ವಿಶ್ವದ ಕಲುಷಿತ ನಗರಗಳ ಪಟ್ಟಿಯಲ್ಲಿ ದೆಹಲಿಗೆ ಅಗ್ರಸ್ಥಾನ
ನವದೆಹಲಿ, ಅ.23: ವಿಶ್ವದ ಹೆಚ್ಚು ಕಲುಷಿತಗೊಡಿರುವ ನಗರಗಳ ಪೈಕಿ ದೆಹಲಿ ಅಗ್ರಸ್ಥಾನದಲ್ಲಿದೆ. ನಾಲ್ಕು ಕಲುಷಿತ ನಗರಗಳ ಪಟ್ಟಿಯಲ್ಲಿ ಹೈದರಾಬಾದ್ ಕೂಡ ಸೇರ್ಪಡೆಯಾಗಿದೆ.
ಈ ಮಾಹಿತಿಯು ಸ್ವಿಟ್ಜರ್ಲೆಂಡ್ ಮೂಲದ ವಾಯು ಗುಣಮಟ್ಟ ತಂತ್ರಜ್ಞಾನ ಕಂಪನಿಯಾದ IQAir ನೀಡಿದೆ. ಈ ಕಂಪಿಯು 2021ರ ವರೆಗಿನ ವಿಶ್ವ ವಾಯು ಗುಣಮಟ್ಟ ವರದಿಯ ಒಂದು ಭಾಗವಾಗಿದೆ.
IQAir ವರದಿ ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿ 2021 ರಲ್ಲಿ ಭಾರತದಲ್ಲಿ ಅತ್ಯಂತ ಕಲುಷಿತ ನಗರವಾಗಿದೆ. ಅದರ ನಂತರ ಕಲುಷಿತ ನಗರದಗಳ ಪಟ್ಟಿಯಲ್ಲಿ, ಕೋಲ್ಕತ್ತಾ, ಮುಂಬೈ ಮತ್ತು ಹೈದರಾಬಾದ್ ಸೇರಿಕೊಂಡಿವೆ.

ದೆಹಲಿ, ಕೋಲ್ಕತ್ತಾ ಮತ್ತು ಮುಂಬೈ ಈಗಾಗಲೇ ಈ ಪಟ್ಟಿಯಲ್ಲಿದ್ದವು. ಆದರೆ, ಈ ಪಟ್ಟಿಗೆ ಹೊಸದಾಗಿ ಹೈದರಾಬಾದ್ ಸೇರಿರುವುದು ಒಂದು ಆತಂಕದ ವಿಷಯವಾಗಿದೆ. ದಕ್ಷಿಣ ಭಾರತದ ರಾಜ್ಯಗಳ ಸಾಲಿನಿಂದ ಹೈದರಾಬಾದ್ ಈ ಪಟ್ಟಿಗೆ ಸೇರ್ಪಡೆಯಾಗಿದೆ.
IQAir ನಲ್ಲಿನ ಮಾಹಿತಿಯ ಪ್ರಕಾರ, PM 2.5 ಮಟ್ಟಗಳು 2020ರಲ್ಲಿ ಪ್ರತಿ ಘನ ಮೀಟರ್ ಗಾಳಿಗೆ 34.7 ಮೈಕ್ರೋಗ್ರಾಂಗಳದ್ದು, 2021 ರಲ್ಲಿ 39.4 ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 21 ರಂದು IQAir ವೆಬ್ಸೈಟ್ನಲ್ಲಿನ ಮಾಹಿತಿಯ ಪ್ರಕಾರ, ನಗರದಲ್ಲಿನ ವಾಯು ಮಾಲಿನ್ಯದ ಮಟ್ಟವನ್ನು 159 ರ ವಾಯು ಗುಣಮಟ್ಟ ಸೂಚ್ಯಂಕ (AQI) ದೊಂದಿಗೆ ಸೋಲಿಸಿ ಅನಾರೋಗ್ಯಕರ ಎಂದು ವರ್ಗೀಕರಿಸಿದೆ.
ಪ್ರಮುಖ ಮಾಲಿನ್ಯಕಾರಕವೆಂದರೆ ಆಟೋಮೊಬೈಲ್ಗಳು ಮತ್ತು ಕೈಗಾರಿಕೆಗಳಿಂದ ಬಿಡುಗಡೆಯಾಗಿವ ಪಾರ್ಟಿಕ್ಯುಲೇಟ್ ಮ್ಯಾಟರ್ (PM) 2.5 ಅಥವಾ ಸಣ್ಣ ಕಣಗಳು ಇದರ ಪ್ರಾಥಮಿಕ ಮೂಲಗಳು ಎನ್ನಲಾಗಿದೆ. ತಜ್ಞರು ಹೇಳುವ ಪ್ರಕಾರ ವಾಹನಗಳು ನಗರದಲ್ಲಿನ ವಾಯುಮಾಲಿನ್ಯದ ಮೂರನೇ ಒಂದು ಭಾಗದಷ್ಟು ಕೊಡುಗೆ ನೀಡುತ್ತವೆ.

ಹೈದರಾಬಾದ್ನಲ್ಲಿ ಪಾರ್ಟಿಕ್ಯುಲೇಟ್ ಮ್ಯಾಟರ್ 2.5 ಸಾಂದ್ರತೆಯು ಪ್ರತಿ ಘನ ಮೀಟರ್ ಗಾಳಿಗೆ 70.4 ಮೈಕ್ರೋಗ್ರಾಂಗಳಷ್ಟಿದೆ. ಇದು ವಿಶ್ವ ಆರೋಗ್ಯ ಸಂಸ್ಥೆಯ (WHO) ವಾರ್ಷಿಕ ವಾಯು ಗುಣಮಟ್ಟದ ಮಾರ್ಗದರ್ಶಿ ಮೌಲ್ಯಕ್ಕಿಂತ 14.1 ಪಟ್ಟು ಹೆಚ್ಚು.
ಪಳೆಯುಳಿಕೆ ಇಂಧನ ದಹನ, ನಿರ್ಮಾಣ, ಭೂಕುಸಿತ ಮತ್ತು ಘನ ತ್ಯಾಜ್ಯದ ಭೂಮಿಯಲ್ಲಿ ಹೂಳುವುದು ಕೂಡ ಹೈದರಾಬಾದ್ ನಗರದಲ್ಲಿ ವಾಯು ಗುಣಮಟ್ಟ ಹದಗೆಡಲು ಕಾರಣ. ಇದರ ಜೊತೆಗೆ ವಾಹನ ಮಾಲಿನ್ಯ ಕೂಡ ವಾಯು ಮಾಲಿನ್ಯಕ್ಕೆ ದೊಡ್ಡ ಕಾರಣವೆಂದು ಹೇಳಲಾಗಿದೆ.
ಈ ವರದಿಗಾಗಿ ನವೆಂಬರ್ 20, 2020 ರಿಂದ ನವೆಂಬರ್ 20, 2021 ರವರೆಗೆ ದೇಶದ ವಿವಿದ ನಗರಗಳ ಮಾಲಿನ್ಯದ ಮಟ್ಟವನ್ನು ವಿಶ್ಲೇಷಿಸಲಾಗಿದೆ. ಫಲಿತಾಂಶಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ನ್ಯಾಷನಲ್ ಆಂಬಿಯೆಂಟ್ ಏರ್ ಕ್ವಾಲಿಟಿ (NAAQS) ಉಲ್ಲೇಖಿಸಿದಂತೆ ನಿಗದಿತ ಗಾಳಿಯ ಗುಣಮಟ್ಟದ ಮಾನದಂಡಗಳೊಂದಿಗೆ ಹೋಲಿಸಿ ವರದಿ ನೀಡಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications