ಉತ್ತರಾಖಂಡದ ಅಭಿವೃದ್ಧಿ ಡಬಲ್ ಎಂಜಿನ್ ಸರ್ಕಾರದ ಮೊದಲ ಆದ್ಯತೆ; ಮೋದಿ
ಅಲ್ಮೋರಾ, ಫೆಬ್ರವರಿ 11: ಉತ್ತರಾಖಂಡದ ಅಭಿವೃದ್ಧಿಯು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ವಿಧಾನಸಭೆ ಚುನಾವಣಾ ಪ್ರಚಾರವನ್ನುದ್ದೇಶಿಸಿ ಹೇಳಿದರು.
ಫೆಬ್ರವರಿ 14ರ ಶುಕ್ರವಾರದಂದು ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ವಿಧಾನಸಭಾ ಚುನಾವಣಾ ಸಮಾವೇಶದಲ್ಲಿ ಹೇಳಿದ ಅವರು, ರಾಜ್ಯದ ಗಡಿಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಬಿಜೆಪಿಯ ಆದ್ಯತೆಯಾಗಿದ್ದು, ಪರ್ವತಮಾಲಾ ಮತ್ತು ವೈಬ್ರೆಂಟ್ ವಿಲೇಜ್ ಯೋಜನೆಯಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.
ಉತ್ತರಾಖಂಡದ ಜಮ್ರಾಣಿ ಅಣೆಕಟ್ಟು ಯೋಜನೆ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಕುಮಾನ್ ಪ್ರದೇಶದಲ್ಲಿ ಮಾನಸಖಂಡ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಆದ್ಯತೆಯ ಮೇಲೆ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

ಸಮಾವೇಶವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ಮೋದಿ ಅವರು, "ಡಬಲ್ ಇಂಜಿನ್" ಸರ್ಕಾರಕ್ಕೆ ಮತ್ತೊಮ್ಮೆ ಮತ ಚಲಾಯಿಸುವ ಬಗ್ಗೆ ಉತ್ತರಾಖಂಡ ಜನರು ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.
"ಗುರುವಾರ ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನದ ನಂತರ, ಬಿಜೆಪಿ ದಾಖಲೆಯ ಸಂಖ್ಯೆಯಲ್ಲಿ ಗೆಲುವು ಸಾಧಿಸುವುದು ಸ್ಪಷ್ಟವಾಗಿದೆ. ನಮಗಿಂತ ಹೆಚ್ಚು ಸಾರ್ವಜನಿಕರು ಈ ಚುನಾವಣೆಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಸಂಕಲ್ಪ ಮಾಡಿದ್ದಾರೆ. ಮತದಾರರು ಎಂದಿಗೂ ಒಳ್ಳೆಯ ಉದ್ದೇಶ ಹೊಂದಿರುವವರ ಪಕ್ಷವನ್ನು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಒಂದೇ ಹಂತದಲ್ಲಿ ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.
ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 70 ಸ್ಥಾನಗಳ ಪೈಕಿ ಬಿಜೆಪಿ 57 ಸ್ಥಾನಗಳನ್ನು ಗೆದ್ದಿತ್ತು.

ಉತ್ತರಪ್ರದೇಶದಲ್ಲಿ ಶೇ.60.17ರಷ್ಟು ಮತದಾನ
ಏಳು ಹಂತದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಪೂರ್ಣಗೊಂಡಿದೆ. ಈ ವೇಳೆ ಶೇ.60.17ರಷ್ಟು ಮತದಾನವಾಗಿದೆ.
ಈ ಮಧ್ಯೆ ಚುನಾವಣಾ ಆಯೋಗವು ಮಣಿಪುರ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕಗಳನ್ನು ಪರಿಷ್ಕರಿಸಿದ್ದು, ಮೊದಲ ಹಂತದ ಮತದಾನ ಫೆಬ್ರವರಿ 27ರ ಬದಲಿಗೆ ಫೆಬ್ರವರಿ 28ರಂದು ಮತ್ತು ಎರಡನೇ ಹಂತ ಮಾರ್ಚ್ 3ರ ಬದಲಿಗೆ ಮಾರ್ಚ್ 5ರಂದು ನಡೆಯಲಿದೆ.
ಉತ್ತರಾಖಂಡ್ನಲ್ಲಿ ಪ್ರಧಾನಿ ಮೋದಿ ಶುಕ್ರವಾರ ಮಧ್ಯಾಹ್ನ ಅಲ್ಮೋರಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಣಿಪುರ, ಗೋವಾ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರಪ್ರದೇಶದ ವಿಧಾನಸಭೆ ಚುನಾವಣೆ ಫೆಬ್ರವರಿ ಮತ್ತು ಮಾರ್ಚ್ನಲ್ಲಿ ನಡೆಯಲಿದೆ. ಮಾರ್ಚ್ 10ರಂದು ಐದೂ ರಾಜ್ಯಗಳ ಮತಗಳ ಎಣಿಕೆ ಕಾರ್ಯ ನಡೆಯಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications