ಸಚಿವ ಮಾಧುಸ್ವಾಮಿ ಹೇಳಿಕೆಗೆ ಮುಂಬೈ ಯಾರಪ್ಪನದ್ದಲ್ಲ ಎಂದ ಫಡ್ನವೀಸ್
ಮುಂಬೈ, ಡಿಸೆಂಬರ್ 29: ಸಚಿವ ಜೆ. ಮಧುಸ್ವಾಮಿ ಅವರ ಮುಂಬೈ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಇದು ಯಾರಪ್ಪನ ಮನೆ ಸ್ವತ್ತಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ನಡುವೆಯೇ ಮಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಹಾರಾಷ್ಟ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ವಿಷಯದ ಬಗ್ಗೆ ಪತ್ರ ಬರೆಯಲಾಗುವುದು ಎಂದು ಅವರು, ಇಂತಹ ಕೂಗುಮಾರಿಗಳಿಗೆ ಛೀಮಾರಿ ಹಾಕುವಂತೆ ಕೇಂದ್ರ ಸಚಿವ ಶಾ ಅವರಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.
ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಅವರು (ಮಹಾರಾಷ್ಟ್ರ ನಾಯಕರು) ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಾನು ಆ ಜನರಿಗೆ ಹೇಳಲು ಬಯಸುತ್ತೇನೆ, ಅಂತಹ ಎರಡು ಅಥವಾ ಮೂರು ನಗರಗಳು ದೇಶದಲ್ಲಿ ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಬಹುದು. ಅದರಲ್ಲಿ ಮುಂಬೈ ಅಗ್ರಸ್ಥಾನದಲ್ಲಿದೆ. ಮುಂಬೈ ಅಥವಾ ಬಾಂಬೆ ಪ್ರೆಸಿಡೆಂಟ್ ಆಗಿದ್ದಾಗ ಅದು ಕೇಂದ್ರಾಡಳಿತ ಪ್ರದೇಶದಂತಿತ್ತು. ಆ ಜನರಿಗೆ ದೇಶದ ಒಳಿತನ್ನು ಬೇಕಿದ್ದರೆ ದೊಡ್ಡ ಮನಸ್ಸು ಮಾಡಿ ಬಾಂಬೆಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವುದಾಗಿ ಘೋಷಿಸಿ ಎಂದು ಮಾಧುಸ್ವಾಮಿ ಹೇಳಿದ್ದರು.

ಗೃಹ ಸಚಿವ ಅಮಿತ್ ಶಾ ಅವರಿಗೆ ವಿಷಯ
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಮ್ಮ ಭೂಮಿಯಲ್ಲಿ ಒಂದು ಇಂಚು ಕೂಡ ನಾವು ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಸಚಿವ ಸುಧಾಕರ್ ಹಾಗೂ ಮಾಧುಸ್ವಾಮಿ ಪೂರಕವಾಗಿ ಮಾತನಾಡಿದ್ದರು. ಬುಧವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವೀಸ್, ರಾಜ್ಯದ ಭಾವನೆಗಳನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಲಾಗುವುದು ಎಂದು ಹೇಳಿದರು.

ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು
ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರಪ್ಪನದ್ದಲ್ಲ ಎಂದು ಫಡ್ನವೀಸ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ತಿಳಿಸಿದೆ. ಮುಂಬೈ ಮೇಲೆ ಯಾರಾದರೂ ಹಕ್ಕು ಸಾಧಿಸುವುದನ್ನು ನಾವು ಸಹಿಸುವುದಿಲ್ಲ. ನಾವು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವರ ಮುಂದೆ ನಮ್ಮ ಭಾವನೆಗಳನ್ನು ಮಂಡಿಸುತ್ತೇವೆ ಎಂದು ಅವರು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮುಂಬೈ ಕರ್ನಾಟಕಕ್ಕೆ ಸೇರಿದ್ದು
ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಕರ್ನಾಟಕದ ಸಚಿವರ ಹೆಸರನ್ನು ಪ್ರಸ್ತಾಪಿಸಿ ವಿಷಯ ಪ್ರಸ್ತಾಪಿಸಿದ್ದರು. "(ಭಾರತೀಯ ಜನತಾ ಪಕ್ಷದ ಶಾಸಕ) ಲಕ್ಷ್ಮಣ್ ಸವದಿ ಅವರು ಮುಂಬೈ ಕರ್ನಾಟಕಕ್ಕೆ ಸೇರಿದ್ದು, ಎಂದು ಹೇಳಿ ಮರಾಠಿ ಜನರ ಗಾಯದ ಮೇಲೆ ಉಪ್ಪು ಸವರಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಅಮಿತ್ ಶಾ ಅವರೊಂದಿಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ನಡೆದ ಸಭೆಯಲ್ಲಿ ಈ ವಿಷಯವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವಾಗ ಯಾವುದೇ ಪಕ್ಷಗಳು ಯಾವುದೇ ಹೊಸ ಹಕ್ಕುಗಳನ್ನು ನೀಡುವುದಿಲ್ಲ ಎಂದು ನಿರ್ಧರಿಸಲಾಯಿತು ಎಂದು ಅವರು ಹೇಳಿದರು.

ಸರ್ವಾನುಮತದಿಂದ ನಿರ್ಣಯ ಅಂಗೀಕಾರ
ಬೆಳಗಾವಿ, ಕಾರವಾರ ಬೀದರ್, ನಿಪಾಣಿ, ಭಾಲ್ಕಿ ನಗರಗಳು ಮತ್ತು 865 ಮರಾಠಿಗಳಿಗೆ ಸೇರಿದ ಪ್ರತಿ ಇಂಚಿನ ಭೂಮಿಯನ್ನು ಕಾನೂನುಬದ್ಧವಾಗಿ ಮುಂದುವರಿಸಲು ಮಹಾರಾಷ್ಟ್ರ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದ ನಂತರ ಕರ್ನಾಟಕದ ನಾಯಕರು ತಮ್ಮ ಪ್ರತಿಕ್ರಿಯೆ ನೀಡಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications