ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ
ನವದೆಹಲಿ, ಜೂನ್ 14: ಟಿಕೆಟ್ ಹೊಂದಿದ್ದರೂ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಪ್ರಯಾಣಿಕರಿಗೆ ಅನುಮತಿ ನಿರಾಕರಿಸುವುದಕ್ಕೆ ಸಂಬಂಧಿಸಿದ ನಿಯಂತ್ರಕ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ವಿಷಯವು "ಗಂಭೀರ ಕಾಳಜಿ ಮತ್ತು ಸ್ವೀಕಾರಾರ್ಹವಲ್ಲ" ಎಂದು ವಾಯುಯಾನ ಸುರಕ್ಷತೆ ನಿಯಂತ್ರಕರು ಹೇಳಿದ್ದಾರೆ.
"ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ ಸರಣಿ ತಪಾಸಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರು, ಹೈದರಾಬಾದ್ ಮತ್ತು ದೆಹಲಿಯಲ್ಲಿ ನಮ್ಮ ಕಣ್ಗಾವಲಿನಲ್ಲೇ ನಿಯಮಗಳನ್ನು ಅನುಸರಿಸುತ್ತಿಲ್ಲ ಎನ್ನುವುದಕ್ಕೆ ಸಾಕಷ್ಟು ನಿದರ್ಶನಗಳು ಸಿಕ್ಕಿವೆ. ಆದ್ದರಿಂದ ಏರ್ಲೈನ್ಸ್ಗೆ ಶೋಕಾಸ್ ನೋಟಿಸ್ ನೀಡಲಾಯಿತು. ವೈಯಕ್ತಿಕ ವಿಚಾರಣೆಯನ್ನು ಸಹ ನೀಡಲಾಗಿದೆ," ಎಂದು ನಿಯಂತ್ರಕರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಯಾವುದೇ ನಿಯಮಗಳನ್ನು ಅನುಸರಿಸದಿರುವುದಕ್ಕೆ ಬೇಸರ
ವಿಮಾನಯಾನ ಸಂಸ್ಥೆಯು "ಈ ವಿಷಯದಲ್ಲಿ ಯಾವುದೇ ನೀತಿಯನ್ನು ಹೊಂದಿಲ್ಲ. ಅಸಹಾಯಕ ಪ್ರಯಾಣಿಕರಿಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇಂಥ ಪ್ರಕರಣಗಳಿಗೆ ಲೆಕ್ಕವೇ ಇಲ್ಲ," ಎಂದು ಹೇಳಿದೆ. ಅಧಿಕೃತ ಟಿಕೆಟ್ ಹೊಂದಿರುವ ಪ್ರಯಾಣಿಕರು ತಮ್ಮ ವಿಮಾನವನ್ನು ತಪ್ಪಿಸಿಕೊಂಡಲ್ಲಿ ಪರ್ಯಾಯ ವ್ಯವಸ್ಥೆಗಳಿಲ್ಲದೇ ಪರದಾಡಿದ ಪ್ರಕರಣಗಳ ಸಂಖ್ಯೆಯು ಗಣನೀಯ ಮಟ್ಟದಲ್ಲಿ ಏರಿಕೆ ಆಗುತ್ತಿದೆ. ಈ ನಿಟ್ಟಿನಲ್ಲಿ ವಿಮಾನಯಾನ ಸಂಸ್ಥೆಗಳು ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ತನ್ನ ಹೇಳಿಕೆಯಲ್ಲಿ ಡಿಜಿಸಿಎ ಉಲ್ಲೇಖಿಸಿದೆ.

10 ಲಕ್ಷ ರೂಪಾಯಿ ದಂಡ ವಿಧಿಸಿದ ಡಿಜಿಸಿಎ
ಅಧಿಕೃತ ಟಿಕೆೆಟ್ ಹೊಂದಿರುವ ಪ್ರಯಾಣಿಕರು ವಿಮಾನ ಏರುವುದಕ್ಕೆ ಅನುಮತಿ ನೀಡದಿರುವುದು ಗಂಭೀರ ಮತ್ತು ಕಾಳಜಿ ವಹಿಸಬೇಕಾದ ಅಂಶವಾಗಿದೆ. ಇದನ್ನು ಒಪ್ಪಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಶೋಕಾಸ್ ನೋಟಿಸ್ನಲ್ಲಿ ವಿವರಿಸಿರುವ ನಿರ್ದಿಷ್ಟ ಪ್ರಕರಣಗಳಲ್ಲಿ, ಏರ್ ಇಂಡಿಯಾದ ಸಲ್ಲಿಕೆಗಳನ್ನು ಪರಿಶೀಲಿಸಿದ ನಂತರ, ಜಾರಿ ಕ್ರಮದ ಭಾಗವಾಗಿ, ಸಕ್ಷಮ ಪ್ರಾಧಿಕಾರವು 10 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿದೆ ಎಂದು ಡಿಜಿಸಿಎ ಹೇಳಿದೆ. ಇದರ ಜೊತೆಗೆೆ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ವ್ಯವಸ್ಥೆಗಳನ್ನು ಹಾಕಲು ವಿಮಾನಯಾನ ಸಂಸ್ಥೆಗೆ ಸಲಹೆ ನೀಡಲಾಗಿದೆ. ವಿಫಲವಾದರೆ ವಾಯುಯಾನ ಸುರಕ್ಷತೆ ನಿಯಂತ್ರಕವು ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತದೆ.

ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದಿದ್ದರೆ ದಂಡ
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ ಪ್ರಕಾರ, ಅಧಿಕೃತ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದರೆ, ವಿಮಾನಯಾನ ಸಂಸ್ಥೆಯು ಪರ್ಯಾಯ ವ್ಯವಸ್ಥೆ ಅಥವಾ ಪರಿಹಾರವನ್ನು ಒದಗಿಸಬೇಕು. ಒಂದು ವೇಳೆ ವಿಮಾನಯಾನ ಸಂಸ್ಥೆಯು ಹೇಳಿದ ಪ್ರಯಾಣಿಕರಿಗೆ ಒಂದು ಗಂಟೆಯೊಳಗೆ ಪರ್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲು ಸಾಧ್ಯವಾದರೆ, ಯಾವುದೇ ಪರಿಹಾರವನ್ನು ಪಾವತಿಸಬೇಕಾಗಿಲ್ಲ. ಆದಾಗ್ಯೂ, ಮುಂದಿನ 24 ಗಂಟೆಗಳಲ್ಲಿ ಏರ್ಲೈನ್ ಪರ್ಯಾಯ ವ್ಯವಸ್ಥೆಯನ್ನು ಒದಗಿಸಲು ಸಾಧ್ಯವಾದರೆ, 10,000 ರೂಪಾಯಿವರೆಗಿನ ಪರಿಹಾರ ನೀಡಬೇಕು ಎಂದು ನಿಯಮಗಳಲ್ಲಿ ಸೂಚಿಸಲಾಗುತ್ತದೆ. 24 ಗಂಟೆಗಳನ್ನೂ ಮೀರಿದರೆ 20,000 ರೂ.ವರೆಗೆ ಪರಿಹಾರವನ್ನು ನಿಗದಿಪಡಿಸಲಾಗಿದೆ.

ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಎಚ್ಚರಿಕೆ
ಕಳೆದ ತಿಂಗಳು, ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ ಹಲವಾರು ಪ್ರಕರಣಗಳ ನಂತರ, ಡಿಜಿಸಿಎ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ದೇಶಿಸಿದೆ. ತನ್ನ ಪತ್ರದಲ್ಲಿ, ಯಾವುದೇ ಅನುಸರಣೆಯನ್ನು ಅನುಸರಿಸದಿದ್ದಲ್ಲಿ ಆರ್ಥಿಕ ದಂಡವನ್ನು ವಿಧಿಸುವುದು ಸೇರಿದಂತೆ ತಪ್ಪಾದ ವಿಮಾನಯಾನ ಸಂಸ್ಥೆಯ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ವಿಮಾನಯಾನ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿತ್ತು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications