'ಡೆಂಗ್ಯೂ ರೋಗಿಗೆ ನೀಡಿದ್ದು ಮೋಸಂಬಿ ಜ್ಯೂಸ್ ಅಲ್ಲ ಕಳಪೆ ಪ್ಲೇಟ್ಲೆಟ್' -ಪ್ರಯಾಗರಾಜ್ ಜಿಲ್ಲಾಧಿಕಾರಿ
ಲಕ್ನೋ ಅಕ್ಟೋಬರ್ 27: ಪ್ರಯಾಗ್ರಾಜ್ ಆಸ್ಪತ್ರೆಯೊಂದರಲ್ಲಿ ವೈದ್ಯರು ಪ್ಲಾಸ್ಮಾ ಬದಲಿಗೆ ಮೊಸಂಬಿ ಜ್ಯೂಸ್ ಅನ್ನು ಡೆಂಗ್ಯೂ ರೋಗಿಗೆ ಇಂಜೆಕ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಕಿಗೆ ಬಂದ ನಂತರ, ಪ್ರಯಾಗರಾಜ್ ಜಿಲ್ಲಾಧಿಕಾರಿ ಆರೋಪವನ್ನು ನಿರಾಕರಿಸಿದ್ದಾರೆ. ಬದಲಿಗೆ ರೋಗಿಗೆ ಕಳಪೆಯಾಗಿ ಸಂರಕ್ಷಿಸಲ್ಪಟ್ಟ ಪ್ಲೇಟ್ಲೆಟ್ಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.
ಗ್ಲೋಬಲ್ ಹಾಸ್ಪಿಟಲ್ ಮತ್ತು ಟ್ರಾಮಾ ಸೆಂಟರ್ ಹೆಸರಿನ ಖಾಸಗಿ ಆಸ್ಪತ್ರೆಯನ್ನು ಪ್ರಕ್ರಿಯೆ ಆರಂಭಿಸಿದ ನಂತರ ನೆಲಸಮಗೊಳಿಸಲಾಗುವುದು ಎಂದು ಅಧಿಕಾರಿ ಹೇಳಿದರು. ಘಟನೆಯ ನಂತರ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸೂಚನೆಯ ಮೇರೆಗೆ ಅದನ್ನು ಮೊಹರು ಮಾಡಲಾಗಿದೆ.
ರೋಗಿಗೆ ಪ್ಲೇಟ್ಲೆಟ್ ಬದಲು ನಿಂಬೆ ರಸ ನೀಡಲಾಗಿದೆ ಎಂದು ರೊಗಿಯ ಕುಟುಂಬದವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನೆಡೆಸಿದ ಜಿಲ್ಲಾಧಿಕಾರಿ ಇದನ್ನು ಅಲ್ಲಗಳೆದಿದ್ದಾರೆ. 32 ವರ್ಷದ ರೋಗಿಯಾದ ಪ್ರದೀಪ್ ಪಾಂಡೆ ಅವರು ಡೆಂಗ್ಯೂನಿಂದ ಬಳಲುತ್ತಿದ್ದರು ಮತ್ತು ವಾರದ ಹಿಂದೆ ಪ್ಲೇಟ್ಲೆಟ್ ನೀಡಲಾಯಿತು. ನಂತರ ಅವರ ಆರೋಗ್ಯ ಹದಗೆಟ್ಟಾಗ ಅವರನ್ನು ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಅಲ್ಲಿ ಅವರು ನಿಧನರಾದರು ಎಂದು ಘೋಷಿಸಲಾಯಿತು.

ಪ್ರಯಾಗರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಪಷ್ಟನೆ
ಬಳಿಕ ಪ್ಲಾಸ್ಮಾ ಪ್ಯಾಕ್ನಲ್ಲಿ ರಕ್ತದ ಪ್ಲೇಟ್ಲೆಟ್ಗಳ ಬದಲಿಗೆ ಸಿಹಿ ನಿಂಬೆ ರಸವಿದೆ ಎಂದು ಹೇಳುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಬಳಿಕ ಇದರ ತನಿಖೆ ನಡೆಸಲಾಗಿದ್ದು ರೋಗಿಗೆ ಕಳಪೆಯಾಗಿ ಸಂರಕ್ಷಿಸಲ್ಪಟ್ಟ ಪ್ಲೇಟ್ಲೆಟ್ಗಳನ್ನು ನೀಡಲಾಗಿದೆ ಎಂಬುದು ಬಹಿರಂಗಗೊಂಡಿದೆ.

ಆಸ್ಪತ್ರೆ ತೆರವುಗೊಳಿಸುವುದಾಗಿ ನೋಟಿಸ್
ಅಕ್ಟೋಬರ್ 20 ರಂದು ಘಟನೆ ಬೆಳಕಿಗೆ ಬಂದಿದೆ. ಇದಕ್ಕೂ ಮೊದಲು ಅಕ್ಟೋಬರ್ 19 ರಂದು ಆಸ್ಪತ್ರೆಯ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಆಸ್ಪತ್ರೆಯ ಆವರಣವು ಅನಧಿಕೃತವಾಗಿದೆ ಎಂದು ತಿಳಿಸಲಾಗಿದೆ. ಅಕ್ಟೋಬರ್ 28 ರೊಳಗೆ ಕಟ್ಟಡವನ್ನು ತೆರವು ಮಾಡಬೇಕು ಎಂದು ನೋಟಿಸ್ ಜಾರಿ ಮಾಡಲಾಗಿದೆ.

ಕೊನೆಗೂ ಬಯಲಾಯಿತು ಸತ್ಯ
ರೋಗಿಗಳ ಸಂಬಂಧಿಕರಿಂದಲೇ ಪ್ಲೇಟ್ಲೆಟ್ಗಳನ್ನು ಖರೀದಿಸಲಾಗಿದೆ ಎಂದು ಆಸ್ಪತ್ರೆಯು ಆರೋಪಗಳನ್ನು ತಳ್ಳಿಹಾಕಿದೆ. ಆಸ್ಪತ್ರೆಯ ಮಾಲೀಕರು, ರೋಗಿಯ ಪ್ಲೇಟ್ಲೆಟ್ ಮಟ್ಟವು 17,000 ಕ್ಕೆ ಇಳಿದಿತ್ತು, ನಂತರ ಅವರ ಸಂಬಂಧಿಕರಿಗೆ ರಕ್ತದ ಪ್ಲೇಟ್ಲೆಟ್ಗಳನ್ನು ವ್ಯವಸ್ಥೆ ಮಾಡಲು ಕೇಳಲಾಯಿತು. "ಅವರು ಸರ್ಕಾರಿ ಆಸ್ಪತ್ರೆಯಿಂದ ಐದು ಯೂನಿಟ್ ಪ್ಲೇಟ್ಲೆಟ್ಗಳನ್ನು ತಂದರು. ಮೂರು ಯುನಿಟ್ ಪ್ಲೇಟ್ಲೆಟ್ ನೀಡಿದ ನಂತರ ರೋಗಿಗೆ ರಿಯಾಕ್ಷನ್ ಆಗಿದೆ. ಆದ್ದರಿಂದ ನಾವು ಅದನ್ನು ನಿಲ್ಲಿಸಿದ್ದೇವೆ" ಎಂದು ಆಸ್ಪತ್ರೆಯ ಮಾಲೀಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೀಗ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಯಾಗ್ರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಖತ್ರಿ ನೀಡಿದ್ದಾರೆ.

ಸೂಕ್ತ ಕ್ರಮಕ್ಕೆ ಕೇಂದ್ರ ಸೂಚನೆ
ಇತ್ತೀಚೆಗೆ ಯುಪಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಫಿರೋಜಾಬಾದ್, ಆಗ್ರಾ ಮತ್ತು ಇಟಾವಾ ಜಿಲ್ಲೆಗಳಲ್ಲಿ ಡೆಂಗ್ಯೂ ನಿರ್ವಹಣೆಗೆ ಸಂಬಂಧಿಸಿದಂತೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯದ ಉನ್ನತ ಮಟ್ಟದ ತಂಡವನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗಿತ್ತು. ಡೆಂಗ್ಯೂ ಪ್ರಕರಣಗಳನ್ನು ಪರಿಶೀಲಿಸಲು ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸ್ಥಾಪಿಸುವಲ್ಲಿ ಕೇಂದ್ರದ ತಂಡವು ರಾಜ್ಯ ಆರೋಗ್ಯ ಅಧಿಕಾರಿಗಳೊಂದಿಗೆ ಸಹಕರಿಸುತ್ತಿರುವುದು ತಿಳಿದು ಬಂದಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications