ಬೋಯಿಂಗ್ ವಿಮಾನಗಳಲ್ಲಿ ಇಂಧನ ಸ್ವಿಚ್ ಪರಿಶೀಲನೆ ಕಡ್ಡಾಯ: ಡಿಜಿಸಿಎ ಆದೇಶ
ಇತ್ತೀಚೆಗೆ ನಡೆದ ಎಯರ್ ಇಂಡಿಯಾ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಮಹತ್ವದ ಆದೇಶ ನೀಡಿದೆ. ಎಲ್ಲ ವಿಮಾನಯಾನ ಸಂಸ್ಥೆಗಳು ತಮ್ಮ ಬೋಯಿಂಗ್ 737 ಮತ್ತು 787 ಮಾದರಿ ವಿಮಾನಗಳಲ್ಲಿ ಇಂಧನ ನಿಯಂತ್ರಣ ಸ್ವಿಚ್ (fuel control switch) ಲಾಕಿಂಗ್ ವ್ಯವಸ್ಥೆಯನ್ನು ಜುಲೈ 21ರೊಳಗೆ ಪರಿಶೀಲಿಸಬೇಕು ಎಂದು ಸೂಚನೆ ನೀಡಿದೆ.
ಈ ಕ್ರಮವು 2018ರಲ್ಲಿ ಅಮೆರಿಕದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (FAA) ನೀಡಿದ್ದ ಭದ್ರತಾ ಸೂಚನೆಯ ಆಧಾರದ ಮೇಲೆ ಜಾರಿಗೆ ಬಂದಿದೆ. ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆಯಲ್ಲಿ ದೋಷ ಕಂಡುಬಂದರೆ, ವಿಮಾನ ಹಾರಾಟದ ವೇಳೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆದೇಶದಿಂದ ಸ್ಪೈಸ್ಜೆಟ್, ಎಯರ್ ಇಂಡಿಯಾ, ಮತ್ತು ಎಯರ್ ಇಂಡಿಯಾ ಎಕ್ಸ್ಪ್ರೆಸ್ ಸೇರಿದಂತೆ ಎಲ್ಲಾ ಪ್ರಮುಖ ವಿಮಾನಯಾನ ಸಂಸ್ಥೆಗಳ ಬೋಯಿಂಗ್ ವಿಮಾನಗಳಿಗೆ ತಪಾಸಣೆ ನಡೆಯಲಿದೆ. ಪ್ರಯಾಣಿಕರ ಭದ್ರತೆಗಾಗಿ ತಕ್ಷಣ ಕ್ರಮ ಕೈಗೊಳ್ಳಲು DGCA ಸೂಚನೆ ನೀಡಿದೆ.

ಜುಲೈ 21ರೊಳಗೆ ಬೋಯಿಂಗ್ 737 ಮತ್ತು 787 ವಿಮಾನಗಳಲ್ಲಿ ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆ ತಪಾಸಣೆ ಮಾಡಬೇಕಿದ್ದು, ಇತ್ತೀಚೆಗೆ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದ ನಂತರ ಭದ್ರತಾ ಕ್ರಮಗಳಕ್ಕೆ ಒತ್ತು ನೀಡಲಾಗುತ್ತಿದೆ. ವಿಮಾನಯಾನ ಸಂಸ್ಥೆಗಳು ಈ ಆದೇಶವನ್ನು ಗಂಭೀರವಾಗಿ ಪರಿಗಣಿಸಿ, ಪ್ರಯಾಣಿಕರ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.
ಇಂಧನ ನಿಯಂತ್ರಣ ಸ್ವಿಚ್ ಲಾಕಿಂಗ್ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸುವ ಸಾಧ್ಯತೆಯ ಕುರಿತು 2018ರಲ್ಲಿ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಆದೇಶ ಹೊರಡಿಸಲಾಗಿದ್ದು, ಇದು ಸುಮಾರು 26 ವಿಭಿನ್ನ ಬೋಯಿಂಗ್ ಮಾದರಿಗಳ ಮೇಲೆ ಪರಿಣಾಮ ಬೀರುತ್ತದೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಸ್ಪೈಸ್ಜೆಟ್ನ ಸುಮಾರು 100 ವಿಮಾನಗಳನ್ನು ಪರಿಶೀಲಿಸಬೇಕಾಗುತ್ತದೆ.
2018ರ SAIB NM-18-33ರ ಪ್ರಕಾರ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿರ್ವಾಹಕರು ತಮ್ಮ ವಿಮಾನಗಳ ಫ್ಲೀಟ್ನಲ್ಲಿ ತಪಾಸಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಡಿಜಿಸಿಎ ಗಮನಕ್ಕೆ ಬಂದಿದೆ. ಈ ದೃಷ್ಟಿಯಿಂದ ಪರಿಣಾಮ ಬೀರಿದ ವಿಮಾನಗಳ ಎಲ್ಲ ವಿಮಾನಯಾನ ನಿರ್ವಾಹಕರು ಅಗತ್ಯವಿರುವ ತಪಾಸಣೆಯನ್ನು ಜುಲೈ 21ರೊಳಗೆ ಪೂರ್ಣಗೊಳಿಸಲು ಇಲ್ಲಿ ಸೂಚಿಸಲಾಗಿದೆ ಎಂದು ಡಿಜಿಸಿಎ ಆದೇಶದಲ್ಲಿ ತಿಳಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications