ವಿಪ್ಲವ್ ನನ್ನ ಚರ್ಮ ನೋಡಿ ಮಾತನಾಡಿದ್ದಾರೆ: ಡಯಾನಾ ಹೆಡನ್
ನವದೆಹಲಿ, ಏಪ್ರಿಲ್ 27: "ನಿಜವಾದ ಭಾರತ ನಾರಿ ಐಶ್ವರ್ಯ ರೈ, ಡಯಾನಾ ಹೆಡನ್ ಅಲ್ಲ" ಎನ್ನುವ ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದ ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ದೇವ್ ಗೆ ಡಯನಾ ಹೆಡನ್ ಪ್ರತ್ಯುತ್ತರ ನೀಡಿದ್ದಾರೆ.
"ನಾನು ಚಿಕ್ಕ ವಯಸ್ಸಿನಿಂದಲೂ ನನ್ನ ಚರ್ಮದ ಬಣ್ಣದಿಂದಾಗಿ ಇಂಥ ಮಾತುಗಳನ್ನು ಕೇಳುತ್ತಲೇ ಬಂದಿದ್ದೇನೆ. ಆದರೂ ನಾನು ಗೆದ್ದಿದ್ದೇನೆ. ಸಾಧನೆಯನ್ನು ನೋಡಿ ಜನರು ಹೆಮ್ಮೆ ಪಡೆಬೇಕು, ಅದನ್ನು ಟೀಕಿಸುವುದಲ್ಲ. ನಾನು ಕಂದು ಚರ್ಮದ ಹೆಮ್ಮೆಯ ಭಾರತೀಯ ನಾರಿ. ನನಗೆ ಬೇಸರವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಒಂದು ಘನತೆ ಇದೆ. ಅವರು ಆಡುವ ಮಾತಿನ ಬಗ್ಗೆ ಎಚ್ಚರಿಕೆ ಇರಲಿ" ಎಂದು ಅವರು ನೇರಾನೇರವಾಗಿ ದಿಟ್ಟ ಪ್ರತಿಕ್ರಿಯೆ ನೀಡಿದ್ದಾರೆ.
1997 ರಲ್ಲಿ ವಿಶ್ವಸುಂದರಿ ಪ್ರಶಸ್ತಿ ಗೆದ್ದ ಕೃಷ್ಣ ಸುಂದರಿ ಡಯಾನಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ದೇವ್, 'ಅವರು ವಿಶ್ವ ಸುಂದಿರಿ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದರು. ನಿಜವಾದ ಭಾರತೀಯ ನಾರಿ ಎಂದರೆ ಅದು ಐಶ್ವರ್ಯ ರೈ' ಎಂದಿದ್ದರು.

ಇಜತ್ತೀಚೆಗಷ್ಟೇ, ಮಹಾಭಾರತ ಕಾಲದಿಂದಲೂ ಅಂತರ್ಜಾಲ ಸೌಲಭ್ಯಗಳಿದ್ದವು ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದ ಅವರು ಇದೀಗ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ತ್ರಿಪುರ ರಾಜ್ಯದ ಮೊಟ್ಟ ಮೊದಲ ಬಿಜೆಪಿ ಮುಖ್ಯಮಂತ್ರಿ ಎಮಬ ಹೆಗ್ಗಳಿಕೆ ಪಡೆದ ಅವರು ಸಾಕಷ್ಟು ಸಮಸ್ಯೆಗಳನ್ನು ಹೊಂದಿರುವ ತ್ರಿಪುರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸುವುದು ಬಿಟ್ಟ ಇಂಥ ವಿಷಯಗಳ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸುತ್ತಿರುವುದೇಕೆ ಎಂಬುದು ಹಲವರ ಪ್ರಶ್ನೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications