ಹೃದಯಾಘಾತದಿಂದ ಖ್ಯಾತ ಸಿನಿಮಾ ನಿರ್ದೇಶಕ ಸಾವು
ಹಿಂದಿ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ 'ಧೂಮ್' ನಿರ್ದೇಶಕ ಸಂಜಯ್ ಗಧ್ವಿ ಭಾನುವಾರ ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ಅವರ ಹಿರಿಯ ಪುತ್ರಿ ಸಂಜಿನಾ ಹೇಳಿದ್ದಾರೆ.
ಸಂಜಯ್ ಗಧ್ವಿ ಅವರಿಗೆ 56 ವರ್ಷ ವರ್ಷ ವಯಸ್ಸಾಗಿತ್ತು, ತಮ್ಮ 57 ನೇ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಇನ್ನೂ ಮೂರು ದಿನ ಇದ್ದಾಗಲೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಪ್ರಮುಖ ನಿರ್ಮಾಣ ಕಂಪನಿ ಯಶ್ ರಾಜ್ ಫಿಲ್ಮ್ಸ್ನ "ಧೂಮ್" ಫ್ರ್ಯಾಂಚೈಸ್ನಲ್ಲಿ ಎರಡು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿದ ನಂತರ ಜನಪ್ರಿಯರಾಗಿದ್ದರು.

2004ರಲ್ಲಿ ಬಿಡುಗಡೆಯಾದ ಧೂಮ್ ಮತ್ತು 2006ರಲ್ಲಿ ಬಿಡುಗಡೆಯಾದ ಧೂಮ್ -2 ಚಿತ್ರವನ್ನು ಸಂಜಯ್ ಗಧ್ವಿ ನಿರ್ದೇಶಿಸಿದ್ದರು. ಈ ಎರಡು ಚಿತ್ರಗಳು ಹಿಂದಿ ಚಿತ್ರರಂಗದ ಸೂಪರ್ ಹಿಟ್ ಚಿತ್ರಗಳಾಗಿವೆ.
ಸಂಜಯ್ ಗಧ್ವಿ ಮಗಳು ನೀಡಿರುವ ಮಾಹಿತಿಯ ಪ್ರಕಾರ, ಅವರು ಸಂಪೂರ್ಣ ಆರೋಗ್ಯವಾಗಿದ್ದರು, ಯಾವುದೇ ಕಾಯಿಲೆಯ ಮುನ್ಸೂಚನೆ ಇರಲಿಲ್ಲ ಎಂದು ವರದಿಯಾಗಿದೆ.
"ಭಾನುವಾರ ಬೆಳಿಗ್ಗೆ 9.30 ಕ್ಕೆ ಅವರ ನಿವಾಸದಲ್ಲಿ ನಿಧನರಾದರು. ಅದು ಏನೆಂದು ನಮಗೆ ಖಚಿತವಾಗಿಲ್ಲ, ಆದರೆ ಇದು ಹೃದಯಾಘಾತವಾಗಿದೆ. ಅವರು ಅಸ್ವಸ್ಥರಾಗಿರಲಿಲ್ಲ, ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರು" ಎಂದು ಗಧ್ವಿ ಅವರ ಪುತ್ರಿ ಸಂಜಿನಾ ಪಿಟಿಐಗೆ ತಿಳಿಸಿದ್ದಾರೆ.
ಗಾಧ್ವಿ 2000 ರಲ್ಲಿ "ತೇರೆ ಲಿಯೆ" ಚಿತ್ರದ ಮೂಲದ ಹಿಂದಿ ಚಿತ್ರರಂಗಕ್ಕೆ ಪ್ರವೇಶ ಮಾಡಿದರು, ನಂತರ 2002 ರ "ಮೇರೆ ಯಾರ್ ಕಿ ಶಾದಿ ಹೈ", ಸಿನಿಮಾ ಮೂಲಕ ಯಶ್ ರಾಜ್ ಫಿಲ್ಮ್ಸ್ ಅವರ ಜೊತೆ ಕೆಲಸ ಮಾಡಿದ್ದರು. ಸಂಜಿನಿ ಅಲ್ಲದೆ, ಗಾಧ್ವಿ ಅವರು ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಅಗಲಿದ್ದಾರೆ.
ಖ್ಯಾತ ನಿರ್ದೇಶನ ಸಾವಿಗೆ ಹಿಂದಿ ಚಿತ್ರರಂಗ ಕಂಬನಿ ಮಿಡಿದಿದೆ. ಯಶ್ರಾಜ್ ಫಿಲಮ್ಸ್ ಕೂಡ ಗಧ್ವಿ ಸಾವಿಗೆ ಆಘಾತ ವ್ಯಕ್ತಪಡಿಸಿದ್ದು, ಹಿಂದಿ ಚಿತ್ರರಂಗ ಅತ್ಯುತ್ತಮ ನಿರ್ದೇಶಕನನ್ನು ಕಳೆದುಕೊಂಡಿದೆ ಎಂದು ಹೇಳಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications