ಐದು ವರ್ಷದಲ್ಲೇ ಮೊದಲ ಬಾರಿ ಡಿಸೇಲ್ ದರ ಇಳಿಕೆ
ನವದೆಹಲಿ, ಅ. 19 : ಕೇಂದ್ರ ಸರ್ಕಾರ ನಾಗರಿಕರಿಗೆ ಮತ್ತೊಂದು ದೀಪಾವಳಿ ಗಿಫ್ಟ್ ನೀಡಿದೆ. ನಿರಂತರವಾಗಿ ಪೆಟ್ರೋಲ್ ಬೆಲೆ ಇಳಿಸಿದ್ದ ಕೇಂದ್ರ ಸರ್ಕಾರ ಇದೀಗ ಡೀಸೆಲ್ ಬೆಲೆಯನ್ನು ಲೀಟರ್ಗೆ 3.37 ಇಳಿಕೆ ಮಾಡಿದ್ದು ಶನಿವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಯಾಗಿದೆ.
ಅಲ್ಲದೇ ಡೀಸೆಲ್ ದರ ನಿಗದಿಯನ್ನು ಸರ್ಕಾರ ನಿಯಂತ್ರಣ ಮುಕ್ತಗೊಳಿಸಿದೆ. ಬೆಂಗಳೂರಿನಲ್ಲಿ 64.05 ರೂ. ಇದ್ದ ಡೀಸೆಲ್ ಗೆ ಈಗ 60 ರೂ. ನೀಡಿದರೆ ಸಾಕು. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕೇಂದ್ರ ಸಂಪುಟ ಸಭೆ ಈ ನಿರ್ಧಾರ ಕೈಗೊಂಡಿದ್ದು ಕಳೆದ ಐದು ವರ್ಷಗಳಲ್ಲೇ ಇದು ಡಿಸೇಲ್ಗೆ ಮೊದಲ ಇಳಿಕೆ ಭಾಗ್ಯವಾಗಿದೆ.[ಹಣದುಬ್ಬರ ಕುಸಿತ, ಪೆಟ್ರೋಲ್ ಬೆಲೆ 1 ರೂ.ಇಳಿಕೆ]

ಈ ಬಗ್ಗೆ ಮಾಹಿತಿ ನೀಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ದರ ನಿಯಂತ್ರಣವನ್ನು ಸರ್ಕಾರ ಮುಕ್ತಮಾಡಿದೆ. ಹಾಗಾಗಿ ಇನ್ನು ಮುಂದೆ ಡೀಸೆಲ್ನ ಚಿಲ್ಲರೆ ದರ ಕೂಡ ಪೆಟ್ರೋಲ್ನಂತೆಯೇ ಅಂತಾರಾಷ್ಟ್ರೀಯ ಕಚ್ಚಾ ತೈಲ ದರದ ಏರಿಳಿತವನ್ನು ಅವಲಂಬಿಸಿರಲಿದೆ ಎಂದು ತಿಳಿಸಿದರು.[ಜನರಿಗೆ ದೀಪಾವಳಿ ಕೊಡುಗೆ ನೀಡಲಿದೆಯೇ ಕೇಂದ್ರ ಸರ್ಕಾರ]
ಜನವರಿ 29, 2009 ರಂದು ಡೀಸೆಲ್ ದರದಲ್ಲಿ ಲೀಟರ್ಗೆ 2 ರೂ. ಕಡಿತ ಮಾಡಿದ್ದೆ ಕೊನೆ. ನಂತರ ನಿರಂತರವಾಗಿ ಡಿಸೇಲ್ ಏರುತ್ತಲೇ ಇತ್ತು. ತೆರಿಗೆ ಹೊರೆ ಕಡಿಮೆ ಮಾಡಿಕೊಳ್ಳಲು ಯುಪಿಎ ಸರ್ಕಾರ ಡಿಸೇಲ್ ಬೆಲೆಯನ್ನು ಪ್ರತಿ ತಿಂಗಳು 50 ಪೈಸೆ ಹೆಚ್ಚಿಸುವಂತೆ ನಿಯಮವೊಂದನ್ನು ಜಾರಿಗೆ ತಂದಿತ್ತು. ಪರಿಣಾಮ 5 ವರ್ಷಗಳಲ್ಲಿ 30 ರೂ. ಇದ್ದ ಡಿಸೇಲ್ 60 ರೂಪಾಯಿಗೆ ತಲುಪಿತ್ತು. ಅಂದರೆ ದ್ವಿಗುಣಗೊಂಡಿತ್ತು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications