ಮಾನಸಿಕ ಒತ್ತಡ: ಕರ್ನಾಟಕದಲ್ಲಿ ನಿತ್ಯ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ!
ಬೆಂಗಳೂರು, ಜನವರಿ 06: ಮಾನಸಿಕ ಒತ್ತಡ ನಿರ್ವಹಣೆ ವೈಫಲ್ಯದ ಪರಿಣಾಮ ಪ್ರತಿನಿತ್ಯ ರಾಜ್ಯದಲ್ಲಿ ಸರಾಸರಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.
ದೇಶದಲ್ಲೇ ತಮಿಳುನಾಡಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಪ್ರವೃತ್ತಿ ಹೆಚ್ಚಿದ್ದು, ಕರ್ನಾಟಕ, ತೆಲಂಗಾಣ ನಂತರದ ಸ್ಥಾನದಲ್ಲಿದೆ. ಇತ್ತೀಚೆಗೆ ದೊರೆತ ಅಂಕಿ ಅಂಶಗಳ ಪ್ರಕಾರ 2016 ರಲ್ಲಿ ಕರ್ನಾಟಕದಲ್ಲಿ 540 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮಿಳುನಾಡಿನಲ್ಲಿ 981 ಪ್ರಕರಣಗಳು ದಾಖಲಾಗಿವೆ. ಆಂಧ್ರ ಪ್ರದೇಶದಲ್ಲಿ 295, ತೆಲಂಗಾಣದಲ್ಲಿ 349 ಹಾಗೂ ಕೇರಳದಲ್ಲಿ 340 ಪ್ರಕರಣಗಳು ದಾಖಲಾಗಿದೆ.ಆಂಧ್ರ ಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಇಂತಹ ಪ್ರಕರಣಗಳು ನಡೆದಿದೆ.

ತಜ್ಞರ ಪ್ರಕಾರ ಡ್ರಗ್ಸ್, ಮದ್ಯಪಾನ ಹೀಗೆ ಅನೇಕ ದುಷ್ಟಟಗಳಿಗೆ ಬಿದ್ದು ಅದರಿಂದ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕ್ಷಣಕಾಲ ತಮ್ಮ ನೋವುಗಳಿಂದ ಬಿಡುಗಡೆ ಹೊಂದಲು ದುಷ್ಚಟಗಳಿಗೆ ತಮ್ಮನ್ನು ಒಳಗಾಗಿಸಿಕೊಳ್ಳುತ್ತಾರೆ ಆದರೆ ಅವರಿಗೆ ತಾವು ಅದರಿಂದ ಹೊರ ಬರಲು ಸಾದ್ಯವೇ ಇಲ್ಲ ಎಂದು ಅರಿವು ಅವರ ಜೀವನದ ಅಂತ್ಯದವರೆಗೂ ತಿಳಿಯುವುದೇ ಇಲ್ಲ.
ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರು ಹೇಳುವ ಪ್ರಕಾರ ಶೇ. 10 ರಿಂದ 15 ರಷ್ಟು ವಿದ್ಯಾರ್ಥಿಗಳು ಮದ್ಯಪಾನ, ಡ್ರಗ್ ಸೇವೆನೆಗೆ ಒಳಗಾಗಿ ಅದರ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳು ಯಾವ ದಾರಿಯಲ್ಲಿ ಹೋಗುತ್ತಿದ್ದಾರೆ ಎನ್ನುವ ಕುರಿತು ನಿಗಾವಹಿಸುವ ಅಗತ್ಯವಿದೆ.
ಜತೆಗೆ ಸಾದ್ಯವಾದಷ್ಟು ಹೊತ್ತು ಮಕ್ಕಳೊಂದಿಗೆ ಸಮಯವನ್ನು ಕಳೆಯಬೇಕು. ಅದರೊಂದಿಗೆ ಮಕ್ಕಳ ಆಹಾರ ವಿಧಾನ, ಅವರ ಹವ್ಯಾಸಗಳನ್ನು ಬದಲಾಯಿಸಬೇಕಿದೆ. ಇಲ್ಲವಾದರೆ ಮಕ್ಕಳನ್ನು ಶಾಸ್ವತವಾಗಿ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ( 2014 ರಿಂದ 2016 ರವರೆಗೆ)
ತಮಿಳುನಾಡು-2,789
ಕರ್ನಾಟಕ-1,707
ತೆಲಂಗಾಣ-1,193
ಕೇರಳ-1,132
ಆಂಧ್ರಪ್ರದೇಶ-988
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ











Click it and Unblock the Notifications