ವಾಣಿಜ್ಯ ವಿಮಾನ ಸಂಚಾರ ನಿರ್ಬಂಧ ಅ. 31ರವರೆಗೂ ವಿಸ್ತರಣೆ
ನವದೆಹಲಿ, ಸೆಪ್ಟೆಂಬರ್ 30: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣದ ಕಾರಣದಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯವು (ಡಿಜಿಸಿಎ) ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕ ವಿಮಾನ ಸೇವೆಗಳ ಸಂಚಾರದ ಮೇಲಿನ ನಿರ್ಬಂಧವನ್ನು ಅಕ್ಟೋಬರ್ 31ರವರೆಗೂ ವಿಸ್ತರಿಸಿದೆ.
ಗೃಹ ಸಚಿವಾಲಯವು ಬುಧವಾರ ಅನ್ಲಾಕ್ 5ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಡಿಜಿಸಿಎ ಈ ಪ್ರಕಟಣೆ ಹೊರಡಿಸಿದೆ. ಅನ್ಲಾಕ್ ಪ್ರಕ್ರಿಯೆಯ ಈಗಿನ ಹಂತದಲ್ಲಿ ಪ್ರಯಾಣಿಕರ ವೈಮಾನಿಕ ಪ್ರಯಾಣಕ್ಕೆ ಅನುಮತಿ ನೀಡಲು ಸಾಧ್ಯವಾಗುವುದಿಲ್ಲ. ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಆದರೆ ಸರಕು ಸಾಗಣೆ ವಿಮಾನಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ.
ಆದರೆ ಈಗಾಗಲೇ ವಿವಿಧ ದೇಶಗಳ ನಡುವೆ ವಿಮಾನ ಸಂಚಾರ ನಡೆಸುವ ಏರ್ ಬಬಲ್ ಒಪ್ಪಂದಗಳನ್ನು ಭಾರತ ಮಾಡಿಕೊಂಡಿದ್ದು, ಅದು ಮುಂದುವರಿಯಲಿದೆ. ಇದಕ್ಕೂ ಮುನ್ನ ಬುಧವಾರ ನಾಗರಿಕ ವಿಮಾನಯಾನ ಸಚಿವಾಲಯವು ಭಾರತೀಯರು ಪ್ರಯಾಣಿಸಬಹುದಾದ ದೇಶಗಳ ಪಟ್ಟಿಗೆ ಭೂತಾನ್ ಮತ್ತು ಕೀನ್ಯಾಗಳನ್ನು ಸೇರ್ಪಡೆ ಮಾಡಿದೆ. ಭಾರತ-ಭೂತಾನ್ ಮತ್ತು ಭಾರತ-ಕೀನ್ಯಾ ನಡುವಿನ ಏರ್ ಬಬಲ್ ಕಾರ್ಯಾಚರಣೆ ಆರಂಭಿಸಿದ್ದು, ಈ ಮೂರೂ ದೇಶಗಳ ಎಲ್ಲ ರಾಷ್ಟ್ರೀಯ ವಿಮಾನಗಳು ವಾಣಿಜ್ಯ ಪ್ರಯಾಣ ಸೇವೆಯನ್ನು ಆರಂಭಿಸಲಿವೆ.

ಭಾರತವು ಇದೇ ರೀತಿ ಏರ್ ಬಬಲ್ ಹೊಂದಾಣಿಕೆಯನ್ನು ಅಮೆರಿಕ, ಬ್ರಿಟನ್, ಜರ್ಮನಿ, ಫ್ರಾನ್ಸ್, ಅಫ್ಘಾನಿಸ್ತಾನ, ಬಹರೇನ್, ಭೂತಾನ್, ಕೀನ್ಯಾ, ಕೆನಡಾ, ಇರಾಕ್, ಜಪಾನ್, ಮಾಲ್ಡೀವ್ಸ್, ನೈಜೀರಿಯಾ, ಕತಾರ್ ಮತ್ತು ಯುಎಇ ನಡುವೆ ಮಾಡಿಕೊಂಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications