ಗುಪ್ತಾಂಗವನ್ನೇ ಶಿವದೇವರಿಗೆ ಅರ್ಪಿಸಿದ ಆಧುನಿಕ ಬೇಡರ ಕಣ್ಣಪ್ಪ!
ಒರಿಸ್ಸಾದಲ್ಲಿ ಗುಪ್ತಾಂಗವನ್ನೇ ಕತ್ತರಿಸಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬ ಈಶ್ವರನಿಗೆ ಹರಕೆ ಸಲ್ಲಿಸಿದ್ದಾನೆ.
ಭುವನೇಶ್ವರ, ಮಾ 6: ಅಂದು ಬೇಡರ ಕಣ್ಣಪ್ಪ ಶಿವನಿಗಾಗಿ ಕಣ್ಣನ್ನೇ ಕಿತ್ತುಕೊಟ್ಟ, ಇಲ್ಲೊಬ್ಬ ಶಿವನಿಗಾಗಿ ತನ್ನ ಗುಪ್ತಾಂಗವನ್ನೇ ಕಚಕ್ ಅನಿಸಿಬಿಟ್ಟ.. ಎಲ್ಲಾ ಶಿವನ ಇಚ್ಚೆ..
ಇವನು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡವನೋ, ಅಥವಾ ಈತನದ್ದು ದೇವಾರಾಧನೆಯ ಪರಾಕಾಷ್ಠೆಯೋ ಒಟ್ಟಿನಲ್ಲಿ ಗುಪ್ತಾಂಗವನ್ನು ದೇವರಿಗೆ ಅರ್ಪಿಸಿ, ಮೂರ್ಛೆಗೆ ಹೋದವನು ಇನ್ನೂ ಎದ್ದಿಲ್ಲ ಎನ್ನುವುದು ಮಾತ್ರ ಸತ್ಯ.
ಈ ವಿಶಿಷ್ಟ ಹರಕೆಯನ್ನು ದೇವರಿಗೆ ಅರ್ಪಿಸಿದವನು ಒರಿಸ್ಸಾದ ಗಂಜಾಂ ಜಿಲ್ಲೆಯ ನಾಯಕ್ ಎನ್ನುವ ವ್ಯಕ್ತಿ. ನಲವತ್ತು ವರ್ಷದ ಈ ವ್ಯಕ್ತಿ, ದೇವರಿಗೆ ಗುಪ್ತಾಂಗವನ್ನು ಅರ್ಪಿಸಿ, ರಕ್ತಸಿಕ್ತವಾಗಿ ದೇವಾಲಯದಲ್ಲೇ ಮೂರ್ಛೆ ಹೋಗಿದ್ದ.

ಎರಡು ದಿನಗಳ ಹಿಂದೆ ದೇವಾಲಯದಲ್ಲೇ ಪ್ರಾರ್ಥನೆ ಸಲ್ಲಿಸುತ್ತಿದ್ದ ಈ ವ್ಯಕ್ತಿ, ಅರ್ಚಕರು ದೇವಾಲಯದ ಬಾಗಿಲು ಮುಚ್ಚಿಕೊಂಡು ಹೋದ ಮೇಲೆ, ಈ ಕೆಲಸ ಮಾಡಿಕೊಂಡಿದ್ದಾನೆ.
ಮರುದಿನ ಪೂಜೆಗೆಂದು ದೇವಾಲಯಕ್ಕೆ ಆಗಮಿಸಿದ ಅರ್ಚಕರು, ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ನೋಡಿ ಬೆಚ್ಚಿಬಿದ್ದು ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಅಂಬುಲೆನ್ಸ್ ಜೊತೆ ದೇವಾಲಯಕ್ಕೆ ಆಗಮಿಸಿದ ಪೊಲೀಸರು ಮತ್ತು ವೈದ್ಯರು ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಇದುವರೆಗೂ ನಾಯಕ್ ಗೆ ಪ್ರಜ್ಞೆ ಬಂದಿಲ್ಲ.
ಹಲವು ವರ್ಷಗಳಿಂದ ಮೂರ್ಛೆ ರೋಗದ ಕಾಯಿಲೆಯಿಂದ ಬಳಲುತ್ತಿದ್ದ ಈ ವ್ಯಕ್ತಿ, ಮಾನಸಿಕವಾಗಿ ನೊಂದು ಈ ರೀತಿಯ ಹರಕೆ ನೀಡಿ, ಶಿವನ ಅನುಗ್ರಹಕ್ಕೆ ಪಾತ್ರನಾಗಲು ಹೀಗೆ ಮಾಡಿದ್ದರೂ ಮಾಡಿರಬಹುದು ಎನ್ನುವುದು ಸ್ಥಳೀಯರ ಊಹೆ..
ಒಟ್ಟಿನಲ್ಲಿ ಶಿವ ತನ್ನ ಭಕ್ತಗಣವನ್ನು ಹೇಗೆ ಹೇಗೆ ಪರೀಕ್ಷಿಸುತ್ತಾನೋ.. ಹರಹರ ಮಹಾದೇವ್.. (ಮಾಹಿತಿ: ಈಸಂಜೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications