Himachal Pradesh Rain: ಕುಲುವಿನಲ್ಲಿ ಭೂಕುಸಿತದಲ್ಲಿ ಕುಸಿದ ಭಾರಿ ಕಟ್ಟಡಗಳು: ವಿಡಿಯೋ ನೋಡಿ
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಕುಲು ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಹಲವಾರು ಮನೆಗಳು ಇಸ್ಪೀಟ್ ಎಲೆಗಳಂತೆ ಧರೆಗುರುಳಿವೆ. ಈ ಭಯಾನಕ ಘಟನೆ ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ.
ಎಷ್ಟು ಹಾನಿಯಾಗಿದೆ ಎನ್ನುವುದು ಇನ್ನೂ ಅಂದಾಜಿಸಲು ಆಗಿಲ್ಲ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಮುಂಜಾಗ್ರತಾ ಕ್ರಮವಾಗಿ ಹಲವು ದಿನಗಳ ಹಿಂದೆಯೇ ಕಟ್ಟಡಗಳನ್ನು ಖಾಲಿ ಮಾಡಿಸಲಾಗಿತ್ತು. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಪಟ್ಟಣವಾದ ಅನ್ನಿಯ ಮಾರುಕಟ್ಟೆ ಪ್ರದೇಶದಲ್ಲಿ ವಿನಾಶಕಾರಿ ಭೂಕುಸಿತ ಸಂಭವಿಸಿದೆ, ಇದು ಜಿಲ್ಲಾ ಕೇಂದ್ರವಾದ ಕುಲುನಿಂದ 76 ಕಿಮೀ ದೂರದಲ್ಲಿದೆ.

ಆಡಳಿತವು ಅಪಾಯವನ್ನು ಗುರುತಿಸಿ ಎರಡು ದಿನಗಳ ಹಿಂದೆ ವಾಣಿಜ್ಯ ಕಟ್ಟಡವನ್ನು ತೆರವು ಮಾಡಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಆದಾಗ್ಯೂ, ವೀಡಿಯೊದಲ್ಲಿ, ಹಲವಾರು ಮನೆಗಳು ಕುಸಿಯುತ್ತಿರುವುದನ್ನು ನೋಡಬಹುದಾಗಿದೆ.
Several buildings collapsed in Anni of Kullu district in Himachal Pradesh pic.twitter.com/qJZurRnSY9
— Weatherman Shubham (@shubhamtorres09) August 24, 2023
ಎಂಟರಿಂದ ಒಂಭತ್ತು ಕಟ್ಟಡಗಳು ಧರೆಗೆ
ವೀಡಿಯೊದಲ್ಲಿ ನೋಡಿದಂತೆ, ಅಣ್ಣಿ ಪಟ್ಟಣದ ಬಸ್ ನಿಲ್ದಾಣದ ಬಳಿ ಕನಿಷ್ಠ ಎಂಟರಿಂದ ಒಂಬತ್ತು ದೊಡ್ಡ ಕಟ್ಟಡಗಳು ಕುಸಿದಿವೆ. "ವಿನಾಶಕಾರಿ ಭೂಕುಸಿತದ ನಡುವೆ ಬೃಹತ್ ವಾಣಿಜ್ಯ ಕಟ್ಟಡವು ಕುಸಿಯುತ್ತಿರುವುದನ್ನು ನೋಡಬಹುದು. ಆಡಳಿತವು ಅಪಾಯವನ್ನು ಗುರುತಿಸಿದೆ ಮತ್ತು ಎರಡು ದಿನಗಳ ಹಿಂದೆ ಕಟ್ಟಡವನ್ನು ಯಶಸ್ವಿಯಾಗಿ ತೆರವು ಮಾಡಿದೆ" ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಟ್ವೀಟ್ ಮಾಡಿದ್ದಾರೆ.
ಹಿಮಾಚಲ ಪ್ರದೇಶವು ಕಳೆದ ಕೆಲವು ವಾರಗಳಲ್ಲಿ ನಿರಂತರ ಮಳೆ, ಮೇಘಸ್ಫೋಟ, ಭೂಕುಸಿತಗಳಿಂದ ಜರ್ಜರಿತವಾಗಿದೆ. ಹಿಮಾಚಲ ಪ್ರದೇಶದ ಕುಲು ಎಂಬಲ್ಲಿ ಗುರುವಾರ ಹೊಸದಾಗಿ ಭೂಕುಸಿತ ಸಂಭವಿಸಿದ್ದು, ಹಲವು ಕಟ್ಟಡಗಳು ಕುಸಿದಿವೆ.
ಕುಲು-ಮಂಡಿ ಹೆದ್ದಾರಿಯು ಹಾನಿಗೊಳಗಾಗಿದ್ದು, ಎರಡರ ಸಂಪರ್ಕ ಕಡಿತಗೊಂಡಿದ್ದು, ಹಲವಾರು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಹಿಮಾಚಲ ಪ್ರದೇಶದಾದ್ಯಂತ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆಯಾಗಲಿದ್ದು ಐಎಂಡಿ ರೆಡ್ ಅಲರ್ಟ್ ನೀಡಿದೆ.
2,022 ಮನೆಗಳು ಸಂಪೂರ್ಣ ಹಾನಿ
ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಒಟ್ಟು 2,022 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, 9,615 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಈ ವರ್ಷದ ಮುಂಗಾರು ಹಂಗಾಮಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ.
ರಾಜ್ಯವು ಇತಿಹಾಸದಲ್ಲಿ ಅತ್ಯಂತ ಭೀಕರವಾದ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದೆ. ಶಿಮ್ಲಾದಲ್ಲಿ 100 ಕ್ಕೂ ಹೆಚ್ಚು ಕಟ್ಟಡಗಳು ಕುಸಿದಿವೆ. ಶಿಮ್ಲಾದ ಪ್ರಸಿದ್ಧ ಸಮ್ಮರ್ ಹಿಲ್ ಪ್ರದೇಶದಲ್ಲಿನ ಪುರಾತನ ಶಿವ ದೇವಾಲಯವು ಈ ಮಳೆಗಾಲದಲ್ಲಿ ಕೊಚ್ಚಿಹೋಗಿದೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ











Click it and Unblock the Notifications