ಗುಪ್ತಾಂಗವನ್ನೇ ಶಿವದೇವರಿಗೆ ಅರ್ಪಿಸಿದ ಆಧುನಿಕ ಬೇಡರ ಕಣ್ಣಪ್ಪ!
ಒರಿಸ್ಸಾದಲ್ಲಿ ಗುಪ್ತಾಂಗವನ್ನೇ ಕತ್ತರಿಸಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬ ಈಶ್ವರನಿಗೆ ಹರಕೆ ಸಲ್ಲಿಸಿದ್ದಾನೆ.
ಭುವನೇಶ್ವರ, ಮಾ 6: ಅಂದು ಬೇಡರ ಕಣ್ಣಪ್ಪ ಶಿವನಿಗಾಗಿ ಕಣ್ಣನ್ನೇ ಕಿತ್ತುಕೊಟ್ಟ, ಇಲ್ಲೊಬ್ಬ ಶಿವನಿಗಾಗಿ ತನ್ನ ಗುಪ್ತಾಂಗವನ್ನೇ ಕಚಕ್ ಅನಿಸಿಬಿಟ್ಟ.. ಎಲ್ಲಾ ಶಿವನ ಇಚ್ಚೆ..
ಇವನು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡವನೋ, ಅಥವಾ ಈತನದ್ದು ದೇವಾರಾಧನೆಯ ಪರಾಕಾಷ್ಠೆಯೋ ಒಟ್ಟಿನಲ್ಲಿ ಗುಪ್ತಾಂಗವನ್ನು ದೇವರಿಗೆ ಅರ್ಪಿಸಿ, ಮೂರ್ಛೆಗೆ ಹೋದವನು ಇನ್ನೂ ಎದ್ದಿಲ್ಲ ಎನ್ನುವುದು ಮಾತ್ರ ಸತ್ಯ.
ಈ ವಿಶಿಷ್ಟ ಹರಕೆಯನ್ನು ದೇವರಿಗೆ ಅರ್ಪಿಸಿದವನು ಒರಿಸ್ಸಾದ ಗಂಜಾಂ ಜಿಲ್ಲೆಯ ನಾಯಕ್ ಎನ್ನುವ ವ್ಯಕ್ತಿ. ನಲವತ್ತು ವರ್ಷದ ಈ ವ್ಯಕ್ತಿ, ದೇವರಿಗೆ ಗುಪ್ತಾಂಗವನ್ನು ಅರ್ಪಿಸಿ, ರಕ್ತಸಿಕ್ತವಾಗಿ ದೇವಾಲಯದಲ್ಲೇ ಮೂರ್ಛೆ ಹೋಗಿದ್ದ.

ಎರಡು ದಿನಗಳ ಹಿಂದೆ ದೇವಾಲಯದಲ್ಲೇ ಪ್ರಾರ್ಥನೆ ಸಲ್ಲಿಸುತ್ತಿದ್ದ ಈ ವ್ಯಕ್ತಿ, ಅರ್ಚಕರು ದೇವಾಲಯದ ಬಾಗಿಲು ಮುಚ್ಚಿಕೊಂಡು ಹೋದ ಮೇಲೆ, ಈ ಕೆಲಸ ಮಾಡಿಕೊಂಡಿದ್ದಾನೆ.
ಮರುದಿನ ಪೂಜೆಗೆಂದು ದೇವಾಲಯಕ್ಕೆ ಆಗಮಿಸಿದ ಅರ್ಚಕರು, ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ನೋಡಿ ಬೆಚ್ಚಿಬಿದ್ದು ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಅಂಬುಲೆನ್ಸ್ ಜೊತೆ ದೇವಾಲಯಕ್ಕೆ ಆಗಮಿಸಿದ ಪೊಲೀಸರು ಮತ್ತು ವೈದ್ಯರು ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಇದುವರೆಗೂ ನಾಯಕ್ ಗೆ ಪ್ರಜ್ಞೆ ಬಂದಿಲ್ಲ.
ಹಲವು ವರ್ಷಗಳಿಂದ ಮೂರ್ಛೆ ರೋಗದ ಕಾಯಿಲೆಯಿಂದ ಬಳಲುತ್ತಿದ್ದ ಈ ವ್ಯಕ್ತಿ, ಮಾನಸಿಕವಾಗಿ ನೊಂದು ಈ ರೀತಿಯ ಹರಕೆ ನೀಡಿ, ಶಿವನ ಅನುಗ್ರಹಕ್ಕೆ ಪಾತ್ರನಾಗಲು ಹೀಗೆ ಮಾಡಿದ್ದರೂ ಮಾಡಿರಬಹುದು ಎನ್ನುವುದು ಸ್ಥಳೀಯರ ಊಹೆ..
ಒಟ್ಟಿನಲ್ಲಿ ಶಿವ ತನ್ನ ಭಕ್ತಗಣವನ್ನು ಹೇಗೆ ಹೇಗೆ ಪರೀಕ್ಷಿಸುತ್ತಾನೋ.. ಹರಹರ ಮಹಾದೇವ್.. (ಮಾಹಿತಿ: ಈಸಂಜೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications