ಧೂಮ್ ಕಳ್ಳರ ಬೈಕ್ ಓಡಿದ್ದು ಮೂರೇ ದಿನ
ಹರ್ಯಾಣ, ಅ. 31 : ಸಿನಿಮೀಯ ರೀತಿಯಲ್ಲಿ 125 ಅಡಿ ದೂರದ ಸುರಂಗ ಕೊರೆದು ಹರ್ಯಾಣದ ಪಂಜಾಬ್ ನ್ಯಾಷನಲ್ ಬ್ಯಾಂಕ್ ದರೋಡೆ ಮಾಡಿದ್ದ ಚಾಣಾಕ್ಷ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದು ಪ್ರಮುಖ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಧೂಮ್ ಚಿತ್ರದ ರೀತಿಯಲ್ಲಿ ಅಪಾರ ಬಂಗಾರ ಮತ್ತು ಹಣ ದೋಚಿ ಪಲಾಯನವಾಗಿದ್ದ ಉಳಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆ ನಡೆದು ಮೂರು ದಿನಗಳ ಅವಧಿಯಲ್ಲಿ ಪ್ರಕರಣ ಭೇದಿಸಲಾಗಿದೆ. ಬಂಧಿತರಿಂದ 39 ಕೆಜಿ ಚಿನ್ನ ಮತ್ತು 60 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.[ಹರ್ಯಾಣದಲ್ಲಿ ಧೂಮ್ ಚಿತ್ರ ಪ್ರೇರಣೆಯಿಂದ ಕಳ್ಳತನ]

ಪ್ರಕರಣದ ಮಾಸ್ಟರ್ ಮೈಂಡ್, ಮಹಿಲಾಪ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಮನೆಯಿಂದಲೇ ಸುರಂಗ ತೋಡಲಾಗಿತ್ತು. ಉಳಿದಂತೆ ಪ್ರಯೋಗಾಲಯದ ಸಹಾಯಕ ಸುರೇಂದರ್, ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ಮತ್ತು ರೈತರಾದ ಬಾಲರಾಜ್ ಮತ್ತು ರಾಜೇಶ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. [ಆಟೊವನ್ನೇ ದರೋಡೆ ಅಡ್ಡೆ ಮಾಡಿಕೊಂಡಿದ್ದರು]
ದರೋಡೆಕೋರರು ನಿರಂತರವಾಗಿ ಸುಮಾರು 40 ದಿನಗಳ ಕಾಲ ಸುರಂಗ ತೋಡಿ ಬ್ಯಾಂಕ್ ಪ್ರವೇಶಿಸಿದ್ದರು. ಘಟನೆ ನಡೆದ ನಂತರ ಮಾಸ್ಟರ್ ಮೈಂಡ್ ಮಹಿಪಾಲ್ ಹೆದ್ದಾರಿ ಪಕ್ಕ ತನ್ನ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗೆಯಲ್ಲಿ ಬ್ಯಾಂಕ್ ದರೋಡೆ ಮಾಡಬಹುದು ಎಂದು ಉಳಿದವರಿಗೆ ತಿಳಿಸಿದ್ದವ ಈತನೇ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications