Delhi Ordinance: ರಾಜ್ಯಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ, ಅರವಿಂದ್ ಕೇಜ್ರಿವಾಲ್ಗೆ ಹಿನ್ನಡೆ!
ದೆಹಲಿ ಸೇವಾ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದ್ದರಿಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರೀ ಹಿನ್ನಡೆಯಾಗಿದೆ. ದೆಹಲಿ ಸೇವೆಗಳ ಮಸೂದೆಯನ್ನು ಸೋಮವಾರ (ಆಗಸ್ಟ್ 7) ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.
ಮಸೂದೆಯ ಪರವಾಗಿ 131 ಮತಗಳು ಮತ್ತು ವಿರುದ್ಧವಾಗಿ 101 ಮತಗಳು ಬಂದವು. ಆಮ್ ಆದ್ಮಿ ಪಕ್ಷ ಮತ್ತು ಕೇಂದ್ರದ ನಡುವಿನ ವಿವಾದದ ಬಿಂದುವಾಗಿದ್ದ ಮಸೂದೆಯನ್ನು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಡಿವಿಷನ್ ಸ್ಲಿಪ್ಗಳನ್ನು ಬಳಸಿ ಮಸೂದೆಯ ಮೇಲಿನ ಮತದಾನವನ್ನು ಮಾಡಲಾಯಿತು. ಪ್ರತಿಪಕ್ಷಗಳು ದೆಹಲಿ ಸೇವಾ ಮಸೂದೆಗೆ ಮತಗಳ ವಿಭಜನೆಯನ್ನು ಕೇಳಿದ್ದವು.

ದೆಹಲಿ ಸರ್ಕಾರದಲ್ಲಿನ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ಗಳನ್ನು ನಿರ್ವಹಿಸಲು ಸುಗ್ರೀವಾಜ್ಞೆಯನ್ನು ಬದಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೇಲ್ಮನೆಯಲ್ಲಿ ಮಸೂದೆಯನ್ನು ಮಂಡಿಸಿದರು. ರಾಷ್ಟ್ರೀಯ ರಾಜಧಾನಿಯಲ್ಲಿ ಪರಿಣಾಮಕಾರಿ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಒದಗಿಸುವ ಉದ್ದೇಶದಿಂದ ಶಾಸನ ಅನುಕೂಲವಾಗಿದೆ ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಮಸೂದೆಯನ್ನು ಸಮರ್ಥಿಸಿಕೊಂಡರು.
ಆದರೆ ವಿರೋಧ ಪಕ್ಷ ಪ್ರಸ್ತಾವಿತ ಶಾಸನವನ್ನು ಕಟುವಾಗಿ ವಿರೋಧಿಸಿತ್ತು. ಇದು ಅಸಾಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಮತ್ತು ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ. ಸೇವಾ ವಿಷಯಗಳಲ್ಲಿ ದೆಹಲಿ ಸರ್ಕಾರಕ್ಕೆ ಕಾರ್ಯನಿರ್ವಾಹಕ ಅಧಿಕಾರವನ್ನು ಸುಪ್ರೀಂ ಕೋರ್ಟ್ ನೀಡಿದ ಕೆಲವೇ ದಿನಗಳಲ್ಲಿ ಸುಗ್ರೀವಾಜ್ಞೆಯನ್ನು ತರಲಾಯಿತು.
ಕೇಂದ್ರದ ಸುಗ್ರೀವಾಜ್ಞೆ ವಿರುದ್ಧದ ಹೋರಾಟಕ್ಕೆ ಬೆಂಬಲ ಪಡೆಯಲು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ರಾಷ್ಟ್ರವ್ಯಾಪಿ ಪ್ರವಾಸ ಕೈಗೊಂಡಿದ್ದರು. ಎಲ್ಲಾ ಪ್ರಮುಖ ವಿರೋಧ ಪಕ್ಷಗಳು - ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಜನತಾ ದಳ ಯುನೈಟೆಡ್, ಕಾಂಗ್ರೆಸ್, ಭಾರತ್ ರಾಷ್ಟ್ರೀಯ ಸಮಿತಿ (BRS), ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP) ಮತ್ತು ಇತರರು ಸುಗ್ರೀವಾಜ್ಞೆಯ ವಿರುದ್ಧದ ಹೋರಾಟದಲ್ಲಿ AAP ಗೆ ತಮ್ಮ ಬೆಂಬಲವನ್ನು ನೀಡಿದ್ದರು.
ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂ ವ್ಯವಹಾರಗಳನ್ನು ಹೊರತುಪಡಿಸಿ ಅಧಿಕಾರಶಾಹಿಗಳ ನೇಮಕಾತಿ ಮತ್ತು ವರ್ಗಾವಣೆಯ ಮೇಲೆ ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಮೇ 11 ರಂದು ತೀರ್ಪು ನೀಡಿತ್ತು. ಆದರೆ, ಈ ತೀರ್ಪನ್ನು ರದ್ದುಗೊಳಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರವು ಪರಿಚಯಿಸಿದ್ದು, ಈ ಹಿನ್ನೆಲೆ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚುನಾಯಿತ ಸರ್ಕಾರಕ್ಕೆ ದೆಹಲಿಯ ಅಧಿಕಾರಶಾಹಿಯ ನಿಯಂತ್ರಣವನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ಮೇ ತಿಂಗಳಲ್ಲಿ ಹೊರಡಿಸಲಾದ ಸುಗ್ರೀವಾಜ್ಞೆಯನ್ನು ಬದಲಿಸಲು ಪ್ರಯತ್ನಿಸುವ ವಿವಾದಾತ್ಮಕ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) ಮಸೂದೆಯು ರಾಜ್ಯಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕೆ ನಿನ್ನೆ ದಿನಾಂಕ ನಿಗದಿಯಾಗಿತ್ತು.
ಮಸೂದೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಪಕ್ಷವು ತನ್ನ ರಾಜ್ಯಸಭಾ ಸಂಸದರಿಗೆ ಸೋಮವಾರ ಹಾಜರಾಗುವಂತೆ ಮೂರು ಸಾಲಿನ ವಿಪ್ ನೀಡಿತ್ತು. ಕಳೆದ ವಾರ ಪ್ರತಿಪಕ್ಷಗಳು ಲೋಕಸಭೆಯಲ್ಲಿ ತನ್ನ ಪ್ರತಿಭಟನೆಯನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಿದವು, ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ ಮೇಲೆ ಐದು ಗಂಟೆಗಳ ಕಾಲ ಚರ್ಚೆಗೆ ಅವಕಾಶ ಮಾಡಿಕೊಟ್ಟವು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications