8th Pay Commission: ಸರ್ಕಾರಿ ನೌಕರರಿಂದ 8ನೇ ವೇತನ ಆಯೋಗಕ್ಕೆ ಬೇಡಿಕೆ ಏಕೆ?
ನವದೆಹಲಿ, ಜೂನ್ 19: ಲೋಕಸಭೆ ಚುನಾವಣೆ ಮುಗಿದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೇಂದ್ರ ಸರ್ಕಾರಿ ನೌಕರರು ನೂತನ ಸರ್ಕಾರ ನೌಕರರಿಗೆ, ಪಿಂಚಣಿದಾರರಿಗೆ ಸಿಹಿಸುದ್ದಿ ನೀಡುವಂತೆ 8ನೇ ವೇತನ ಆಯೋಗ ರಚನೆಯ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗ ರಚನೆ ಮಾಡಿ, ವರದಿ ಪಡೆದು ಅನುಷ್ಠಾನ ಮಾಡುತ್ತದೆ. 2016ರ ಜನವರಿಯಲ್ಲಿ 7ನೇ ವೇತನ ಆಯೋಗ ವರದಿ ನೀಡಿತ್ತು. ಈಗ 2026ರ ಜನವರಿಗೆ 8ನೇ ವೇತನ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಬೇಕು.

ಕೇಂದ್ರ ಸರ್ಕಾರಿ ನೌಕರರ ಜಂಟಿ ಸಲಹಾ ರಾಷ್ಟ್ರೀಯ ಮಂಡಳಿ (ಸಿಬ್ಬಂದಿ ಕಡೆ) ಕಾರ್ಯದರ್ಶಿ ಎಸ್. ಗೋಪಾಲ್ ಮಿಶ್ರಾ ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ. ತಕ್ಷಣ ಸರ್ಕಾರ 8ನೇ ವೇತನ ಆಯೋಗವನ್ನು ಏಕೆ ರಚನೆ ಮಾಡಬೇಕು?, ತುರ್ತು ಅಗತ್ಯ ಏನಿದೆ? ಎಂಬ ಅಂಶವನ್ನು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
8ನೇ ವೇತನ ಆಯೋಗ ರಚನೆ ಏಕೆ?; ಎಸ್. ಗೋಪಾಲ್ ಮಿಶ್ರಾ ತಮ್ಮ ಪತ್ರದಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ/ ಭತ್ಯೆಗಳು/ ಪಿಂಚಣಿ ಪರಿಷ್ಕರಣೆ ಮಾಡಲು 8ನೇ ಕೇಂದ್ರ ವೇತನ ಆಯೋಗವನ್ನು ತಕ್ಷಣ ರಚನೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
7ನೇ ಕೇಂದ್ರ ವೇತನ ಆಯೋಗಗಳ ಶಿಫಾರಸುಗಳನ್ನು ಸರ್ಕಾರವು 1/1/2016ರಿಂದ ಜಾರಿಗೊಳಿಸಿದೆ. ವೇತನ ಆಯೋಗದ ಶಿಫಾರಸಿನಂತೆ ಕನಿಷ್ಠ ವೇತನವನ್ನು ರೂ. 26,000 ತಿಂಗಳಿಗೆ ನಿಗದಿ ಮಾಡಿದೆ. 7ನೇ ವೇತನ ಆಯೋಗದ ಮುಂದೆ ರಾಷ್ಟ್ರೀಯ ಕೌನ್ಸಿಲ್ನ ಸಿಬ್ಬಂದಿ ಪ್ರಸ್ತಾಪಿಸಿದ ಕನಿಷ್ಠ ವೇತನ ಅತ್ಯಂತ ಕಡಿಮೆ ಇತ್ತು. ನಮ್ಮ ಹಲವು ಬೇಡಿಕೆಗಳನ್ನು ಆಯೋಗ ಯಾವುದೇ ವಿವರಣೆ ನೀಡದೆ ತಿರಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.
ನಾವು ಶೇ 3.68 ಫಿಟ್ಮೆಂಟ್ಗೆ ಒತ್ತಾಯಿಸಿದರೆ, 7ನೇ ವೇತನ ಆಯೋಗ ನಮ್ಮೊಂದಿಗೆ ಯಾವುದೇ ಮಾತುಕತೆ ನಡೆಸದೆ 2.57ರಷ್ಟು ಫಿಟ್ಮೆಂಟ್ಗೆ ಶಿಫಾರಸು ಮಾಡಿತು. ಸರ್ಕಾರವು ಅದನ್ನು ನೇರವಾಗಿ ಒಪ್ಪಿಕೊಂಡಿತು. ಸರ್ಕಾರ ಸಹ ಸಿಬ್ಬಂದಿಗಳ ಬಳಿ ಯಾವುದೇ ಚರ್ಚೆ ನಡೆಸದೆ ಮತ್ತು ಸಿಬ್ಬಂದಿಯ ಕಡೆಯ ಪ್ರಸ್ತಾವನೆಗಳನ್ನು ಪರಿಗಣಿಸದೆ ಆಯೋಗದ ಶಿಫಾರಸು ಅಂಗೀಕರಿಸಿದೆ.
ಸರ್ಕಾರ ಕನಿಷ್ಠ ವೇತನ ಮತ್ತು ಫಿಟ್ಮೆಂಟ್ ಅಂಶವನ್ನು ಪರಿಷ್ಕರಿಸಲು ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಸುರೇಶ್ ಪ್ರಭು ಮುಂತಾವರನ್ನು ಒಳಗೊಂಡ ಸಮಿತಿ ರಚನೆ ಮಾಡಿತು. ಈ ಸಮಿತಿ ಸಿಬ್ಬಂದಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಬೇಡಿಕೆಗಳ ಸೌಹಾರ್ದಯುತ ಇತ್ಯರ್ಥಕ್ಕೆ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿತು. ಆದ್ದರಿಂದ ಕೇಂದ್ರ ಸರ್ಕಾರಿ ನೌಕರರು ಕರೆ ನೀಡಿದ್ದ ಮುಷ್ಕರ ಸಹ ಮುಂದಕ್ಕೆ ಹೋಯಿತು.
ಆದರೆ ಸಿಬ್ಬಂದಿಗಳ ಮನವಿ ಆಲಿಸಿದ ಬಳಿಕವೂ ಕನಿಷ್ಠ ವೇತನ ಮತ್ತು ಫಿಟ್ಮೆಂಟ್ ಅಂಶವನ್ನು ಹೆಚ್ಚಿಸಲು ಸರ್ಕಾರವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ. ಸರ್ಕಾರವೇ ಹೇಳುವಂತೆ ಹಣದುಬ್ಬರವು ಸರಾಸರಿ ಶೇ 4 ರಿಂದ 7ರಷ್ಟಿದೆ. ಕೋವಿಡ್ ಬಳಿಕ ಅದು ಕೋವಿಡ್ ಪೂರ್ವ ಪರಿಸ್ಥಿತಿಗಿಂತಲೂ ಹೆಚ್ಚಾಗಿದೆ.
ದೈನಂದಿನ ಜೀವನಕ್ಕೆ ಅಗತ್ಯವಿರುವ ವಸ್ತು ಮತ್ತು ಸರಕುಗಳ ಬೆಲೆಗಳಲ್ಲಿ ನಿರಂತರ ಏರಿಕೆಯಾಗಿದೆ. ಆದರೆ 1/7/2023ರಂತೆ ಶೇ 46ರಷ್ಟು ತುಟ್ಟಿಭತ್ಯೆ ನೀಡಲಾಗಿದೆ. ಸದ್ಯದ ಬೆಲೆ ಏರಿಕೆಯನ್ನು ಗಮನಿಸಿದರೆ ನೌಕರರು ಮತ್ತು ಪಿಂಚಣಿದಾರರಿಗೆ ನೀಡಲಾಗುವ ಡಿಎ ನಡುವೆ ಅಪಾರ ಅಂತರವಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಸರ್ಕಾರವೇ ಬಜೆಟ್ನಲ್ಲಿ ಹೇಳುವಂತೆ 2015 ರಿಂದ 2023ರ ವರೆಗೆ ಕೇಂದ್ರ ಸರ್ಕಾರದ ಆದಾಯವು ದ್ವಿಗುಣಗೊಂಡಿದೆ, ಆದಾಯ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗಿದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರಿ ನೌಕರರ ಲಕ್ಷಾಂತರ ಹುದ್ದೆ ಖಾಲಿ ಇದೆ. ಇದರಿಂದಾಗಿ ಇರುವ ಸಿಬ್ಬಂದಿಗಳ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಸರ್ಕಾರ ತನ್ನ ಆದಾಯದಲ್ಲಿ ಶೇ 7.29ರಷ್ಟು ಮಾತ್ರ ವೇತನ, ಭತ್ಯೆಗಳಿಗೆ ಬಳಕೆ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದೆ.
ವೇತನ ಹೆಚ್ಚಳಕ್ಕೆ 10 ವರ್ಷಗಳ ತನಕ ಕಾಯಬೇಕಿಲ್ಲ. ಬೆಲೆ ಏರಿಕೆ ಸೇರಿ ವಿವಿಧ ಅಂಶಗಳನ್ನು ಪರಿಗಣಿಸಿ ವೇತನ ಪರಿಷ್ಕರಿಸಬಹುದು ಎಂಬ ಶಿಫಾರಸು ಇದೆ. ಸರ್ಕಾರವು ಇದುವರೆಗೆ ಈ ಶಿಫಾರಸುಗಳನ್ನು ಅಂಗೀಕರಿಸಿಲ್ಲ ಅಥವಾ 8 ನೇ ಕೇಂದ್ರ ವೇತನ ಆಯೋಗವನ್ನು ರಚನೆ ಮಾಡಿಲ್ಲ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಡಿಎ ಈಗಾಗಲೇ 1/1/2024ಕ್ಕೆ ಅನ್ವಯವಾಗುವಂತೆ ಶೇ 50ಕ್ಕೆ ಏರಿಕೆಯಾಗಿದೆ.
ಸದ್ಯ ಕೇಂದ್ರದ ಹೆಚ್ಚು ನೌಕರರು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಡಿಯಲ್ಲಿ ಇದ್ದಾರೆ. ಅವರ ಪ್ರತಿ ತಿಂಗಳ ಮೂಲ ವೇತನ ಮತ್ತು ತುಟ್ಟಿಭತ್ಯೆಯಲ್ಲಿ ಶೇ 10ರಷ್ಟನ್ನು ಎನ್ಪಿಎಸ್ಗೆ ಕೊಡುಗೆ ನೀಡಬೇಕು. ಆದ್ದರಿಂದ ನೌಕರರ ಟೇಕ್ ಹೋಮ್ ವೇತನ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಎನ್ಪಿಎಸ್ ರದ್ದುಗೊಳಿಸುವ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈ ಮೇಲಿನ ಎಲ್ಲಾ ಅಂಶಗಳನ್ನು ಮತ್ತು ಇಂದಿನ ದೈನಂದಿನ ಜೀವನದ ಅವಶ್ಯಕತೆಗಳನ್ನು ಸರ್ಕಾರಿ ನೌಕರರ ಬೇಡಿಕೆಯನ್ನು ಪರಿಗಣಿಸಿ 8ನೇ ಕೇಂದ್ರ ವೇತನ ಆಯೋಗವನ್ನು ತಕ್ಷಣವೇ ರಚಿಸಬೇಕು ಮತ್ತು ವೇತನ/ ಭತ್ಯೆಗಳು/ ಪಿಂಚಣಿ ಮತ್ತು ಇತರ ಪ್ರಯೋಜನಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications