ಮೋದಿಯವರ ಅಂತ್ಯದ ಆರಂಭವಾಗಿದೆ : ಸಿಂಗ್ ವ್ಯಂಗ್ಯ
ನವದೆಹಲಿ, ಜನವರಿ 11 : ಅಪನಗದೀಕರಣದ ವಿರುದ್ಧ ಕಾಂಗ್ರೆಸ್ ಆಯೋಜಿಸಿರುವ ಜನ ವೇದನಾ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಮತ್ತು ಪಿ ಚಿದಂಬರಂ ನಂತರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ಆರಂಭಿಸಿದ್ದಾರೆ.
ಭಾರತದ ಹಣಕಾಸು ವ್ಯವಸ್ಥೆಯನ್ನು ಬದಲಾಯಿಸುವುದಾಗಿ ನರೇಂದ್ರ ಮೋದಿ ವಾಗ್ದಾನ ನೀಡಿದ್ದರು. ಆದರೆ, ಈಗ ಅವರದೇ ಅಂತ್ಯ ಆರಂಭವಾಗಿರುವುದು ವಿಪರ್ಯಾಸ ಎಂದು ಮನಮೋಹನ ಸಿಂಗ್ ಅವರು ಬುಧವಾರ ವ್ಯಂಗ್ಯವಾಡಿದರು.[ನರೇಂದ್ರ ಮೋದಿ ವಿರುದ್ಧ ದೇವೇಗೌಡರು ಗುಡುಗಿದ್ದೇಕೆ?]

ಅಪನಗದೀಕರಣದಿಂದ ಭಾರತಕ್ಕೆ ಭಾರೀ ಹೊಡೆತ ಬಿದ್ದಿದೆ. ಕಳೆದ ಕೆಲ ತಿಂಗಳಲ್ಲಿ ಕೆಟ್ಟ ಪರಿಸ್ಥಿತಿ ಇನ್ನಷ್ಟು ವಿಷಮಿಸಿದೆ. ಮುಂದಿನ ಎರಡು ವರ್ಷಗಳಲ್ಲಿ ರಾಷ್ಟ್ರದ ಆದಾಯ ಹೆಚ್ಚಾಗುತ್ತದೆ ಎಂಬ ಮೋದಿಯವರ ಆಲೋಚನೆ ತಳಹದಿ ಇಲ್ಲದ್ದು ಎಂದು ಅವರು ಕಿಡಿಕಾರಿದರು.
ಭಾರತದ ಜಿಡಿಪಿ ಶೇ.6.3ಕ್ಕೆ ಇಳಿಯಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಇದರಿಂದ ಅಪನಗದೀಕರಣ ಎಂಥ ಅನಾಹುತ ಮಾಡಿದೆ ಎಂಬುದನ್ನು ಊಹಿಸಿಕೊಳ್ಳಬಹುದು ಎಂದು ಮಾಜಿ ಪ್ರಧಾನಿ ವಿಶ್ಲೇಷಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಯುವ ನೇತಾರ ಸಚಿನ್ ಪೈಲಟ್ ಅವರು, ಪ್ರಧಾನ ಮಂತ್ರಿಯವರಿಗೆ ಪದ್ಮಾಸನ ಮಾಡುವ ಅವಶ್ಯಕತೆಯೇ ಇಲ್ಲ. ಅವರು ಇಡೀ ಹಿಂದೂಸ್ತಾನದ ಶಿರ್ಸಾಸನ ಮಾಡಿದ್ದಾರೆ ಎಂದು ಮಾತಿನ ಚಾಟಿ ಬೀಸಿದರು.[ಪ್ರಿಂಟಿಂಗ್ ಪ್ರೆಸ್ ನಿಂದ ನೇರ ಕಾಳಧನಿಕರ ಮನೆ ತಲುಪಿವೆ ಹೊಸ ನೋಟುಗಳು!]
ಅಪನಗದೀಕರಣವನ್ನು ತೀವ್ರವಾಗಿ ಟೀಕಿಸಿರುವ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರು, ನವೆಂಬರ್ 8ರಂದು ಸಂಪುಟ ಸಭೆ ನಡೆದ ಯಾವುದೇ ದಾಖಲೆಗಳಿಲ್ಲ. ಅಪನಗದೀಕರಣವನ್ನು ಘೋಷಿಸುವ ಸಮಯದಲ್ಲಿ ನರೇಂದ್ರ ಮೋದಿಯವರು ಎಲ್ಲ ಮಂತ್ರಿಗಳನ್ನು ಕೈದಿಗಳನ್ನಾಗಿಸಿದ್ದರು ಎಂದು ಮಾರ್ಮಿಕವಾಗಿ ನುಡಿದರು.
ಅಪನಗದೀಕರಣ ಪ್ರಕಟಿಸುವ ಸಮಯದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಷ್ಟು ನಿರ್ದೇಶಕರಿಗೆ ನೋಟೀಸ್ ನೀಡಿತ್ತು? ಅವರಿಗೆ ಎಷ್ಟು ಸಮಯ ನೀಡಲಾಗಿತ್ತು ಎಂದು 2012ರಿಂದ 2014ರ ನಡುವೆ ಯುಪಿಎ ಸರಕಾರದಲ್ಲಿ ವಿತ್ತ ಸಚಿವರಾಗಿದ್ದ ಪಿ ಚಿದಂಬರಂ ಅವರು ಖಾರವಾಗಿ ನುಡಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications