ಉಳಿತಾಯ ಖಾತೆಯಿಂದ ವಿತ್ ಡ್ರಾ: ರಿಸರ್ವ್ ಬ್ಯಾಂಕ್ ಹೊಸ ನಿಯಮ
ಉಳಿತಾಯ ಖಾತೆಯಿಂದ ವಾರವೊಂದಕ್ಕೆ ವಿತ್ ಡ್ರಾ ಮಿತಿಯನ್ನು ರಿಸರ್ವ್ ಬ್ಯಾಂಕ್ ಐವತ್ತು ಸಾವಿರ ರೂಪಾಯಿಗೆ ಏರಿಸಿದೆ.
ನವದೆಹಲಿ, ಫೆ 20: ಅಪನಗದೀಕರಣದಿಂದ ಉಂಟಾಗಿದ್ದ ಚಿಲ್ಲರೆ, ಕರೆನ್ಸಿ ಸಮಸ್ಯೆ ನಿಧಾನವಾಗಿ ಸರಿದಾರಿಗೆ ಬರುತ್ತಿರುವ ಬೆನ್ನಲ್ಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಉಳಿತಾಯ ಖಾತೆಯಿಂದ ಹಣ ಹಿಂಪಡೆಯುವಿಕೆ (ವಿತ್ ಡ್ರಾ) ಮಿತಿಯನ್ನು ಹೆಚ್ಚಿಸಿದೆ.
ಸೋಮವಾರ (ಫೆ 20) ದಿಂದಲೇ ಜಾರಿಗೆ ಬರುವಂತೆ, ವಾರವೊಂದಕ್ಕೆ ಈಗ ಇದ್ದ 24ಸಾವಿರ ಮಿತಿಯನ್ನು 50ಸಾವಿರ ರೂಪಾಯಿಗೆ ಹೆಚ್ಚಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆದೇಶ ಹೊರಡಿಸಿದೆ.
ಹಂತ ಹಂತವಾಗಿ ವಿತ್ ಡ್ರಾ ಮಿತಿಯನ್ನು ಏರಿಕೆ ಮಾಡುತ್ತಾ ಬಂದಿರುವ ರಿಸರ್ವ್ ಬ್ಯಾಂಕ್, ಮಾರ್ಚ್ 13ನೇ ತಾರೀಕಿನ ನಂತರ ವಿತ್ ಡ್ರಾ ಮಿತಿಯನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆಯುವುದಾಗಿ ಈಗಾಗಲೇ ಪ್ರಕಟಿಸಿದೆ.

ಕಳೆದ ಜನವರಿ 30ಕ್ಕೆ ಹಣ ಹಿಂಪಡೆಯುವಿಕೆ ಮಿತಿಯನ್ನು 24 ಸಾವಿರ ರೂಪಾಯಿಗೆ ಆರ್ಬಿಐ ಏರಿಸಿತ್ತು. ಇದಕ್ಕೆ ಮೊದಲು ಜನವರಿ ಹದಿನಾರರಂದು ವಾರಕ್ಕೆ ನಾಲ್ಕು ಸಾವಿರ ರೂಪಾಯಿ ಇದ್ದ ಮಿತಿಯನ್ನು ಹತ್ತು ಸಾವಿರ ರೂಪಾಯಿಗೆ ಏರಿಸಲಾಗಿತ್ತು.
ಈ ನಡುವೆ ಹತ್ತಕ್ಕಿಂತ ಹೆಚ್ಚು ಹಳೆಯ ಐನೂರು ಮತ್ತು ಸಾವಿರ ರೂಪಾಯಿ ನೋಟು ಹೊಂದಿರುವುದು ಅಪರಾಧ ಎನ್ನುವ ಕಾನೂನು ಲೋಕಸಭೆಯಲ್ಲಿ ಆಂಗೀಕಾರಗೊಂಡಿದೆ. ಈ ಕಾನೂನಿನನ್ವಯ ಕನಿಷ್ಠ ಹತ್ತು ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ನವೆಂಬರ್ ಎಂಟರ ನೋಟು ನಿಷೇಧದ ಸಂದರ್ಭದಲ್ಲಿ ಹಳೆಯ ಐನೂರು ಮತ್ತು ಸಾವಿರ ರೂಪಾಯಿಯ 15.4 ಲಕ್ಷ ಕೋಟಿ ಹಣ ಚಲಾವಣೆಯಲ್ಲಿ ಇತ್ತು ಕೇಂದ್ರ ಸರಕಾರ ತಿಳಿಸಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications