ಜಗತ್ತಿನ ಇಂದಿನ ಸಮಸ್ಯೆಗಳಿಗೆ ಬುದ್ಧನ ತತ್ವವೇ ಪರಿಹಾರ: ಮೋದಿ
ನವದೆಹಲಿ, ಜುಲೈ 4: ಜಗತ್ತಿನ ಇಂದಿನ ಸಮಸ್ಯೆಗಳಿಗೆ ಬುದ್ಧನ ತತ್ವವೇ ಪರಿಹಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Recommended Video
ಪ್ರಧಾನಿ ನರೇಂದ್ರ ಮೋದಿ ಅವರು ಇಂಟರ್ನ್ಯಾಷನಲ್ ಬುದ್ಧಿಸ್ಟ್ ಕಾನ್ಫರೆನ್ಸ್ ಆಯೋಜಿಸಿರುವ ಧರ್ಮಚಕ್ರ ದಿವಸ್ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿದರು. ಬುದ್ಧನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯುವ ಜನತೆಯಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದರು.
ಆಷಾಢ ಪೂರ್ಣಿಮೆ ದಿನದ ನಿಮಿತ್ತ ಆಯೋಜಿಸಿರುವ ವರ್ಚುವಲ್ ಕಾರ್ಯಕ್ರಮವಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೂ ಕೂಡ ಪಾಲ್ಗೊಂಡಿದ್ದರು.

ಮೋದಿ ಮಾತು: ಎಲ್ಲರಿಗೂ ಆಷಾಢ ಪೂರ್ಣಿಮೆಯ ದಿನದ ಶುಭಾಶಯಗಳು ಎಂದು ಹೇಳುತ್ತಾ ಮಾತು ಆರಂಭಿಸಿದರು.
ಈ ದಿನವನ್ನು ಗುರುಪೂರ್ಣಿಮೆ ಎಂದೂ ಹೇಳುತ್ತಾರೆ. ಈ ದಿನ ನಮಗೆ ತಿಳಿವಳಿಕೆಯನ್ನು ನೀಡುವ ಗುರುಗಳನ್ನು ಸ್ಮರಿಸುವ ದಿವಸ. ಈ ದೃಷ್ಟಿಯಿಂದಲೇ ನಾವು ಇವತ್ತು ಭಗವಾನ್ ಬುದ್ಧನಿಗೂ ಗೌರವ ನಮನ ಸಲ್ಲಿಸುತ್ತಿದ್ದೇವೆ.
ಭಗವಾನ್ ಬುದ್ಧನ ತತ್ತ್ವಾದರ್ಶಗಳು ಅನೇಕ ಸಮುದಾಯಗಳ ಮತ್ತು ರಾಷ್ಟ್ರಗಳ ಏಳಿಗೆಗೆ ದಾರಿ ತೋರಿಸಿವೆ. ಕರುಣೆ ಮತ್ತು ಸಹಾನುಭೂತಿಯ ಮಹತ್ವವನ್ನು ಇವುಗಳು ಸಾರುತ್ತವೆ. ಭಗವಾನ್ ಬುದ್ಧನ ಸರಳತೆ ಚಿಂತನೆಯಲ್ಲೂ ಮತ್ತು ಕ್ರಿಯೆಯಲ್ಲೂ ಅನುಷ್ಠಾನಗೊಂಡಿವೆ ಎಂದು ಹೇಳಿದರು.
ಇಂದು ಜಗತ್ತು ಕಂಡು ಕೇಳಿ ಅರಿಯದ ಸವಾಲುಗಳನ್ನು ಎದುರಿಸುತ್ತಿದೆ. ಈ ಸವಾಲುಗಳಿಗೆ ಪರಿಹಾರವು ಭಗವಾನ್ ಬುದ್ಧ ಅವರ ತತ್ತ್ವಾದರ್ಶಗಳಿಂದಲೇ ಸಿಗಬಹುದು. ಹಿಂದಿನ ಕಾಲದಲ್ಲಿ ಅವುಗಳು ಸಕಾಲಿಕವಾಗಿದ್ದವು. ಈಗಲೂ ಸಕಾಲಿಕವೇ ಆಗಿವೆ. ಭವಿಷ್ಯದಲ್ಲೂ ಈ ಚಿಂತನೆಗಳು ಸಕಾಲಿಕವಾಗಿಯೇ ಉಳಿಯಲಿವೆ.
ಸಾರಾನಾಥದ ರೂಪಪಟನಾದ ಜಿಂಕೆ ಉದ್ಯಾನದಲ್ಲಿ ತನ್ನ ಐವರು ಶಿಷ್ಯಂದಿರಿಗೆ ಭಗವಾನ್ ಬುದ್ಧ ಮೊದಲ ಬಾರಿ ಧರ್ಮೋಪದೇಶ ಮಾಡಿದ ದಿನ ಆಷಾಢ ಹುಣ್ಣಿಮೆ. ಈ ದಿನವನ್ನು ಸ್ಮರಿಸುವ ಸಲುವಾಗಿ ಧರ್ಮ ಚಕ್ರ ದಿವಸ್ ಆಚರಣೆ ಮಾಡಲಾಗುತ್ತಿದೆ. ಈ ದಿನವನ್ನು ಬೌದ್ಧರು ಮತ್ತು ಹಿಂದುಗಳು ಗುರುಪೂರ್ಣಿಮೆ ಎಂದು ಜಗತ್ತಿನಾದ್ಯಂತ ಆಚರಿಸುತ್ತಾರೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications