ಅನ್ಯ ಧರ್ಮದ ಅವಹೇಳನ ಭಾರತೀಯ ಸಂಸ್ಕೃತಿಯಲ್ಲ: ವೆಂಕಯ್ಯ ನಾಯ್ಡು
ನವದೆಹಲಿ,ಜುಲೈ.16: ವಿಭಜಕ ಕಾರ್ಯಸೂಚಿಯ ಮೂಲಕ ರಾಷ್ಟ್ರದ ಶಾಂತಿ ಮತ್ತು ಸಮಗ್ರತೆಗೆ ಧಕ್ಕೆ ತರುವ ಶಕ್ತಿಗಳು ಮತ್ತು ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಸಂಸ್ಕೃತಿ, ಧರ್ಮ ಅಥವಾ ಭಾಷೆಯನ್ನು ಅವಹೇಳನ ಮಾಡುವುದು ಭಾರತೀಯ ಸಂಸ್ಕೃತಿಯಲ್ಲ ಎಂದು ಒತ್ತಿ ಹೇಳಿದ ಅವರು, ಭಾರತವನ್ನು ದುರ್ಬಲಗೊಳಿಸುವ, ಒಗ್ಗೂಡಿಸುವ ಮತ್ತು ರಾಷ್ಟ್ರದ ಹಿತಾಸಕ್ತಿಗಳನ್ನು ಕಾಪಾಡುವಂತಹ ಪ್ರಯತ್ನಗಳನ್ನು ತಡೆಯಲು ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.
ಅನ್ಯಧರ್ಮದ ಅವಹೇಳನ ಇದು ಭಾರತೀಯತೆ ಅಲ್ಲ, ಇದು ಸ್ವೀಕಾರಾರ್ಹವಲ್ಲ. ಎಲ್ಲರೂ ಪ್ರತಿಭಟಿಸಿ ಇಂತಹ ಘಟನೆಗಳನ್ನು ತಡೆಯಬೇಕು. ದೇಶದ ಜನರು ಒಗ್ಗೂಡಿ ದುಷ್ಟ ಯೋಜನೆಗಳನ್ನು ಸೋಲಿಸಬೇಕು. ಧಾರ್ಮಿಕ ಸಹಿಷ್ಣುತೆ ನಮ್ಮ ಹೃದಯದಲ್ಲಿ ತಲೆಮಾರುಗಳಿಂದ ಬೇರೂರಿದೆ. ನಾವು ಈ ಚೈತನ್ಯವನ್ನು ಮುಂದಕ್ಕೆ ಕೊಂಡೊಯ್ಯಬೇಕು ಮತ್ತು ಶಕ್ತಿಯುತ ಭಾರತವನ್ನು ನಿರ್ಮಿಸುವ ಪ್ರಯತ್ನಗಳ ಭಾಗವಾಗಬೇಕು. ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳ ಮೂಲಕ ನವ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆಯನ್ನು ಕುಗ್ಗಿಸುವ ಪ್ರಯತ್ನಗಳನ್ನು ಖಂಡಿಸಿದ ನಾಯ್ಡು, ಭಾರತದ ನಾಗರಿಕತೆಯ ಮೌಲ್ಯಗಳು ಎಲ್ಲಾ ಸಂಸ್ಕೃತಿಗಳ ಬಗ್ಗೆ ಗೌರವ ಮತ್ತು ಸಹಿಷ್ಣುತೆಯನ್ನು ಕಲಿಸುತ್ತವೆ. ಕೆಲವೇ ಘಟನೆಗಳು ಭಾರತದ ಜಾತ್ಯತೀತ ನೀತಿಯನ್ನು ಹಾಳುಮಾಡಲು ಸಾಧ್ಯವಿಲ್ಲ. ಭಾರತದ ಸಂಸದೀಯ ಪ್ರಜಾಪ್ರಭುತ್ವ ಮತ್ತು ಬಹುತ್ವದ ಮೌಲ್ಯಗಳು ಜಗತ್ತಿಗೆ ಅನುಕರಿಸಲು ಮಾದರಿಯಾಗಿದೆ ಎಂದು ಪುನರುಚ್ಚರಿಸಿದರು.
ಇಂದು ವಿಜಯವಾಡದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಪತ್ರಕರ್ತ ದಾಮರಾಜು ಪುಂಡರೀಕಾಕ್ಷುಡು ಅವರ ಜೀವನ ಪಯಣ ಪುಸ್ತಕವನ್ನು ಬಿಡುಗಡೆ ಮಾಡಿದ ನಾಯ್ಡು, ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ಅನೇಕ ತ್ಯಾಗಗಳನ್ನು ಸ್ಮರಿಸಲು 'ಆಜಾದಿ ಕಾ ಅಮೃತ್ ಮಹೋತ್ಸವ' ನಮಗೆ ಅವಕಾಶ ನೀಡುತ್ತದೆ ಎಂದು ಹೇಳಿದರು.

ಮಾಧ್ಯಮ ಸಂಸ್ಥೆಗಳಿಗೆ ನಾಯ್ಡು ಕರೆ
ಹಾಡುಗಳು ಮತ್ತು ನಾಟಕಗಳ ಮೂಲಕ ಗಾಂಧೀಜಿಯವರ ಕೊಡುಗೆಗಳನ್ನು ಜನಪ್ರಿಯಗೊಳಿಸುವಲ್ಲಿ ದಾಮರಾಜು ಅವರ ಮಹತ್ತರವಾದ ಪ್ರಯತ್ನಗಳನ್ನು ಶ್ಲಾಘಿಸಿದ ನಾಯ್ಡು, ನಮ್ಮ ನಾಯಕರ ಜೀವನ ಪಾಠಗಳ ಬಗ್ಗೆ ಯುವ ಪೀಳಿಗೆಗೆ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮಗಳು ಮತ್ತು ಸರಣಿ ಲೇಖನಗಳ ಮೂಲಕ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಪ್ರಯತ್ನಗಳನ್ನು ಮಾಧ್ಯಮ ಸಂಸ್ಥೆಗಳು ಎತ್ತಿ ತೋರಿಸಬೇಕೆಂದು ಕರೆ ನೀಡಿದರು.

ತಾರತಮ್ಯದಿಂದ ದೇಶ ದುರ್ಬಲ
ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ನಿಜವಾದ ಗೌರವವಾಗಿ ಬಡತನ, ಅನಕ್ಷರತೆ, ಸಾಮಾಜಿಕ ತಾರತಮ್ಯ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಮುಕ್ತ ಭಾರತವನ್ನು ನಿರ್ಮಿಸಲು ಯುವಕರು ಶ್ರಮಿಸಬೇಕು. ಸಮಾಜದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವೆ, ಸಾಮಾಜಿಕ ವರ್ಗಗಳ ನಡುವೆ ಮತ್ತು ಲಿಂಗಗಳ ನಡುವಿನ ತಾರತಮ್ಯ ಅಂತಿಮವಾಗಿ ದೇಶವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ನಮಗೆ ನೆನಪಿಸಿದರು ಎಂದು ಹೇಳಿದರು.

ಮೋದಿಯವರ ಇಂಗಿತಕ್ಕೆ ಶ್ಲಾಘನೆ
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಈ ಭಾಗದ ನಾಯಕರ ವಿವಿಧ ಪ್ರಯತ್ನಗಳನ್ನು ಸ್ಮರಿಸಿದ ನಾಯ್ಡು, ಇತ್ತೀಚೆಗೆ ಆಂಧ್ರಪ್ರದೇಶದ ಭೀಮಾವರಂನಲ್ಲಿ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರ ಇಂಗಿತವನ್ನು ಶ್ಲಾಘಿಸಿದರು.

ಶಿಸ್ತಿನಿಂದ ಶ್ರಮಿಸಿ ಯಶಸ್ಸು ಸಾಧಿಸಲು ಕರೆ
ಈ ಸಂದರ್ಭದಲ್ಲಿ ವೆಂಕಯ್ಯ ನಾಯ್ಡು ವಿಜಯವಾಡದ ಸ್ವರ್ಣ ಭಾರತ ಟ್ರಸ್ಟ್ನಲ್ಲಿ ವಿವಿಧ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಆಯ್ಕೆ ಮಾಡಿದ ಪ್ರಶಿಕ್ಷಣಾರ್ಥಿಗಳು ಶಿಸ್ತಿನಲ್ಲಿ ಶ್ರಮಿಸಿ ಯಶಸ್ಸು ಸಾಧಿಸುವಂತೆ ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಮಾಜಿ ಸಚಿವ ಕಾಮಿನೇನಿ ಶ್ರೀನಿವಾಸ್, ಪುಸ್ತಕದ ಲೇಖಕ ಯಲ್ಲಪ್ರಗಡ ಮಲ್ಲಿಕಾರ್ಜುನ ರಾವ್, ಸ್ವರ್ಣ ಭಾರತ್ ಟ್ರಸ್ಟ್ನ ಆಡಳಿತ ಮಂಡಳಿ, ಇತರ ಗಣ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications