ಕಣ್ಣೀರಲ್ಲಿ ತಾರಿಷಿ ಕುಟುಂಬ, ಇಂಥ ನೋವಿಗೆ ಕೊನೆ ಯಾವಾಗ?
ನವದೆಹಲಿ, ಜುಲೈ, 05: ಢಾಕಾದಲ್ಲಿ ನಡೆದ ಉಗ್ರರ ದಾಳಿಗೆ ಇಡೀ ಪ್ರಪಂಚವೆ ಮರುಗಿದೆ. ಭಾರತದ ತಾರಿಷಿ ಜೈನ್ ಪಾರ್ಥೀವ ಶರೀರ ದೆಹಲಿಗೆ ಆಗಮಿಸಿದ ವೇಳೆ ಕುಟುಂಬದವರ ರೋದನ ಹೇಳ ತೀರದಾಗಿತ್ತು.
ದಾಳಿಯಲ್ಲಿ ಅನ್ಯಾಯವಾಗಿ ಪ್ರಾಣ ಕಳೆದುಕೊಂಡವರಿಗೆ ಇಡೀ ಜಗತ್ತು ಶ್ರದ್ಧಾಂಜಲಿ ಸಲ್ಲಿಕೆ ಮಾಡಿದೆ. ದಾಳಿಯಲ್ಲಿ ಮೃತಪಟ್ಟ ಭಾರತೀಯ ಯುವತಿ ತಾರಿಷಿ ಜೈನ್ ಅವರ ಪಾರ್ಥಿವ ಶರೀರ ಸೋಮವಾರ ಭಾರತಕ್ಕೆ ಬಂದಿದ್ದು ಉತ್ತರಪ್ರದೇಶದ ಫಿರೋಜಾಬಾದ್ನಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.[ಬಾಂಗ್ಲಾ ದಾಳಿ: ಸ್ನೇಹಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುಸೇನ್]

ತಾರಿಷಿ ಜೈನ್ ಕುಟುಂಬದವರ ನೋವನ್ನು ಶಬ್ದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಜೈನ್ ಹತ್ಯೆಗೆ ಭೋಪಾಲ್ ನಲ್ಲಿ ಮುಸ್ಲಿಂ ಸಮುದಾಯದವರು ಶ್ರದ್ಧಾಂಜಲಿ ಸಲ್ಲಿಕೆ ಮಾಡಿದರು.[ಐಎಸ್ಐಎಸ್ ಅಟ್ಟಹಾಸ: ಕತ್ತು ಕೊಯ್ದು 20 ವಿದೇಶಿಗರ ಹತ್ಯೆ]

ಢಾಕಾದ ಆರ್ಟಿಸನ್ ಬೇಕರಿ ರೆಸ್ಟೋರೆಂಟ್ ಮೇಲೆ ಜುಲೈ 1 ರ ರಾತ್ರಿ ಏಕಾಏಕಿ ದಾಳಿ ಮಾಡಿದ ಉಗ್ರರು ಅನೇಕರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದರು.

ತಕ್ಷಣ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾ ಪಡೆ ಯೋಧರು ಜುಲೈ ಮಧ್ಯಾಹ್ನದವರೆಗೂ ಹರಸಹಾಸ ಮಾಡಿ ಉಗ್ರರ ಅಟ್ಟಹಾಸ ಅಡಗಿಸಿದ್ದವು. ಆದರೆ ಇಷ್ಟರಲ್ಲಿಯೇ ಉಗ್ರರು ಅಮಾಯಕರನ್ನು ಹತ್ಯೆ ಮಾಡಿದ್ದರು.[ಸೌದಿ ಅರೆಬೀಯಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ]

ರಂಜಾನ್ ತಿಂಗಳಲ್ಲಿಯೇ ಉಗ್ರರ ಅಟ್ಟಹಾಸ ಮಿತಿಮೀರಿದೆ. ಢಾಕಾದಲ್ಲಿ ದಾಳಿ ಮಾಡಿ 20 ಜನರ ಹತ್ಯೆ, ಬಾಗ್ದಾದ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, ಅಮೆರಿಕ ನೈಟ್ ಕ್ಲಬ್ ಮೇಲೆ ದಾಳಿ.. ಮತ್ತೆ ನೋವಿನ ಸರಣಿಯನ್ನು ನೆನಪು ಮಾಡಿಕೊಳ್ಳುವುದರಲ್ಲಿ ಅರ್ಥ ಇಲ್ಲ.

ಉಗ್ರರ ದಮನಕ್ಕೆ ಎಲ್ಲ ದೇಶಗಳು ಒಂದಾಗಿದ್ದರೂ ಹುಟ್ಟು ಅಡಗಿಸಲು ಸಾಧ್ಯವಾಗಿಲ್ಲ. ಇಡೀ ಪ್ರಪಂಚ ಕೇಳುತ್ತಿರುವ ಪ್ರಶ್ನೆ ಮಾತ್ರ ಒಂದೆ, ಇಂಥ ಅಟ್ಟಹಾಸಕ್ಕೆ ಕೊನೆ ಯಾವಾಗ?

-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications