ಮಾನಸಿಕ ಒತ್ತಡ: ಕರ್ನಾಟಕದಲ್ಲಿ ನಿತ್ಯ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ!
ಬೆಂಗಳೂರು, ಜನವರಿ 06: ಮಾನಸಿಕ ಒತ್ತಡ ನಿರ್ವಹಣೆ ವೈಫಲ್ಯದ ಪರಿಣಾಮ ಪ್ರತಿನಿತ್ಯ ರಾಜ್ಯದಲ್ಲಿ ಸರಾಸರಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.
ದೇಶದಲ್ಲೇ ತಮಿಳುನಾಡಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಪ್ರವೃತ್ತಿ ಹೆಚ್ಚಿದ್ದು, ಕರ್ನಾಟಕ, ತೆಲಂಗಾಣ ನಂತರದ ಸ್ಥಾನದಲ್ಲಿದೆ. ಇತ್ತೀಚೆಗೆ ದೊರೆತ ಅಂಕಿ ಅಂಶಗಳ ಪ್ರಕಾರ 2016 ರಲ್ಲಿ ಕರ್ನಾಟಕದಲ್ಲಿ 540 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮಿಳುನಾಡಿನಲ್ಲಿ 981 ಪ್ರಕರಣಗಳು ದಾಖಲಾಗಿವೆ. ಆಂಧ್ರ ಪ್ರದೇಶದಲ್ಲಿ 295, ತೆಲಂಗಾಣದಲ್ಲಿ 349 ಹಾಗೂ ಕೇರಳದಲ್ಲಿ 340 ಪ್ರಕರಣಗಳು ದಾಖಲಾಗಿದೆ.ಆಂಧ್ರ ಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಇಂತಹ ಪ್ರಕರಣಗಳು ನಡೆದಿದೆ.

ತಜ್ಞರ ಪ್ರಕಾರ ಡ್ರಗ್ಸ್, ಮದ್ಯಪಾನ ಹೀಗೆ ಅನೇಕ ದುಷ್ಟಟಗಳಿಗೆ ಬಿದ್ದು ಅದರಿಂದ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕ್ಷಣಕಾಲ ತಮ್ಮ ನೋವುಗಳಿಂದ ಬಿಡುಗಡೆ ಹೊಂದಲು ದುಷ್ಚಟಗಳಿಗೆ ತಮ್ಮನ್ನು ಒಳಗಾಗಿಸಿಕೊಳ್ಳುತ್ತಾರೆ ಆದರೆ ಅವರಿಗೆ ತಾವು ಅದರಿಂದ ಹೊರ ಬರಲು ಸಾದ್ಯವೇ ಇಲ್ಲ ಎಂದು ಅರಿವು ಅವರ ಜೀವನದ ಅಂತ್ಯದವರೆಗೂ ತಿಳಿಯುವುದೇ ಇಲ್ಲ.
ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರು ಹೇಳುವ ಪ್ರಕಾರ ಶೇ. 10 ರಿಂದ 15 ರಷ್ಟು ವಿದ್ಯಾರ್ಥಿಗಳು ಮದ್ಯಪಾನ, ಡ್ರಗ್ ಸೇವೆನೆಗೆ ಒಳಗಾಗಿ ಅದರ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳು ಯಾವ ದಾರಿಯಲ್ಲಿ ಹೋಗುತ್ತಿದ್ದಾರೆ ಎನ್ನುವ ಕುರಿತು ನಿಗಾವಹಿಸುವ ಅಗತ್ಯವಿದೆ.
ಜತೆಗೆ ಸಾದ್ಯವಾದಷ್ಟು ಹೊತ್ತು ಮಕ್ಕಳೊಂದಿಗೆ ಸಮಯವನ್ನು ಕಳೆಯಬೇಕು. ಅದರೊಂದಿಗೆ ಮಕ್ಕಳ ಆಹಾರ ವಿಧಾನ, ಅವರ ಹವ್ಯಾಸಗಳನ್ನು ಬದಲಾಯಿಸಬೇಕಿದೆ. ಇಲ್ಲವಾದರೆ ಮಕ್ಕಳನ್ನು ಶಾಸ್ವತವಾಗಿ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ( 2014 ರಿಂದ 2016 ರವರೆಗೆ)
ತಮಿಳುನಾಡು-2,789
ಕರ್ನಾಟಕ-1,707
ತೆಲಂಗಾಣ-1,193
ಕೇರಳ-1,132
ಆಂಧ್ರಪ್ರದೇಶ-988
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications