'ಡೆಲ್ಟಾ ಪ್ಲಸ್' ರೂಪಾಂತರಿ ಬಗ್ಗೆ ಆತಂಕ ಬೇಡ ಎಂದ ತಜ್ಞರು
ನವದೆಹಲಿ, ಜೂನ್ 16: ದೇಶದಲ್ಲಿ ಪತ್ತೆಯಾಗಿರುವ ಹೊಸ ಡೆಲ್ಟಾ ಪ್ಲಸ್ ರೂಪಂತರಿ ಬಗ್ಗೆ ಜನರು ಆತಂಕ ಪಡುವುದು ಬೇಡ ಎಂದು ತಜ್ಞರು ಹೇಳಿದ್ದಾರೆ.
''ಹೊಸ ರೂಪಾಂತರವು ಸಾರ್ಕ್-ಕೋವ್-2 ನ ಸ್ಪೈಕ್ ಪ್ರೋಟೀನ್ನಲ್ಲಿದೆ. ಇದು ವೈರಸ್ ಮಾನವ ಜೀವಕೋಶಗಳಿಗೆ ಪ್ರವೇಶಿಸಲು ಮತ್ತು ಸೋಂಕು ತಗಲುವಂತೆ ಮಾಡುತ್ತದೆ'' ಎಂದು ದೆಹಲಿ ಸಿಎಸ್ಐಆರ್ ಜೆನೋಮಿಕ್ ಇನ್ಸ್ ಟಿಟ್ಯೂಟ್ ನ ತಜ್ಞ ವಿನೋದ್ ಸ್ಕಾರಿಯಾ ಹೇಳಿದ್ದಾರೆ.
ದೇಶದಲ್ಲಿ ಸಾಂಕ್ರಾಮಿಕ ರೋಗ ಕೋವಿಡ್ ಎರಡನೇ ಅಲೆಗೆ ಡೆಲ್ಟಾ ರೂಪಾಂತರಿ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡೆಲ್ಟಾ ಪ್ಲಸ್ ಅಥವಾ ಎವೈ.1 ಎಂಬ ರೂಪಾಂತರಿ ತಳಿ ಪತ್ತೆಯಾಗಿದೆ. ಆದರೆ ಸದ್ಯದ ಮಟ್ಟಿಗೆ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಮೊನೊಕ್ಲೋನಲ್ ಪ್ರತಿಕಾಯಗಳಾದ ಕ್ಯಾಸಿರಿವಿಮಾಬ್ ಮತ್ತು ಇಮ್ಡೆವಿಮಾಬ್ಗಳಿಗೆ ಪ್ರತಿರೋಧವನ್ನು ಸೂಚಿಸಿರುವ ನಿದರ್ಶನಗಳಿವೆ. ಈ ಕಾಕ್ಟೈಲ್ ಇತ್ತೀಚೆಗೆ ಭಾರತದಲ್ಲಿ ತುರ್ತು ಬಳಕೆಗಾಗಿ ಕೇಂದ್ರ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಸಂಸ್ಥೆಯಿಂದ ಅನುಮೋದನೆ ಪಡೆದುಕೊಂಡಿದೆ. ಡ್ರಗ್ ಸಂಸ್ಥೆಗಳಾದ ರೋಚೆ ಇಂಡಿಯಾ ಮತ್ತು ಸಿಪ್ಲಾಸ್ ಆಂಟಿಬಾಡಿ ಕಾಕ್ಟೈಲ್ಗೆ ಪ್ರತಿ ಡೋಸ್ಗೆ 59,750 ರೂ. ನಿಗದಿ ಮಾಡಿದೆ.
ಡೆಲ್ಟಾ ಅಥವಾ ಬಿ .1.617.2 ರೂಪಾಂತರಿ ಭಾರತದಲ್ಲಿ ಮೊದಲು ಪತ್ತೆಯಾಗಿದ್ದು ಇದ ಕೊರೊನಾ ಎರಡನೇ ಅಲೆಗೆ ಕಾರಣವಾಗಿತ್ತು. ಹೊಸ ರೂಪಾಂತರದಿಂದಾಗಿ ರೋಗದ ತೀವ್ರತೆಯ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲವಾದರೂ ಭಾರತದಲ್ಲಿ ಇತ್ತೀಚೆಗೆ ಅನುಮೋದನೆ ಪಡೆದ ಆಂಟಿಬಾಡಿ ಕಾಕ್ಟೈಲ್ ಮೊನೊಕ್ಲೋನಲ್ ಕೊರೋನಾ ವೈರಸ್ ಡೆಲ್ಟಾ ಪ್ಲಸ್ ನಿರೋಧಕವಾಗಿದೆ.
63 ಜೆನೋಮ್(ಬಿ.1.617.2) ಹೊಸ ತಳಿ ಕೆ417ಎನ್ ಕಾಣಿಸಿಕೊಂಡಿರುವುದಾಗಿ ಬ್ರಿಟನ್ ಆರೋಗ್ಯ ಇಲಾಖೆ ಕೂಡ ತಿಳಿಸಿದೆ. ಇದು ಭಾರತದಲ್ಲಿ ಜೂನ್ 7ರಂದು ಕಾಣಿಸಿಕೊಂಡಿದ್ದು ಭಾರತದಲ್ಲಿ ಹೆಚ್ಚಾಗಿ ಸೋಂಕಿತರಲ್ಲಿ ಕಂಡುಬಂದಿಲ್ಲ. ಆದರೆ ಯುರೋಪ್, ಏಷ್ಯಾ ಹಾಗೂ ಅಮೆರಿಕಾದಲ್ಲಿ ಈ ರೂಪಾಂತರಿ ಪತ್ತೆಯಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications