾರಿ ಗಾಳಿ ದಿನಗಳನ್ನು ಪರಿಹರಿಸಲು ತುರ್ತು ಕ್ರಮಗಳನ್ನು ಕೋರಿ ಸಲ್ಲಿಸಲಾದ ಕೆಲವು ಅರ್ಜಿಗಳನ್ನು ಕೋರ್ಟ್ ಕೈಗೆತ್ತಿಕೊಂಡು ವಿಚಾರಣೆ ನಡೆಸುತ್ತಿದೆ.

ನ್ಯಾಯಾಲಯ ಅನುಮತಿಸಿದರೆ ದೆಹಲಿ ಸರ್ಕಾರ ಕೃತಕ ಮಳೆ ಸುರಿಸುವ ಯೋಜನೆ ಜಾರಿಗೆ ತರಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಆದಷ್ಟು ಶೀಘ್ರವೇ ಸಿಗಲಿದೆ ಎನ್ನಲಾಗಿದೆ.
ಕೃತಕ ಮಳೆಗೆ ಶೇ.40 ಮೋಡ ಕವಿದಿರಬೇಕು
ಉದ್ದೇಶಿತ ಈ ಕೃತಕ ಮಳೆ ಸೃಷ್ಟಿಗೆ ಆಗಸದಲ್ಲಿ ಕನಿಷ್ಠ ಶೇಕಡಾ 40ರಷ್ಟು ಮೋಡ ಕವಿದ ವಾತಾವರಣ ಕಂಡು ಬರಬೇಕಿದೆ. ಈ ಬಗ್ಗೆ ಐಐಟಿ ತಂಡ ತಿಳಿಸಿದೆ. ನವೆಂಬರ್ 20-21 ರಂದು ಮೋಡ ಕವಿಯುವ ನಿರೀಕ್ಷೆ ಇದ್ದು, ಅಂದು ಈ ಕೃತಕ ಮಳೆ ಸುರಿಸುವ ಯೋಜನೆಗೆ ಪ್ರಾಯೋಗಿಕ ಚಾಲನೆ ನೀಡಲಾಗುವುದು ಎಂದು ಪರಿಸರ ಸಚಿವರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಈ ಯೋಜನೆಯ ಪ್ರಸ್ತಾಪಿಸಲಾಗುತ್ತದೆ. ಬಳಿಕ ನ್ಯಾಯಾಲಯವು ಪರಿಶೀಲಿಸಿ ಅನುಮತಿಸಿದರೆ ಕೇಂದ್ರ ಸರ್ಕಾರದ ಸಹಾಯದಲ್ಲಿ ಕೃತಕ ಮಳೆ ಸುರಿಸಲು ತಯಾರಿ ಮಾಡಲಿದ್ದೇವೆ ಎಂದು ದೆಹಲಿ ಸರ್ಕಾರ ತಿಳಿಸಿದೆ.
'ಜನರ ಆರೋಗ್ಯ ಕೊಲೆ': ಕೋರ್ಟ್ ಕಳವಳ
ದೆಹಲಿಯಲ್ಲಿನ ವಾಯು ಮಾಲಿನ್ಯ ಗಮನಿಸಿದ್ದ ಸುಪ್ರೀಂ ಕೋರ್ಟ್ "ಜನರ ಆರೋಗ್ಯದ ಕೊಲೆ" ನಡುವೆ ರಾಜಕೀಯ ಯುದ್ಧವನ್ನು ಆಡಲು ಅನುಮತಿಸುವುದಿಲ್ಲ ಎಂದು ಎಚ್ಚರಿಸಿತ್ತು. ಜೊತೆಗೆ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ತಾನ ರಾಜ್ಯಗಳಿಗೆ ಜಮೀನುಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ತಿಳಿಸಿತ್ತು.
ಇದಕ್ಕೆ ದೆಹಲಿ ರಾಜ್ಯ ಸರ್ಕಾರವೂ ಜವಾಬ್ದಾರಿ ಆಗಿದೆ. ಇಲ್ಲಿ ನಿತ್ಯ ಓಡಾಡುವ ಬಸ್ಗಳು ಸುಸ್ಥಿತಿಯಲ್ಲಿ ಇಲ್ಲ. ಇಂತಹ ವಾಹನಗಳಿಂದಲೂ ಪರಿಸರ ಕಲುಷಿತಗೊಳ್ಳುತ್ತಿದ್ದು, ಸರ್ಕಾರ ತಮ್ಮ ಸಮಸ್ಯೆಗಳತ್ತವೂ ಗಮನ ಹರಿಸುವಂತೆ ಕೋರ್ಟ್ ನಿರ್ದೇಶಿಸಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications