ವಾಣಿಜ್ಯ ವಿಮಾನ ಸಂಚಾರ ನಿರ್ಬಂಧ ಅ. 31ರವರೆಗೂ ವಿಸ್ತರಣೆ
ನವದೆಹಲಿ, ಸೆಪ್ಟೆಂಬರ್ 30: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣದ ಕಾರಣದಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯವು (ಡಿಜಿಸಿಎ) ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನ ಸೇವೆಗಳ ಸಂಚಾರದ ಮೇಲಿನ ನಿರ್ಬಂಧವನ್ನು ಅಕ್ಟೋಬರ್ 31ರವರೆಗೂ ವಿಸ್ತರಿಸಿದೆ.
ಗೃಹ ಸಚಿವಾಲಯವು ಬುಧವಾರ ಅನ್ಲಾಕ್ 5ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಡಿಜಿಸಿಎ ಈ ಪ್ರಕಟಣೆ ಹೊರಡಿಸಿದೆ. ಅನ್ಲಾಕ್ ಪ್ರಕ್ರಿಯೆಯ ಈಗಿನ ಹಂತದಲ್ಲಿ ಪ್ರಯಾಣಿಕರ ವೈಮಾನಿಕ ಪ್ರಯಾಣಕ್ಕೆ ಅನುಮತಿ ನೀಡಲು ಸಾಧ್ಯವಾಗುವುದಿಲ್ಲ. ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಆದರೆ ಸರಕು ಸಾಗಣೆ ವಿಮಾನಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ.
ಆದರೆ ಈಗಾಗಲೇ ವಿವಿಧ ದೇಶಗಳ ನಡುವೆ ವಿಮಾನ ಸಂಚಾರ ನಡೆಸುವ ಏರ್ ಬಬಲ್ ಒಪ್ಪಂದಗಳನ್ನು ಭಾರತ ಮಾಡಿಕೊಂಡಿದ್ದು, ಅದು ಮುಂದುವರಿಯಲಿದೆ. ಇದಕ್ಕೂ ಮುನ್ನ ಬುಧವಾರ ನಾಗರಿಕ ವಿಮಾನಯಾನ ಸಚಿವಾಲಯವು ಭಾರತೀಯರು ಪ್ರಯಾಣಿಸಬಹುದಾದ ದೇಶಗಳ ಪಟ್ಟಿಗೆ ಭೂತಾನ್ ಮತ್ತು ಕೀನ್ಯಾಗಳನ್ನು ಸೇರ್ಪಡೆ ಮಾಡಿದೆ. ಭಾರತ-ಭೂತಾನ್ ಮತ್ತು ಭಾರತ-ಕೀನ್ಯಾ ನಡುವಿನ ಏರ್ ಬಬಲ್ ಕಾರ್ಯಾಚರಣೆ ಆರಂಭಿಸಿದ್ದು, ಈ ಮೂರೂ ದೇಶಗಳ ಎಲ್ಲ ರಾಷ್ಟ್ರೀಯ ವಿಮಾನಗಳು ವಾಣಿಜ್ಯ ಪ್ರಯಾಣ ಸೇವೆಯನ್ನು ಆರಂಭಿಸಲಿವೆ.

ಭಾರತವು ಇದೇ ರೀತಿ ಏರ್ ಬಬಲ್ ಹೊಂದಾಣಿಕೆಯನ್ನು ಅಮೆರಿಕ, ಬ್ರಿಟನ್, ಜರ್ಮನಿ, ಫ್ರಾನ್ಸ್, ಅಫ್ಘಾನಿಸ್ತಾನ, ಬಹರೇನ್, ಭೂತಾನ್, ಕೀನ್ಯಾ, ಕೆನಡಾ, ಇರಾಕ್, ಜಪಾನ್, ಮಾಲ್ಡೀವ್ಸ್, ನೈಜೀರಿಯಾ, ಕತಾರ್ ಮತ್ತು ಯುಎಇ ನಡುವೆ ಮಾಡಿಕೊಂಡಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications