ಧೂಮ್ ಕಳ್ಳರ ಬೈಕ್ ಓಡಿದ್ದು ಮೂರೇ ದಿನ
ಹರ್ಯಾಣ, ಅ. 31 : ಸಿನಿಮೀಯ ರೀತಿಯಲ್ಲಿ 125 ಅಡಿ ದೂರದ ಸುರಂಗ ಕೊರೆದು ಹರ್ಯಾಣದ ಪಂಜಾಬ್ ನ್ಯಾಷನಲ್ ಬ್ಯಾಂಕ್ ದರೋಡೆ ಮಾಡಿದ್ದ ಚಾಣಾಕ್ಷ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದು ಪ್ರಮುಖ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಧೂಮ್ ಚಿತ್ರದ ರೀತಿಯಲ್ಲಿ ಅಪಾರ ಬಂಗಾರ ಮತ್ತು ಹಣ ದೋಚಿ ಪಲಾಯನವಾಗಿದ್ದ ಉಳಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆ ನಡೆದು ಮೂರು ದಿನಗಳ ಅವಧಿಯಲ್ಲಿ ಪ್ರಕರಣ ಭೇದಿಸಲಾಗಿದೆ. ಬಂಧಿತರಿಂದ 39 ಕೆಜಿ ಚಿನ್ನ ಮತ್ತು 60 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.[ಹರ್ಯಾಣದಲ್ಲಿ ಧೂಮ್ ಚಿತ್ರ ಪ್ರೇರಣೆಯಿಂದ ಕಳ್ಳತನ]

ಪ್ರಕರಣದ ಮಾಸ್ಟರ್ ಮೈಂಡ್, ಮಹಿಲಾಪ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನ ಮನೆಯಿಂದಲೇ ಸುರಂಗ ತೋಡಲಾಗಿತ್ತು. ಉಳಿದಂತೆ ಪ್ರಯೋಗಾಲಯದ ಸಹಾಯಕ ಸುರೇಂದರ್, ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ಮತ್ತು ರೈತರಾದ ಬಾಲರಾಜ್ ಮತ್ತು ರಾಜೇಶ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. [ಆಟೊವನ್ನೇ ದರೋಡೆ ಅಡ್ಡೆ ಮಾಡಿಕೊಂಡಿದ್ದರು]
ದರೋಡೆಕೋರರು ನಿರಂತರವಾಗಿ ಸುಮಾರು 40 ದಿನಗಳ ಕಾಲ ಸುರಂಗ ತೋಡಿ ಬ್ಯಾಂಕ್ ಪ್ರವೇಶಿಸಿದ್ದರು. ಘಟನೆ ನಡೆದ ನಂತರ ಮಾಸ್ಟರ್ ಮೈಂಡ್ ಮಹಿಪಾಲ್ ಹೆದ್ದಾರಿ ಪಕ್ಕ ತನ್ನ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗೆಯಲ್ಲಿ ಬ್ಯಾಂಕ್ ದರೋಡೆ ಮಾಡಬಹುದು ಎಂದು ಉಳಿದವರಿಗೆ ತಿಳಿಸಿದ್ದವ ಈತನೇ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications