ಡೇರಾ ಸಚ್ಚಾ ಸೌಧ ವಕ್ತಾರ ಪವನ್ ಇನ್ಸಾನ್ ಬಂಧನ
ಚಂಡೀಗಢ, ನವೆಂಬರ್ 21 : ಸ್ವಯಂಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಂ ಅವರ ಬಂಧನದ ವೇಳೆ ಪಂಚಕುಲದಲ್ಲಿ ಗಲಭೆ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌಧದ ವಕ್ತಾರ ಪವನ್ ಇನ್ಸಾನ್ ಅವರನ್ನು ಸೋಮವಾರ (ನ.20)ರಂದು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.
ಪವನ್ ಇನ್ಸಾನ್ ನನ್ನು ಪಂಚಾಬ್ ರಾಜ್ಯದ ಲಲ್ಲೂ ಎನ್ನುವ ಪ್ರದೇಶದಲ್ಲಿ ಬಂಧನಕ್ಕೊಳಪಡಿಸಲಾಗಿದೆ, ಕಳೆದ ಎರೆಡು ತಿಂಗಳಿನಿಂದ ಪವನ್ ಇನ್ಸಾನ್ ನಾಪತ್ತೆಯಾಗಿದ್ದ ಎಂದ ಪಂಚಕುಲದ ಉಪ ಪೊಲೀಸ್ ಆಯುಕ್ತ ಮನ್ಬೀರ್ ಸಿಂಗ್ ಅವರು ಹೇಳಿದ್ದಾರೆ.

ಚಂಡೀಘಡದಿಂದ 30 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ಹರಿಯಾಣ ರಾಜ್ಯದ ವಿಶೇಷ ಪೊಲೀಸ್ ತನಿಖಾ ತಂಡ ಬಂಧಿಸಿದೆ. ಬಂಧನಕ್ಕೊಳಗಾಗಿರುವ ಪವನ್ ಇನ್ಸಾನ್, ಗುರ್ಮಿತ್ ರಾಮ್ ರಹೀಂದನ ಮಾಜಿ ಮಾಧ್ಯಮ ವಕ್ತಾರನಾಗಿದ್ದ, ಗುರ್ಮೀತ್ ಮತ್ತೊಬ್ಬ ಬಂಟ ಆದಿತ್ಯ ಇನ್ಸಾನ್ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಏನದು ಪ್ರಕರಣ: ಚಂಡೀಗಢದಿಂದ ಸುಮಾರು 260 ಕಿಲೋಮೀಟರ್ ದೂರದಲ್ಲಿರುವ ಸಿರ್ಸಾದ ಡೇರಾದಲ್ಲಿ ಗುರ್ಮಿತ್ ರಾಮ್ ರಹೀಂ ಸಿಂಗ್ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇದಾಗಿದೆ. ಈ ಸಂಬಂಧ ಸಿಬಿಐ 2002ರಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. 2008ರ ಸುಮಾರಿಗೆ ಇದರ ವಿಚಾರಣೆ ಆರಂಭವಾಗಿತ್ತು. ತೀರ್ಪು ಪ್ರಕಟವಾಗಿದ್ದು ರಾಮ್ ರಹೀಮ್ ಸಿಂಗ್ ದೋಷಿ ಎಂದು ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications