ಗೋವಾ ಬೈನಾ ಬೀಚ್ ನಲ್ಲಿ ಕನ್ನಡಿಗರ ಮನೆ ನೆಲಸಮ: ಕರವೇ ಪ್ರತಿಭಟನೆ
Recommended Video
ಯಾದಗಿರಿ, ಸೆಪ್ಟೆಂಬರ್ 27: ಗೋವಾದ ಬೈನಾ ಬೀಚ್'ನಲ್ಲಿ ವಾಸವಿರುವ ಕನ್ನಡಿಗರ ಮನೆಗಳ ತೆರವು ಖಂಡಿಸಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು.
ಬೈನಾ ಕಡಲ ತಡಿಯಲ್ಲಿ ಕನ್ನಡಿಗರ ಕಣ್ಣೀರು
ನಗರದ ಸುಭಾಷ್ ವೃತ್ತದಲ್ಲಿ ಟೈಯರ್ ಹಾಗೂ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಗೋವಾದಲ್ಲಿ ಸುಮಾರು ನಲವತ್ತು ವರ್ಷಗಳಿಂದ ಕನ್ನಡಿಗರು ವಾಸ ಮಾಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಗೋವಾ ಸರ್ಕಾರ ಕನ್ನಡಿಗರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಾ ಬಂದಿದೆ.
ಇದರ ಮುಂದುವರಿದ ಭಾಗವಾಗಿ ಇದೀಗ 55 ಮನೆಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಮನೋಹರ್ ಪರಿಕ್ಕರ್ ನೀತಿ ಖಂಡಿಸಿ ಗೋವಾ ಸರ್ಕಾದ ಹಾಗೂ ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿದರು.
ಗೋವಾದ ಬೈನಾ ಬೀಚ್ ಕನ್ನಡಿಗರ ಮನೆಗಳು ನೆಲಸಮ
ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಕನ್ನಡಿಗರ ರಕ್ಷಣೆಗೆ ಬರಬೇಕು. ಗೋವಾ ಸರ್ಕಾರದ ಜೊತೆ ಮಾತನಾಡಿ ನಿರಾಶ್ರಿತರಿಗೆ ಸೂರು ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದರು.
ಕನಸು ಕಟ್ಟಿಕೊಂಡು ಗೋವಾಕ್ಕೆ ಬಂದಿದ್ದ ಕನ್ನಡಿಗರ ಬದುಕು ಮೂರಾಬಟ್ಟೆ
ಪ್ರತಿಭಟನೆಯಲ್ಲಿ ಕರವೇ ಉತ್ತರ ಕರ್ನಾಟಕದ ಅಧ್ಯಕ್ಷ ಶರಣು ಗದ್ದುಗೆ, ಜಿಲ್ಲಾಧ್ಯಕ್ಷ ಸಿದ್ದುರೆಡ್ಡಿ ತಂಗಡಗಿ, ಅಮರೇಶ, ರವಿ ದೇವರಮನಿ, ಕಾಶಿಂ ಪಟೇಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.