ನರೇಗಾ ಯೋಜನೆ; ಆರು ತಿಂಗಳ ನಂತರವೂ ತಗ್ಗಿಲ್ಲ ಬೇಡಿಕೆ
ನವದೆಹಲಿ, ಫೆಬ್ರವರಿ 18: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತಗ್ಗುತ್ತಿದ್ದ ಹಿನ್ನೆಲೆಯಲ್ಲಿ ಆರು ತಿಂಗಳಿನಿಂದ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಆರ್ಥಿಕ ಸುಧಾರಣೆ ಅಗತ್ಯದೊಂದಿಗೆ ಹಂತ ಹಂತವಾಗಿ ಕೆಲವು ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಜೊತೆಗೆ ನರೇಗಾ ಯೋಜನೆಯಡಿಯಲ್ಲಿ ಕೆಲಸಕ್ಕೆ ಬೇಡಿಕೆಯೂ ನಿರಂತರವಾಗಿ ಏರಿದೆ.
ಸುಮಾರು ಎರಡು ಕೋಟಿಗೂ ಅಧಿಕ ಕುಟುಂಬಗಳು ಪ್ರತಿ ತಿಂಗಳು ಈ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪಡೆಯುತ್ತಿವೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿನ ಪ್ರಕರಣಗಳು ಉತ್ತುಂಗದಲ್ಲಿದ್ದ ಆಗಸ್ಟ್, ಸೆಪ್ಟೆಂಬರ್ ತಿಂಗಳಿನಲ್ಲಿ ನರೇಗಾ ಯೋಜನೆ ಪಡೆಯುತ್ತಿದ್ದ ಕುಟುಂಬಗಳ ಸಂಖ್ಯೆ ಡಿಸೆಂಬರ್, ಜನವರಿಯಲ್ಲಿಯೂ ಹಾಗೇ ಮುಂದುವರೆದಿದೆ.
2006ರಿಂದ ಯೋಜನೆ ಪರಿಚಿತಗೊಂಡ ನಂತರ ಇದೇ ಮೊದಲ ಬಾರಿ ನರೇಗಾ ಯೋಜನೆಗೆ ಇಷ್ಟು ಬೇಡಿಕೆ ಕಂಡುಬಂದಿದೆ. ದೇಶಾದ್ಯಂತ 7.17 ಕೋಟಿ ಕುಟುಂಬಗಳು ಫೆಬ್ರವರಿ 17ರವರೆಗೂ ಈ ಯೋಜನೆಯಡಿಯಲ್ಲಿ ದಾಖಲಾಗಿವೆ. ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಧ್ಯ ಪ್ರದೇಶದಲ್ಲಿ ನರೇಗಾದಡಿಯಲ್ಲಿ ಕೆಲಸ ಪಡೆದುಕೊಂಡವರ ಸಂಖ್ಯೆ ಹೆಚ್ಚಿದೆ.

Recommended Video
ಕೊರೊನಾ ಲಾಕ್ ಡೌನ್ ಸಂದರ್ಭ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ಹಳ್ಳಿಗಳಿಗೆ ಮರಳಿದ್ದು, ನರೇಗಾಗೆ ಹಿಂದೆಂದಿಗಿಂತಲೂ ಹೆಚ್ಚಿನ ಬೇಡಿಕೆ ಬಂದಿದೆ. ಜೂನ್ 2020ರಲ್ಲಿ ಅತಿ ಹೆಚ್ಚು ಜನರು ಯೋಜನೆಯಡಿಯಲ್ಲಿ ಕೆಲಸ ಪಡೆದುಕೊಂಡಿದ್ದಾರೆ. 2019ಕ್ಕೆ ಹೋಲಿಸಿದರೆ ಯೋಜನೆಯಲ್ಲಿ 80% ಹೆಚ್ಚಳವಾಗಿರುವುದಾಗಿ ತಿಳಿದುಬಂದಿದೆ.
-
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ












Click it and Unblock the Notifications