ಕೊಲೆ ಪ್ರಕರಣ: ದೆಹಲಿ ವಿವಿ ಪ್ರೊ. ನಂದಿನಿ ಸುಂದರ್ ಆರೋಪಿ
ರಾಯಪುರ, ನವೆಂಬರ್, 8: ನಕ್ಸಲ್ ಪೀಡಿತ ರಾಜ್ಯ ಛತ್ತೀಸ್ ಗಢದಲ್ಲಿ ಆದಿವಾಸಿ ಸುಮುದಾಯದ ಗ್ರಾಮಸ್ಥರೊಬ್ಬರ ಕೊಲೆ ಪ್ರಕರಣದಲ್ಲಿ ಮಾವೋವಾದಿಗಳ ಜತೆಗೆ ದೆಹಲಿ ವಿವಿ ಪ್ರೊಫೆಸರ್ ನಂದಿನಿ ಸುಂದರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನಂದಿನಿ ಸುಂದರ್ ಅವರ ಜತೆಗೆ ಜವಾಹರ್ ಲಾಲ್ ವಿಶ್ವವಿದ್ಯಾಲಯದ (ಜೆ ಎನ್ ಯು) ಪ್ರಾಧ್ಯಾಪಕಿ ಅರ್ಚನಾ ಪ್ರಸಾದ್ ವಿರುದ್ಧವೂ ಸಹ ಪ್ರಕರಣ ದಾಖಲಿಲಾಗಿದೆ.
ಈ ವರ್ಷ ಏಪ್ರಿಲ್ ನಿಂದ ಆದಿವಾಸಿ ಸಮುದಾಯದ ಬಘೇಲ್ ಮತ್ತು ಅವರ ಸಹಚರರು ನಕ್ಸಲ್ ಚಟುವಟಿಕೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.

ಕಳೆದ ಶುಕ್ರವಾರ ಬಘೇಲ್ ಅವರನ್ನು ಹತ್ಯೆ ಮಾಡಲಾಗಿತ್ತು. ಬಘೇಲ್ ಹತ್ಯೆ ಹಿಂದೆ ನಕ್ಸಲರ ಕೈವಾಡವಿದೆ ಎಂದು ಆರೋಪಿಸಲಾಗಿತ್ತು.
ಪ್ರಾಧ್ಯಪಕರಾದ ನಂದಿನಿ ಸುಂದರ್, ಅರ್ಚನಾ ಪ್ರಸಾದ್ ಜತೆಗೆ ದೆಹಲಿಯ ಜೋಶಿ ಸಂಸ್ಥೆಯ ಅಧಿಕಾರಿ ವಿನೀಶ್ ತಿವಾರಿ, ಛತ್ತೀಸ್ ಘರ್ ಸಿಪಿಐ ಮಾರ್ಕಿಸ್ಟ್ ರಾಜ್ಯ ಕಾರ್ಯದರ್ಶಿ ಸಂಜಯ್ ಪರತೆ ವಿರುದ್ಧವೂ ಸಹ ಪ್ರಕರಣ ದಾಖಲಿಸಲಾಗಿದೆ.
ಕೊಲೆಯಾಗಿರುವ ಬಘೇಲ್ ಅವರ ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಾಧ್ಯಪಕರು ಅಧಿಕಾರಿಗಳು ಸೇರಿದಂತೆ ಇನ್ನೂ ಕೆಲವು ಮಾವೋವಾದಿಗಳ ವಿರುದ್ಧವೂ ಸಹ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಇಲ್ಲಿಯ ಬಸ್ತರ್ ಪ್ರದೇಶದ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ಎಸ್ ಆರ್ ಪಿ ಕಲ್ಲೂರಿ ಹೇಳಿದ್ದಾರೆ.
ಆರೋಪಿಗಳ ವಿರುದ್ಧ ಕೊಲೆ ಗಲಭೆ, ಕ್ರಿಮಿನಲ್ ಪಿತೂರಿ ಆರೋಪಗಳನ್ನು ಹೊರಿಸಿ ತೊಂಗವಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, "ತನಿಖೆಯಲ್ಲಿ ತಪ್ಪು ಸಾಬೀತಾದರೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಐಜಿ ತಿಳಿಸಿದ್ದಾರೆ.
ಈ ಹಿಂದೆ ಬಘೇಲ್ ಮತ್ತು ಇತರ ಗ್ರಾಮಸ್ಥರು ನಂದಿನಿ ಸುಂದರ್, ಅರಚನಾ ಪ್ರಸಾದ್, ತಿವಾರಿ, ಪರತೆ ವಿರುದ್ಧ ತೊಂಗವಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications